<p><strong>ಬಾಗೇಪಲ್ಲಿ</strong>: ಹಮಾಲಿ ಸದಸ್ಯರಿಗೆ ಪಡಿತರ ಚೀಟಿ, ಮನೆ, ನಿವೇಶನ, ಕಲ್ಯಾಣ ನಿಧಿಯ ಆದಾಯದ ಶೇ 10ರಷ್ಟು ಹಣ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಕಾರ್ಯಕರ್ತರು ಗುರುವಾರ ಪಟ್ಟಣದ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.<br /> <br /> ಪಟ್ಟಣದ ಎಚ್.ಎನ್.ವೃತ್ತದಿಂದ ಹೊರಟ ಹಮಾಲಿ ಸದಸ್ಯರು ಮುಖ್ಯರಸ್ತೆಗಳಲ್ಲಿ ಸಂಚರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ನಂತರ ಬಸ್ ನಿಲ್ದಾಣದ ಮುಂದೆ ಜಮಾಯಿಸಿ ಟೆಂಪೋಗಳಲ್ಲಿ `ವಿಧಾನಸೌಧ ಚಲೋ' ಕಾರ್ಯಕ್ರಮ ಪ್ರಯುಕ್ತ ಬೆಂಗಳೂರಿಗೆ ಪ್ರಯಾಣಿಸಿದರು.<br /> <br /> ಸಿಐಟಿಯು ತಾಲ್ಲೂಕು ಉಪಾಧ್ಯಕ್ಷ ಆಂಜನೇಯರೆಡ್ಡಿ ಮಾತನಾಡಿ `ಕಾರ್ಮಿಕರ ಭದ್ರತಾ ಮಂಡಳಿ ಮೂಲಕ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆ ಹಮಾಲಿಯವರಿಗೆ ವಿಸ್ತರಿಸಬೇಕು. ಚಿಲ್ಲರೆ ವ್ಯಾಪಾರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ನೀಡಬಾರದು. ಈಗಾಗಲೇ ಚಿಲ್ಲರೆ ವ್ಯಾಪಾರಿಗಳ ಬದುಕು ಅತಂತ್ರವಾಗಿದೆ . ಕಾರ್ಮಿಕರ ಪರ ಸರ್ಕಾರ ಯೋಚಿಸಬೇಕು ಎಂದು ಆಗ್ರಹಿಸಿದರು.<br /> <br /> `55 ವರ್ಷ ಮೀರಿದ ಹಮಾಲಿಗಳಿೆ ಪಿಂಚಣಿ ಕಲ್ಪಿಸಬೇಕು. ಬೆಲೆ ಏರಿಕೆ ಆಧಾರದಲ್ಲಿ ಹಮಾಲಿ ಕಾರ್ಮಿಕರಿಗೆ ನಿಗದಿತ ವೇತನ ನೀಡಬೇಕು ಎಂದು ಒತ್ತಾಯ ಮಾಡಿದರು.<br /> <br /> ಕಡಿಮೆ ವೇತನದಲ್ಲಿ ಜೀವನ ನಡೆಸುವುದು ಕಷ್ಟಕರವಾಗಿದೆ. ಉದ್ಯೋಗ ಭದ್ರತೆ ಇಲ್ಲದೆ ಅತಂತ್ರದಲ್ಲಿ ಜೀವನ ಸಾಗಿಸಬೇಕಾಗಿದೆ. ಸರ್ಕಾರ ಇದರ ಬಗ್ಗೆ ಗಂಭೀರವಾಗಿ ಚಿಂತಿಸಬೇಕು ಎಂದು ಒತ್ತಾಯಿಸಿದರು.<br /> <br /> ಸಿಐಟಿಯು ತಾಲ್ಲೂಕು ಮುಖಂಡ ಮುಸ್ತಾಫ, ತಾಲ್ಲೂಕು ಹಮಾಲಿ ಸಂಘದ ಅಧ್ಯಕ್ಷ ವೆಂಕಟೇಶಪ್ಪ, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಶಂಕರರಪ್ಪ, ಶ್ರೀನಿವಾಸ್, ವೆಂಕಟೇಶಪ್ಪ ಮತ್ತಿತರರು ಪ್ರತಿಭಟನಾ ಮೆರವಣಿಗೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ</strong>: ಹಮಾಲಿ ಸದಸ್ಯರಿಗೆ ಪಡಿತರ ಚೀಟಿ, ಮನೆ, ನಿವೇಶನ, ಕಲ್ಯಾಣ ನಿಧಿಯ ಆದಾಯದ ಶೇ 10ರಷ್ಟು ಹಣ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಕಾರ್ಯಕರ್ತರು ಗುರುವಾರ ಪಟ್ಟಣದ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.<br /> <br /> ಪಟ್ಟಣದ ಎಚ್.ಎನ್.ವೃತ್ತದಿಂದ ಹೊರಟ ಹಮಾಲಿ ಸದಸ್ಯರು ಮುಖ್ಯರಸ್ತೆಗಳಲ್ಲಿ ಸಂಚರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ನಂತರ ಬಸ್ ನಿಲ್ದಾಣದ ಮುಂದೆ ಜಮಾಯಿಸಿ ಟೆಂಪೋಗಳಲ್ಲಿ `ವಿಧಾನಸೌಧ ಚಲೋ' ಕಾರ್ಯಕ್ರಮ ಪ್ರಯುಕ್ತ ಬೆಂಗಳೂರಿಗೆ ಪ್ರಯಾಣಿಸಿದರು.<br /> <br /> ಸಿಐಟಿಯು ತಾಲ್ಲೂಕು ಉಪಾಧ್ಯಕ್ಷ ಆಂಜನೇಯರೆಡ್ಡಿ ಮಾತನಾಡಿ `ಕಾರ್ಮಿಕರ ಭದ್ರತಾ ಮಂಡಳಿ ಮೂಲಕ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆ ಹಮಾಲಿಯವರಿಗೆ ವಿಸ್ತರಿಸಬೇಕು. ಚಿಲ್ಲರೆ ವ್ಯಾಪಾರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ನೀಡಬಾರದು. ಈಗಾಗಲೇ ಚಿಲ್ಲರೆ ವ್ಯಾಪಾರಿಗಳ ಬದುಕು ಅತಂತ್ರವಾಗಿದೆ . ಕಾರ್ಮಿಕರ ಪರ ಸರ್ಕಾರ ಯೋಚಿಸಬೇಕು ಎಂದು ಆಗ್ರಹಿಸಿದರು.<br /> <br /> `55 ವರ್ಷ ಮೀರಿದ ಹಮಾಲಿಗಳಿೆ ಪಿಂಚಣಿ ಕಲ್ಪಿಸಬೇಕು. ಬೆಲೆ ಏರಿಕೆ ಆಧಾರದಲ್ಲಿ ಹಮಾಲಿ ಕಾರ್ಮಿಕರಿಗೆ ನಿಗದಿತ ವೇತನ ನೀಡಬೇಕು ಎಂದು ಒತ್ತಾಯ ಮಾಡಿದರು.<br /> <br /> ಕಡಿಮೆ ವೇತನದಲ್ಲಿ ಜೀವನ ನಡೆಸುವುದು ಕಷ್ಟಕರವಾಗಿದೆ. ಉದ್ಯೋಗ ಭದ್ರತೆ ಇಲ್ಲದೆ ಅತಂತ್ರದಲ್ಲಿ ಜೀವನ ಸಾಗಿಸಬೇಕಾಗಿದೆ. ಸರ್ಕಾರ ಇದರ ಬಗ್ಗೆ ಗಂಭೀರವಾಗಿ ಚಿಂತಿಸಬೇಕು ಎಂದು ಒತ್ತಾಯಿಸಿದರು.<br /> <br /> ಸಿಐಟಿಯು ತಾಲ್ಲೂಕು ಮುಖಂಡ ಮುಸ್ತಾಫ, ತಾಲ್ಲೂಕು ಹಮಾಲಿ ಸಂಘದ ಅಧ್ಯಕ್ಷ ವೆಂಕಟೇಶಪ್ಪ, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಶಂಕರರಪ್ಪ, ಶ್ರೀನಿವಾಸ್, ವೆಂಕಟೇಶಪ್ಪ ಮತ್ತಿತರರು ಪ್ರತಿಭಟನಾ ಮೆರವಣಿಗೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>