<p><strong>ಹೊಸದುರ್ಗ:</strong> ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಟ್ಟಣದಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.<br /> <br /> ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಾಜದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡುತ್ತಿದೆ. ಈ ಯೋಜನೆಯಲ್ಲಿ ಕೆಲಸ ಮಾಡುವ ಸುಮಾರು 1,08,520ಕ್ಕೂ ಹೆಚ್ಚು ಅಂಗನವಾಡಿ ಕಾರ್ಯ ಕರ್ತೆಯರು ಮತ್ತು ಸಹಾಯಕಿಯರು ಫಲಾನುಭವಿಗಳಾದ ಮಕ್ಕಳ ಮತ್ತು ತಾಯಂದಿರ ಪೋಷಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ನಮ್ಮ ಬೇಡಿಕೆ ಮಾತ್ರ ಈಡೇರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಜೀವನಕ್ಕೆ ಬೇಕಾದ ಆಹಾರ ಧಾನ್ಯಗಳು, ಸೀಮೆಎಣ್ಣೆ, ಗ್ಯಾಸ್ ಸಿಲಿಂಡರ್, ಹಾಲಿನ ವೆಚ್ಚ, ವಿದ್ಯುತ್ ವೆಚ್ಚ, ಬಸ್ ಪ್ರಯಾಣ ದರ, ಮನೆ ಬಾಡಿಗೆ ದುಬಾರಿಯಾಗಿವೆ. ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ನೊಂದು ನುಡಿದರು. <br /> ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನದಲ್ಲಿ ಯಾವುದೇ ಬದಲಾವಣೆ ಆಗದೇ ಇರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ದೂರಿದರು.<br /> <br /> 2ರಿಂದ 3 ದಶಕಗಳ ಕಾಲ ಸೇವೆ ಸಲ್ಲಿಸಿರುವವರಿಗೆ ಸೇವಾ ಹಿರಿತನದ ಮೇಲೆ ಪ್ರತಿ ವರ್ಷಕ್ಕೆ ರೂ 200ರಂತೆ ಒಟ್ಟು ಸಲ್ಲಿಸಿರುವ ಸೇವಾವಧಿಗೆ ಗ್ರಾಚ್ಯುಟಿ ಹಣ ಸೇರಿದಂತೆ ಇತರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.<br /> <br /> ತಹಶೀಲ್ದಾರ್ ಕೆ.ಏಕೇಶ್ ಬಾಬುಗೆ ಮನವಿ ಸಲ್ಲಿಸಿದರು.<br /> <br /> ರಾಜ್ಯ ಅಂಗನವಾಡಿ ಎಐಟಿಸಿ ಫೆಡರೇಷನ್ ಅಧ್ಯಕ್ಷ ಎಚ್.ಕೆ.ರಾಮಚಂದ್ರಪ್ಪ ಹಾಗೂ ಸಂಚಾಲಕ ಕೆ.ಎಂ. ರಮೇಶ್ ಹಾಗೂ ತಾಲ್ಲೂಕಿನ ಅನೇಕ ಅಂಗನವಾಡಿ ಕಾರ್ಯ ಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ:</strong> ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಟ್ಟಣದಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.<br /> <br /> ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಾಜದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡುತ್ತಿದೆ. ಈ ಯೋಜನೆಯಲ್ಲಿ ಕೆಲಸ ಮಾಡುವ ಸುಮಾರು 1,08,520ಕ್ಕೂ ಹೆಚ್ಚು ಅಂಗನವಾಡಿ ಕಾರ್ಯ ಕರ್ತೆಯರು ಮತ್ತು ಸಹಾಯಕಿಯರು ಫಲಾನುಭವಿಗಳಾದ ಮಕ್ಕಳ ಮತ್ತು ತಾಯಂದಿರ ಪೋಷಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ನಮ್ಮ ಬೇಡಿಕೆ ಮಾತ್ರ ಈಡೇರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಜೀವನಕ್ಕೆ ಬೇಕಾದ ಆಹಾರ ಧಾನ್ಯಗಳು, ಸೀಮೆಎಣ್ಣೆ, ಗ್ಯಾಸ್ ಸಿಲಿಂಡರ್, ಹಾಲಿನ ವೆಚ್ಚ, ವಿದ್ಯುತ್ ವೆಚ್ಚ, ಬಸ್ ಪ್ರಯಾಣ ದರ, ಮನೆ ಬಾಡಿಗೆ ದುಬಾರಿಯಾಗಿವೆ. ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ನೊಂದು ನುಡಿದರು. <br /> ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನದಲ್ಲಿ ಯಾವುದೇ ಬದಲಾವಣೆ ಆಗದೇ ಇರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ದೂರಿದರು.<br /> <br /> 2ರಿಂದ 3 ದಶಕಗಳ ಕಾಲ ಸೇವೆ ಸಲ್ಲಿಸಿರುವವರಿಗೆ ಸೇವಾ ಹಿರಿತನದ ಮೇಲೆ ಪ್ರತಿ ವರ್ಷಕ್ಕೆ ರೂ 200ರಂತೆ ಒಟ್ಟು ಸಲ್ಲಿಸಿರುವ ಸೇವಾವಧಿಗೆ ಗ್ರಾಚ್ಯುಟಿ ಹಣ ಸೇರಿದಂತೆ ಇತರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.<br /> <br /> ತಹಶೀಲ್ದಾರ್ ಕೆ.ಏಕೇಶ್ ಬಾಬುಗೆ ಮನವಿ ಸಲ್ಲಿಸಿದರು.<br /> <br /> ರಾಜ್ಯ ಅಂಗನವಾಡಿ ಎಐಟಿಸಿ ಫೆಡರೇಷನ್ ಅಧ್ಯಕ್ಷ ಎಚ್.ಕೆ.ರಾಮಚಂದ್ರಪ್ಪ ಹಾಗೂ ಸಂಚಾಲಕ ಕೆ.ಎಂ. ರಮೇಶ್ ಹಾಗೂ ತಾಲ್ಲೂಕಿನ ಅನೇಕ ಅಂಗನವಾಡಿ ಕಾರ್ಯ ಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>