<p>ಕೃಷ್ಣರಾಜಪುರ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ (ಬಿಇಒ) ಶಿಕ್ಷಕರಿಗೆ ಸೌಲಭ್ಯ ಒದಗಿಸುವಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಪ್ರಾಥಮಿಕ ಸಂಘದ ಅಧ್ಯಕ್ಷ ಎ.ಸಿ.ಹರಿಪ್ರಸಾದ್ ಅವರು ಕ್ಷೇತ್ರ ಶಿಕ್ಷಣಾಧಿಕಾರಿ ನಂಜುಂಡಯ್ಯ ಅವರಿಗೆ ಮನವಿ ಸಲ್ಲಿಸಿದರು.<br /> <br /> ನಂತರ ಮಾತನಾಡಿದ ಅವರು, ಶಿಕ್ಷಕರ ವೈದ್ಯಕೀಯ ವೆಚ್ಚ ಮರುಪಾವತಿ ವಿತರಣೆಯಲ್ಲಿ ವಿಳಂಬವಾಗುತ್ತಿದ್ದು, ಪ್ರತಿಭಾಕಾರಂಜಿ ಮುಂತಾದ ಚಟುವಟಿಕೆಗಳ ಅಳವಡಿಕೆಯಲ್ಲಿ ಇಲಾಖಾ ಮಾರ್ಗಸೂಚಿಯನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು. <br /> <br /> ಶಿಕ್ಷಕರನ್ನು ಇತರೆ ಕೆಲಸಗಳಿಗೆ ನಿಯೋಜಿಸುವುದರಿಂದ ಪಾಠಪ್ರವಚನಗಳಿಗೆ ತೊಂದರೆಯಾಗುತ್ತಿದೆ. ಕ್ರೀಡಾಚಟುವಟಿಕೆಗಳು, ಶಿಕ್ಷಕ ದಿನಾಚರಣೆ, ಪ್ರಶಸ್ತಿ ಸಮಿತಿಗಳ ರಚನೆಯಲ್ಲಿ ಸಂಘದ ಪದಾಧಿಕಾರಿಗಳ ಸಹಭಾಗಿತ್ವವನ್ನು ಕಡೆಗಣಿಸಲಾಗಿದೆ. ಸಂಘವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇಲಾಖಾ ಕಾರ್ಯಕ್ರಮಗಳನ್ನು ನಡೆಸಲು ಶಿಕ್ಷಣಾಧಿಕಾರಿಗಳು ಸಹಕರಿಸಬೇಕು' ಎಂದು ಅವರು ಕೋರಿದರು.<br /> ಸಂಘದ ಪ್ರಧಾನ ಕಾರ್ಯದರ್ಶಿ ಎನ್.ವೆಂಕಟಪ್ಪ, ಸಹಕಾರ್ಯದರ್ಶಿ ಎ.ಎಂ.ಉಶಾರಾಣಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೃಷ್ಣರಾಜಪುರ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ (ಬಿಇಒ) ಶಿಕ್ಷಕರಿಗೆ ಸೌಲಭ್ಯ ಒದಗಿಸುವಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಪ್ರಾಥಮಿಕ ಸಂಘದ ಅಧ್ಯಕ್ಷ ಎ.ಸಿ.ಹರಿಪ್ರಸಾದ್ ಅವರು ಕ್ಷೇತ್ರ ಶಿಕ್ಷಣಾಧಿಕಾರಿ ನಂಜುಂಡಯ್ಯ ಅವರಿಗೆ ಮನವಿ ಸಲ್ಲಿಸಿದರು.<br /> <br /> ನಂತರ ಮಾತನಾಡಿದ ಅವರು, ಶಿಕ್ಷಕರ ವೈದ್ಯಕೀಯ ವೆಚ್ಚ ಮರುಪಾವತಿ ವಿತರಣೆಯಲ್ಲಿ ವಿಳಂಬವಾಗುತ್ತಿದ್ದು, ಪ್ರತಿಭಾಕಾರಂಜಿ ಮುಂತಾದ ಚಟುವಟಿಕೆಗಳ ಅಳವಡಿಕೆಯಲ್ಲಿ ಇಲಾಖಾ ಮಾರ್ಗಸೂಚಿಯನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು. <br /> <br /> ಶಿಕ್ಷಕರನ್ನು ಇತರೆ ಕೆಲಸಗಳಿಗೆ ನಿಯೋಜಿಸುವುದರಿಂದ ಪಾಠಪ್ರವಚನಗಳಿಗೆ ತೊಂದರೆಯಾಗುತ್ತಿದೆ. ಕ್ರೀಡಾಚಟುವಟಿಕೆಗಳು, ಶಿಕ್ಷಕ ದಿನಾಚರಣೆ, ಪ್ರಶಸ್ತಿ ಸಮಿತಿಗಳ ರಚನೆಯಲ್ಲಿ ಸಂಘದ ಪದಾಧಿಕಾರಿಗಳ ಸಹಭಾಗಿತ್ವವನ್ನು ಕಡೆಗಣಿಸಲಾಗಿದೆ. ಸಂಘವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇಲಾಖಾ ಕಾರ್ಯಕ್ರಮಗಳನ್ನು ನಡೆಸಲು ಶಿಕ್ಷಣಾಧಿಕಾರಿಗಳು ಸಹಕರಿಸಬೇಕು' ಎಂದು ಅವರು ಕೋರಿದರು.<br /> ಸಂಘದ ಪ್ರಧಾನ ಕಾರ್ಯದರ್ಶಿ ಎನ್.ವೆಂಕಟಪ್ಪ, ಸಹಕಾರ್ಯದರ್ಶಿ ಎ.ಎಂ.ಉಶಾರಾಣಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>