<p><strong>ಕಾರವಾರ:</strong> ಬೇಲೆಕೇರಿ ಬಂದರಿನಲ್ಲಿ 2010ರಲ್ಲಿ ನಡೆದ ಅದಿರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ಐವರಿಂದ (ಪಂಚರಿಂದ) ಸಾಕ್ಷ್ಯಗಳನ್ನು ಸಂಗ್ರಹಿಸಿತು.<br /> <br /> ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಸಿಬಿಐ ಎಎಸ್ಪಿ- ಬಿ.ದಾಸ, ಇನ್ಸ್ಪೆಕ್ಟರ್ ರಾಜಶೇಖರ್ ಅವರನ್ನೊಳಗೊಂಡ ಇಬ್ಬರ ತಂಡ ಮಂಗಳವಾರ ಐದು ಜನರನ್ನು ವಿಚಾರಣೆಗೊಳಪಡಿಸಿ ಸಾಕ್ಷ್ಯಗಳನ್ನು ಕಲೆಹಾಕಿತು.<br /> <br /> ಒಬ್ಬೊಬ್ಬರನ್ನು ಸುಮಾರು ಹತ್ತರಿಂದ ಇಪ್ಪತ್ತು ನಿಮಿಷಗಳ ಕಾಲ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿ ಅವರಿಂದ ಮಾಹಿತಿ ಸಂಗ್ರಹಿಸಿದರು.<br /> <br /> 'ಅದಿರು ವಶಕ್ಕೆ ಪಡೆದುಕೊಂಡ ಸಂದರ್ಭದಲ್ಲಿ ಪ್ರಕರಣಕ್ಕೆ ತಕ್ಷಣವೇ ಮುಗಿಯಲಿದೆ ಎಂದು ಪಂಚನಾಮೆಗೆ ಸಹಿ ಹಾಕಿದ್ದೆವು. ಪ್ರಕರಣದ ತನಿಖೆ ಸಿಐಡಿ ನಡೆಸುತ್ತಿದ್ದ ಸಂದರ್ಭದಲ್ಲಿ 3-4 ಸಲ ನಮ್ಮನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಸಿಬಿಐ ವಿಚಾರಣೆಗೆ ಸಂಬಂಧಿಸಿದಂತೆ ನಾಲ್ಕು ದಿನಗಳ ಹಿಂದೆ ನೋಟಿಸ್ ಬಂದಿತ್ತು. ಆಗಾಗ ನಡೆಯುತ್ತಿರುವ ಈ ವಿಚಾರಣೆ ನಮಗೆ ಕಿರಿಕಿರಿ ತಂದಿದೆಯಲ್ಲದೆ ದಿನದ ಕೂಲಿಗೂ ಕತ್ತರಿ ಹಾಕಿದೆ' ಎಂದು ವಿಚಾರಣೆ ಬಂದವರೊಬ್ಬರು 'ಪ್ರಜಾವಾಣಿ'ಗೆ ತಿಳಿಸಿದರು.<br /> <br /> ತನಿಖೆಯ ಕುರಿತು ಸಿಬಿಐ ಅಧಿಕಾರಿಗಳನ್ನು ಕೇಳಿದಾಗ `ಅದಿರು ಕಳ್ಳತನಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ವಿಚಾರಣೆ ಮಾಡಲು ಇಲ್ಲಿಗೆ ಆಗಮಿಸಿದ್ದೇವೆ' ಎಂದಷ್ಟೇ ಉತ್ತರಿಸಿದರು.<br /> <br /> ಅದಿರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎಂಟು ತಿಂಗಳಿಂದ ಸಿಬಿಐ ವಿಚಾರಣೆ ನಡೆಸುತ್ತಿದೆ. ಕೆಲವರನ್ನು ಈಗಾಗಲೇ ಬೆಂಗಳೂರಿಗೆ ಕರೆಯಿಸಿ ವಿಚಾರಣೆ ನಡೆಸಲಾಗಿದೆ. ಬೆಂಗಳೂರಿಗೆ ಬರಲು ಸಾಧ್ಯವಾಗದೇ ಇರುವವರಿಗೆ ಅವರಿದ್ದ ಸ್ಥಳಕ್ಕೆ ಹೋಗಿ ಸಿಬಿಐ ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಬೇಲೆಕೇರಿ ಬಂದರಿನಲ್ಲಿ 2010ರಲ್ಲಿ ನಡೆದ ಅದಿರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ಐವರಿಂದ (ಪಂಚರಿಂದ) ಸಾಕ್ಷ್ಯಗಳನ್ನು ಸಂಗ್ರಹಿಸಿತು.<br /> <br /> ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಸಿಬಿಐ ಎಎಸ್ಪಿ- ಬಿ.ದಾಸ, ಇನ್ಸ್ಪೆಕ್ಟರ್ ರಾಜಶೇಖರ್ ಅವರನ್ನೊಳಗೊಂಡ ಇಬ್ಬರ ತಂಡ ಮಂಗಳವಾರ ಐದು ಜನರನ್ನು ವಿಚಾರಣೆಗೊಳಪಡಿಸಿ ಸಾಕ್ಷ್ಯಗಳನ್ನು ಕಲೆಹಾಕಿತು.<br /> <br /> ಒಬ್ಬೊಬ್ಬರನ್ನು ಸುಮಾರು ಹತ್ತರಿಂದ ಇಪ್ಪತ್ತು ನಿಮಿಷಗಳ ಕಾಲ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿ ಅವರಿಂದ ಮಾಹಿತಿ ಸಂಗ್ರಹಿಸಿದರು.<br /> <br /> 'ಅದಿರು ವಶಕ್ಕೆ ಪಡೆದುಕೊಂಡ ಸಂದರ್ಭದಲ್ಲಿ ಪ್ರಕರಣಕ್ಕೆ ತಕ್ಷಣವೇ ಮುಗಿಯಲಿದೆ ಎಂದು ಪಂಚನಾಮೆಗೆ ಸಹಿ ಹಾಕಿದ್ದೆವು. ಪ್ರಕರಣದ ತನಿಖೆ ಸಿಐಡಿ ನಡೆಸುತ್ತಿದ್ದ ಸಂದರ್ಭದಲ್ಲಿ 3-4 ಸಲ ನಮ್ಮನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಸಿಬಿಐ ವಿಚಾರಣೆಗೆ ಸಂಬಂಧಿಸಿದಂತೆ ನಾಲ್ಕು ದಿನಗಳ ಹಿಂದೆ ನೋಟಿಸ್ ಬಂದಿತ್ತು. ಆಗಾಗ ನಡೆಯುತ್ತಿರುವ ಈ ವಿಚಾರಣೆ ನಮಗೆ ಕಿರಿಕಿರಿ ತಂದಿದೆಯಲ್ಲದೆ ದಿನದ ಕೂಲಿಗೂ ಕತ್ತರಿ ಹಾಕಿದೆ' ಎಂದು ವಿಚಾರಣೆ ಬಂದವರೊಬ್ಬರು 'ಪ್ರಜಾವಾಣಿ'ಗೆ ತಿಳಿಸಿದರು.<br /> <br /> ತನಿಖೆಯ ಕುರಿತು ಸಿಬಿಐ ಅಧಿಕಾರಿಗಳನ್ನು ಕೇಳಿದಾಗ `ಅದಿರು ಕಳ್ಳತನಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ವಿಚಾರಣೆ ಮಾಡಲು ಇಲ್ಲಿಗೆ ಆಗಮಿಸಿದ್ದೇವೆ' ಎಂದಷ್ಟೇ ಉತ್ತರಿಸಿದರು.<br /> <br /> ಅದಿರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎಂಟು ತಿಂಗಳಿಂದ ಸಿಬಿಐ ವಿಚಾರಣೆ ನಡೆಸುತ್ತಿದೆ. ಕೆಲವರನ್ನು ಈಗಾಗಲೇ ಬೆಂಗಳೂರಿಗೆ ಕರೆಯಿಸಿ ವಿಚಾರಣೆ ನಡೆಸಲಾಗಿದೆ. ಬೆಂಗಳೂರಿಗೆ ಬರಲು ಸಾಧ್ಯವಾಗದೇ ಇರುವವರಿಗೆ ಅವರಿದ್ದ ಸ್ಥಳಕ್ಕೆ ಹೋಗಿ ಸಿಬಿಐ ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>