<p><strong>ಮಾನ್ವಿ: </strong>ಪಟ್ಟಣದ 23ನೇ ವಾರ್ಡ್ನ ಕೊಳಚೆ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ನಾಗರಿಕರು ಶನಿವಾರ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಸಿದರು.<br /> <br /> ವಿದ್ಯುತ್ ಪರಿವರ್ತಕ ಕೆಟ್ಟು ಕಳೆದ ಒಂದು ತಿಂಗಳಿಂದ ಸದರಿ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಬಹುತೇಕ ಬಡವರು, ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಈ ಪ್ರದೇಶದಲ್ಲಿ ವಿದ್ಯುತ್ ಸರಬರಾಜು ಇಲ್ಲದೆ ನಿವಾಸಿಗಳು ಪರದಾಡುವಂತಾಗಿದೆ. <br /> <br /> ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಪುರಸಭೆ ಸದಸ್ಯರು ಹಾಗೂ ಶಾಸಕರು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ನಿರ್ಲಕ್ಷ್ಯವಹಿಸಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.<br /> ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಜಸ್ಕಾಂ ಎಇಇ ಶಂಕರ, ಸೋಮವಾರದ ಒಳಗೆ ವಿದ್ಯುತ್ ಪರಿವರ್ತಕ ದುರಸ್ತಿಗೊಳಿಸಿ ವಿದ್ಯುತ್ ಸರಬರಾಜಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.<br /> <br /> ಪುರಸಭೆ ಮಾಜಿ ಅಧ್ಯಕ್ಷ ಡಿ.ರಾಮಕೃಷ್ಣ, ಜೆಡಿಎಸ್ ತಾಲ್ಲೂಕು ಯುವ ಅಧ್ಯಕ್ಷ ಜೆ.ಎಚ್.ದೇವರಾಜ, ಯುವ ಮುಖಂಡರಾದ ಎನ್.ಗುರುರಾಜ್ ನಾಗಲಾಪುರ, ಬಸವರಾಜ ನಿಲೋಗಲ್ಕರ್, ರಾಮು, ಹುಲಗಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ: </strong>ಪಟ್ಟಣದ 23ನೇ ವಾರ್ಡ್ನ ಕೊಳಚೆ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ನಾಗರಿಕರು ಶನಿವಾರ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಸಿದರು.<br /> <br /> ವಿದ್ಯುತ್ ಪರಿವರ್ತಕ ಕೆಟ್ಟು ಕಳೆದ ಒಂದು ತಿಂಗಳಿಂದ ಸದರಿ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಬಹುತೇಕ ಬಡವರು, ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಈ ಪ್ರದೇಶದಲ್ಲಿ ವಿದ್ಯುತ್ ಸರಬರಾಜು ಇಲ್ಲದೆ ನಿವಾಸಿಗಳು ಪರದಾಡುವಂತಾಗಿದೆ. <br /> <br /> ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಪುರಸಭೆ ಸದಸ್ಯರು ಹಾಗೂ ಶಾಸಕರು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ನಿರ್ಲಕ್ಷ್ಯವಹಿಸಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.<br /> ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಜಸ್ಕಾಂ ಎಇಇ ಶಂಕರ, ಸೋಮವಾರದ ಒಳಗೆ ವಿದ್ಯುತ್ ಪರಿವರ್ತಕ ದುರಸ್ತಿಗೊಳಿಸಿ ವಿದ್ಯುತ್ ಸರಬರಾಜಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.<br /> <br /> ಪುರಸಭೆ ಮಾಜಿ ಅಧ್ಯಕ್ಷ ಡಿ.ರಾಮಕೃಷ್ಣ, ಜೆಡಿಎಸ್ ತಾಲ್ಲೂಕು ಯುವ ಅಧ್ಯಕ್ಷ ಜೆ.ಎಚ್.ದೇವರಾಜ, ಯುವ ಮುಖಂಡರಾದ ಎನ್.ಗುರುರಾಜ್ ನಾಗಲಾಪುರ, ಬಸವರಾಜ ನಿಲೋಗಲ್ಕರ್, ರಾಮು, ಹುಲಗಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>