<p>ಕೃಷ್ಣರಾಜಪುರ : ‘ಒಂದೇ ಶಾಲೆಯಲ್ಲಿ ಓದಿದ ಮಕ್ಕಳು ಪರಸ್ಪರ ಅರಿವು ಮೂಡಿಸಿಕೊಳ್ಳಲು ಬೇಸಿಗೆ ಶಿಬಿರಗಳು ಸಹಕಾರಿಯಾಗಿವೆ. ಆದ್ದರಿಂದ ಮಕ್ಕಳು ಹೆಚ್ಚು ಹೆಚ್ಚಾಗಿ ಶಿಬಿರಗಳಲ್ಲಿ ಭಾಗವಹಿಸಲು ಪೋಷಕರು ಪ್ರೋತ್ಸಾಹಿಸಬೇಕು’ ಎಂದು ಪಾಲಿಕೆ ಸದಸ್ಯೆ ಆರ್.ಮಂಜುಳಾ ದೇವಿ ಹೇಳಿದರು.<br /> <br /> ರಂಗಪಯಣ ಟ್ರಸ್ಟ್ ವತಿಯಿಂದ ಬಿ.ನಾರಾಯಣಪುರ ಸರ್ಕಾರಿ ಶಾಲೆಯ ಆವರಣದಲ್ಲಿ ಏರ್ಪಡಿಸಿದ್ದ ಬೇಸಿಗೆ ಶಿಬಿರ ಮುಕ್ತಾಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು. <br /> <br /> ‘ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಶಿಬಿರಗಳ್ನು ಹೆಚ್ಚು ಹೆಚ್ಚಾಗಿ ತೆರೆಯಬೇಕು. ಇದಕ್ಕೆ ಬಿಬಿಎಂಪಿ ವತಿಯಿಂದ ನೆರವು ಕೊಡಿಸಲಾಗುವುದು. ರಂಗ ಪಯಣ ಟ್ರಸ್ಟ್ ಗ್ರಾಮೀಣ ಪ್ರದೇಶಕ್ಕೆ ಆದ್ಯತೆ ನೀಡಿ ಶಿಬಿರ ನಡೆಸುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ’ ಎಂದು ಅವರು ತಿಳಿಸಿದರು.<br /> <br /> ಟ್ರಸ್ಟ್ನ ಸಂಯೋಜಕಿ ನಯನ ಜೆ. ಸೂಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ನೆನಪಿನ ಕಾಣಿಕೆ ಹಾಗೂ ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.<br /> <br /> ಕರ್ನಾಟಕ ರಕ್ಷಣಾ ವೇದಿಕೆ ಬಿ.ನಾರಾಯಣಪುರ ಘಟಕದ ಅಧ್ಯಕ್ಷ ವಿಠಲಗೌಡ , ಉಪಾಧ್ಯಕ್ಷ ಬಾಬು ಗೌಡ , ಟ್ರಸ್ಟ್ನ ಅಧ್ಯಕ್ಷ ರಾಘವೇಂದ್ರ, ಸಂಘಟನಾ ಟ್ರಸ್ಟಿ ಶ್ರೀನಾಥ್, ಕಲಾವಿದ ಡಾ.ಸುಬ್ರಮಣ್ಯ, ಸಾಮಾಜಿಕ ಕಾರ್ಯಕರ್ತರಾದ ರಾಮಲಕ್ಷ್ಮಣ, ತಾಯಪ್ಪ, ನಾಗೇಶ ರಾವ್, ಕಿರಣ ಬಾಬು, ಸದಾನಂದ ಮತ್ತಿತರು ಉಪಸ್ಥಿತರಿದ್ದರು. ರಂಗಭೂಮಿ ಕಲಾವಿದ ವೆಂಕಟೇಶ್ ಸ್ವಾಗತಿಸಿ, ಧನ್ವಂತ್ರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೃಷ್ಣರಾಜಪುರ : ‘ಒಂದೇ ಶಾಲೆಯಲ್ಲಿ ಓದಿದ ಮಕ್ಕಳು ಪರಸ್ಪರ ಅರಿವು ಮೂಡಿಸಿಕೊಳ್ಳಲು ಬೇಸಿಗೆ ಶಿಬಿರಗಳು ಸಹಕಾರಿಯಾಗಿವೆ. ಆದ್ದರಿಂದ ಮಕ್ಕಳು ಹೆಚ್ಚು ಹೆಚ್ಚಾಗಿ ಶಿಬಿರಗಳಲ್ಲಿ ಭಾಗವಹಿಸಲು ಪೋಷಕರು ಪ್ರೋತ್ಸಾಹಿಸಬೇಕು’ ಎಂದು ಪಾಲಿಕೆ ಸದಸ್ಯೆ ಆರ್.ಮಂಜುಳಾ ದೇವಿ ಹೇಳಿದರು.<br /> <br /> ರಂಗಪಯಣ ಟ್ರಸ್ಟ್ ವತಿಯಿಂದ ಬಿ.ನಾರಾಯಣಪುರ ಸರ್ಕಾರಿ ಶಾಲೆಯ ಆವರಣದಲ್ಲಿ ಏರ್ಪಡಿಸಿದ್ದ ಬೇಸಿಗೆ ಶಿಬಿರ ಮುಕ್ತಾಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು. <br /> <br /> ‘ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಶಿಬಿರಗಳ್ನು ಹೆಚ್ಚು ಹೆಚ್ಚಾಗಿ ತೆರೆಯಬೇಕು. ಇದಕ್ಕೆ ಬಿಬಿಎಂಪಿ ವತಿಯಿಂದ ನೆರವು ಕೊಡಿಸಲಾಗುವುದು. ರಂಗ ಪಯಣ ಟ್ರಸ್ಟ್ ಗ್ರಾಮೀಣ ಪ್ರದೇಶಕ್ಕೆ ಆದ್ಯತೆ ನೀಡಿ ಶಿಬಿರ ನಡೆಸುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ’ ಎಂದು ಅವರು ತಿಳಿಸಿದರು.<br /> <br /> ಟ್ರಸ್ಟ್ನ ಸಂಯೋಜಕಿ ನಯನ ಜೆ. ಸೂಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ನೆನಪಿನ ಕಾಣಿಕೆ ಹಾಗೂ ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.<br /> <br /> ಕರ್ನಾಟಕ ರಕ್ಷಣಾ ವೇದಿಕೆ ಬಿ.ನಾರಾಯಣಪುರ ಘಟಕದ ಅಧ್ಯಕ್ಷ ವಿಠಲಗೌಡ , ಉಪಾಧ್ಯಕ್ಷ ಬಾಬು ಗೌಡ , ಟ್ರಸ್ಟ್ನ ಅಧ್ಯಕ್ಷ ರಾಘವೇಂದ್ರ, ಸಂಘಟನಾ ಟ್ರಸ್ಟಿ ಶ್ರೀನಾಥ್, ಕಲಾವಿದ ಡಾ.ಸುಬ್ರಮಣ್ಯ, ಸಾಮಾಜಿಕ ಕಾರ್ಯಕರ್ತರಾದ ರಾಮಲಕ್ಷ್ಮಣ, ತಾಯಪ್ಪ, ನಾಗೇಶ ರಾವ್, ಕಿರಣ ಬಾಬು, ಸದಾನಂದ ಮತ್ತಿತರು ಉಪಸ್ಥಿತರಿದ್ದರು. ರಂಗಭೂಮಿ ಕಲಾವಿದ ವೆಂಕಟೇಶ್ ಸ್ವಾಗತಿಸಿ, ಧನ್ವಂತ್ರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>