<p><strong>ಬೆಂಗಳೂರು</strong>: `ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲ ಸೃಜನಶೀಲರ ಬೌದ್ಧಿಕತೆ ಮನ್ನಣೆ ನೀಡಿ ಜಾರಿಗೆ ಬಂದಿರುವ ಬೌದ್ಧಿಕ ಆಸ್ತಿ ಹಕ್ಕಿನ ಕುರಿತು ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅರಿವು ಮೂಡಿಸಬೇಕು~ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ಪ್ರಭುದೇವ್ ಹೇಳಿದರು.<br /> <br /> ಬೆಂಗಳೂರು ವಿಶ್ವವಿದ್ಯಾಲಯವು ನಗರದ ಸೆಂಟ್ರಲ್ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೌದ್ಧಿಕ ಆಸ್ತಿ ಹಕ್ಕು ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.<br /> <br /> `ಪ್ರಸ್ತುತ ದಿನಗಳಲ್ಲಿ ಸ್ಪರ್ಧೆ ಹೆಚ್ಚಿರುವುದರಿಂದ ಬೌದ್ಧಿಕ ಆಸ್ತಿ ಹಕ್ಕು ಕಾಯಿದೆ ಉಲ್ಲಂಘನೆಯಾಗುತ್ತಿದೆ. ಪ್ರತಿಯೊಬ್ಬರ ಬೌದ್ಧಿಕತೆಗೆ ಮನ್ನಣೆ ನೀಡುವುದು ಅಗತ್ಯವಾಗಿದೆ~ ಎಂದ ಅವರು, `ಆಧುನಿಕ ಯುಗದಲ್ಲಿ ಮುಂದುವರಿದ ತಂತ್ರಜ್ಞಾನದಿಂದ ಬೌದ್ಧಿಕ ಆಸ್ತಿ ಹಕ್ಕಿಗೆ ಧಕ್ಕೆಯಾಗುತ್ತಿದ್ದು, ಈ ಹಕ್ಕಿನ ಉಲ್ಲಂಘನೆಯಾದಲ್ಲಿ ತೆಗೆದುಕೊಳ್ಳಬೇಕಾದ ಕಾನೂನಿಕ ಕ್ರಮಗಳು ಕುರಿತು ಅರಿವು ಮೂಡಿಸುವ ಕಾರ್ಯ ನಡೆಸಬೇಕು~ ಎಂದು ಹೇಳಿದರು. ಯೂನಿವರ್ಸಿಟಿ ಲಾ ಕಾಲೇಜಿನ ಅಧ್ಯಕ್ಷ ಪ್ರೊ. ಕೆ.ಎಂ.ಎಚ್. ರಾಯಪ್ಪ, `ಹೊಸದಾಗಿ ಉತ್ಪನ್ನವಾಗುವ ಎಲ್ಲ ವಸ್ತುಗಳಿಗೂ ಬೌದ್ಧಿಕ ಹಕ್ಕು ಅನ್ವಯವಾಗುತ್ತದೆ. ವಿ.ವಿ ಮತ್ತು ಕಾಲೇಜುಗಳು ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸ ಬೇಕು~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: `ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲ ಸೃಜನಶೀಲರ ಬೌದ್ಧಿಕತೆ ಮನ್ನಣೆ ನೀಡಿ ಜಾರಿಗೆ ಬಂದಿರುವ ಬೌದ್ಧಿಕ ಆಸ್ತಿ ಹಕ್ಕಿನ ಕುರಿತು ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅರಿವು ಮೂಡಿಸಬೇಕು~ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ಪ್ರಭುದೇವ್ ಹೇಳಿದರು.<br /> <br /> ಬೆಂಗಳೂರು ವಿಶ್ವವಿದ್ಯಾಲಯವು ನಗರದ ಸೆಂಟ್ರಲ್ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೌದ್ಧಿಕ ಆಸ್ತಿ ಹಕ್ಕು ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.<br /> <br /> `ಪ್ರಸ್ತುತ ದಿನಗಳಲ್ಲಿ ಸ್ಪರ್ಧೆ ಹೆಚ್ಚಿರುವುದರಿಂದ ಬೌದ್ಧಿಕ ಆಸ್ತಿ ಹಕ್ಕು ಕಾಯಿದೆ ಉಲ್ಲಂಘನೆಯಾಗುತ್ತಿದೆ. ಪ್ರತಿಯೊಬ್ಬರ ಬೌದ್ಧಿಕತೆಗೆ ಮನ್ನಣೆ ನೀಡುವುದು ಅಗತ್ಯವಾಗಿದೆ~ ಎಂದ ಅವರು, `ಆಧುನಿಕ ಯುಗದಲ್ಲಿ ಮುಂದುವರಿದ ತಂತ್ರಜ್ಞಾನದಿಂದ ಬೌದ್ಧಿಕ ಆಸ್ತಿ ಹಕ್ಕಿಗೆ ಧಕ್ಕೆಯಾಗುತ್ತಿದ್ದು, ಈ ಹಕ್ಕಿನ ಉಲ್ಲಂಘನೆಯಾದಲ್ಲಿ ತೆಗೆದುಕೊಳ್ಳಬೇಕಾದ ಕಾನೂನಿಕ ಕ್ರಮಗಳು ಕುರಿತು ಅರಿವು ಮೂಡಿಸುವ ಕಾರ್ಯ ನಡೆಸಬೇಕು~ ಎಂದು ಹೇಳಿದರು. ಯೂನಿವರ್ಸಿಟಿ ಲಾ ಕಾಲೇಜಿನ ಅಧ್ಯಕ್ಷ ಪ್ರೊ. ಕೆ.ಎಂ.ಎಚ್. ರಾಯಪ್ಪ, `ಹೊಸದಾಗಿ ಉತ್ಪನ್ನವಾಗುವ ಎಲ್ಲ ವಸ್ತುಗಳಿಗೂ ಬೌದ್ಧಿಕ ಹಕ್ಕು ಅನ್ವಯವಾಗುತ್ತದೆ. ವಿ.ವಿ ಮತ್ತು ಕಾಲೇಜುಗಳು ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸ ಬೇಕು~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>