<p><strong>ಕನಕಪುರ:</strong> ಗ್ರಾಮೀಣ ಪ್ರದೇಶದಲ್ಲಿ ಮಹಿಳಾ ಸಂಘಗಳು ಅತ್ಯಂತ ಜವಬ್ದಾರಿಯುತ ಕರ್ತವ್ಯ ನಿರ್ವಹಿಸುತ್ತಿದ್ದು, ಬ್ಯಾಂಕುಗಳಿಂದ ಕೋಟ್ಯಂತರ ರೂಪಾಯಿ ಸಾಲದ ವಹಿವಾಟು ನಡೆಸುತ್ತಿದ್ದಾರೆಂದು ಕೃಷಿ ಪ್ರಶಸ್ತಿ ವಿಜೇತ ಕನಕಾಂಬರಿ ಮಹಿಳಾ ಒಕ್ಕೂಟದ ಗೌರವ ಅಧ್ಯಕ್ಷ ಎಚ್.ಕೆ. ಶ್ರಿಕಂಠು ಹೇಳಿದರು.<br /> <br /> ಪಟ್ಟಣದ ಶ್ರಿ ಕಲ್ಯಾಣ ಮಂಟಪದಲ್ಲಿ ಕನಕಾಂಬರಿ ಮಹಿಳಾ ಒಕ್ಕೂಟ ಹಾಗೂ ಕೆನರಾ ಬ್ಯಾಂಕ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಸಮಾವೇಶದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. <br /> <br /> ಕನಕಾಂಬರಿ ಮಹಿಳಾ ಒಕ್ಕೂಟವು ಕಡಿಮೆ ಅವಧಿಯಲ್ಲಿ ಅತ್ಯತ್ತಮ ಸಾಧನೆ ಮಾಡಿದೆ ಎಂದು ತಿಳಿಸಿದರು.<br /> ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೆನರಾ ಬ್ಯಾಂಕ್ನ ಉಪ ಮಹಾ ಪ್ರಬಂಧಕ ರವೀಂದ್ರ ಭಂಡಾರಿ ಮಹಿಳಾ ಸಂಘಗಳು ಬ್ಯಾಂಕಿನಲ್ಲಿ ಪಡೆದಂತಹ ಸಾಲವನ್ನು ಸದ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಬ್ಯಾಂಕ್ನ ವಿಶ್ವಾಸಗಳಿಸುತ್ತಿದ್ದಾರೆಂದು ಹೇಳಿದರು. <br /> <br /> ಭಾರತ ದೇಶದಲ್ಲಿನ ಮಹಿಳೆಯರು ಇಂದು ಜಾಗೃತರಾಗುತ್ತಿದ್ದು ಎಲ್ಲಾ ರಂಗದಲ್ಲೂ ತಮ್ಮನ್ನು ತೊಡಗಿಸಿಕೊಳ್ಳುವುದರ ಜೊತೆಗೆ ಎಲ್ಲಾ ಕ್ಷೇತ್ರಗಳಲ್ಲೂ ಕೂಡ ಯಶಸ್ವಿಯನ್ನು ಕಾಣುತ್ತಿದ್ದಾರೆ ಎಂದರು. <br /> <br /> ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ರಾಜಶೇಖರ್ ಪ್ರಾಸ್ತಾವಿಕ ಭಾಷಣ ಮಾಡಿ ಒಕ್ಕೂಟವು ಕೇವಲ 6 ತಿಂಗಳಲ್ಲಿ 2 ಕೋಟಿ ವಹಿವಾಟು ನಡೆಸಿದೆ. ಸಂಘದ ಒಬ್ಬ ಸದಸ್ಯರಿಗೆ 80 ಸಾವಿರದವರೆಗೂ ಸಾಲವನ್ನು ನೀಡುತ್ತಿದೆ, ಒಕ್ಕೂಟದಲ್ಲಿ ಮಕ್ಕಳ ಉಳಿತಾಯ ಯೋಜನೆ, ಗುಂಪು, ಪರಸ್ಪರ ಸಹಾಯ ನಿಧಿ ಮುಂತಾದ ಹೊಸ ಯೋಜನೆಗಳನ್ನು ಜಾರಿಗೊಳಿಸಿರುವುದಾಗಿ ಹೇಳಿದರು. <br /> <br /> ಕೆನರಾ ಬ್ಯಾಂಕ್ನ ಪದ್ಮಿನಿ 19 ಸಂಘಗಳಿಗೆ 40 ಲಕ್ಷ ಸಾಲ ಮಂಜೂರು ಮಾಡಿ ಪತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ 10 ಉತ್ತಮ ಸಂಘಗಳಿಗೆ ಬಹುಮಾನ ವಿತರಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಗ್ರಾಮೀಣ ಪ್ರದೇಶದಲ್ಲಿ ಮಹಿಳಾ ಸಂಘಗಳು ಅತ್ಯಂತ ಜವಬ್ದಾರಿಯುತ ಕರ್ತವ್ಯ ನಿರ್ವಹಿಸುತ್ತಿದ್ದು, ಬ್ಯಾಂಕುಗಳಿಂದ ಕೋಟ್ಯಂತರ ರೂಪಾಯಿ ಸಾಲದ ವಹಿವಾಟು ನಡೆಸುತ್ತಿದ್ದಾರೆಂದು ಕೃಷಿ ಪ್ರಶಸ್ತಿ ವಿಜೇತ ಕನಕಾಂಬರಿ ಮಹಿಳಾ ಒಕ್ಕೂಟದ ಗೌರವ ಅಧ್ಯಕ್ಷ ಎಚ್.ಕೆ. ಶ್ರಿಕಂಠು ಹೇಳಿದರು.<br /> <br /> ಪಟ್ಟಣದ ಶ್ರಿ ಕಲ್ಯಾಣ ಮಂಟಪದಲ್ಲಿ ಕನಕಾಂಬರಿ ಮಹಿಳಾ ಒಕ್ಕೂಟ ಹಾಗೂ ಕೆನರಾ ಬ್ಯಾಂಕ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಸಮಾವೇಶದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. <br /> <br /> ಕನಕಾಂಬರಿ ಮಹಿಳಾ ಒಕ್ಕೂಟವು ಕಡಿಮೆ ಅವಧಿಯಲ್ಲಿ ಅತ್ಯತ್ತಮ ಸಾಧನೆ ಮಾಡಿದೆ ಎಂದು ತಿಳಿಸಿದರು.<br /> ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೆನರಾ ಬ್ಯಾಂಕ್ನ ಉಪ ಮಹಾ ಪ್ರಬಂಧಕ ರವೀಂದ್ರ ಭಂಡಾರಿ ಮಹಿಳಾ ಸಂಘಗಳು ಬ್ಯಾಂಕಿನಲ್ಲಿ ಪಡೆದಂತಹ ಸಾಲವನ್ನು ಸದ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಬ್ಯಾಂಕ್ನ ವಿಶ್ವಾಸಗಳಿಸುತ್ತಿದ್ದಾರೆಂದು ಹೇಳಿದರು. <br /> <br /> ಭಾರತ ದೇಶದಲ್ಲಿನ ಮಹಿಳೆಯರು ಇಂದು ಜಾಗೃತರಾಗುತ್ತಿದ್ದು ಎಲ್ಲಾ ರಂಗದಲ್ಲೂ ತಮ್ಮನ್ನು ತೊಡಗಿಸಿಕೊಳ್ಳುವುದರ ಜೊತೆಗೆ ಎಲ್ಲಾ ಕ್ಷೇತ್ರಗಳಲ್ಲೂ ಕೂಡ ಯಶಸ್ವಿಯನ್ನು ಕಾಣುತ್ತಿದ್ದಾರೆ ಎಂದರು. <br /> <br /> ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ರಾಜಶೇಖರ್ ಪ್ರಾಸ್ತಾವಿಕ ಭಾಷಣ ಮಾಡಿ ಒಕ್ಕೂಟವು ಕೇವಲ 6 ತಿಂಗಳಲ್ಲಿ 2 ಕೋಟಿ ವಹಿವಾಟು ನಡೆಸಿದೆ. ಸಂಘದ ಒಬ್ಬ ಸದಸ್ಯರಿಗೆ 80 ಸಾವಿರದವರೆಗೂ ಸಾಲವನ್ನು ನೀಡುತ್ತಿದೆ, ಒಕ್ಕೂಟದಲ್ಲಿ ಮಕ್ಕಳ ಉಳಿತಾಯ ಯೋಜನೆ, ಗುಂಪು, ಪರಸ್ಪರ ಸಹಾಯ ನಿಧಿ ಮುಂತಾದ ಹೊಸ ಯೋಜನೆಗಳನ್ನು ಜಾರಿಗೊಳಿಸಿರುವುದಾಗಿ ಹೇಳಿದರು. <br /> <br /> ಕೆನರಾ ಬ್ಯಾಂಕ್ನ ಪದ್ಮಿನಿ 19 ಸಂಘಗಳಿಗೆ 40 ಲಕ್ಷ ಸಾಲ ಮಂಜೂರು ಮಾಡಿ ಪತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ 10 ಉತ್ತಮ ಸಂಘಗಳಿಗೆ ಬಹುಮಾನ ವಿತರಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>