<p>ಬೆಂಗಳೂರು: ತುಂಬಾ ಕಡಿಮೆ ವೇತನವನ್ನು ಪಡೆಯುತ್ತಿರುವ ಬ್ಯಾಂಕ್ ಠೇವಣಿ ಸಂಗ್ರಹಕಾರರಿಗೆ ಸಮರ್ಪಕ ವೇತನ ನೀಡಲು ಸರ್ಕಾರವು ಬ್ಯಾಂಕ್ಗಳಿಗೆ ನಿರ್ದೇಶನ ನೀಡಬೇಕು ಎಂದು ಅಖಿಲ ಭಾರತ ಬ್ಯಾಂಕ್ ಠೇವಣಿ ಸಂಗ್ರಹಕಾರರ ಸಂಘಟನೆಯು ಒತ್ತಾಯಿಸಿದೆ.<br /> <br /> ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ್, `ಬ್ಯಾಂಕ್ ಠೇವಣಿ ಸಂಗ್ರಹಕಾರರಿಗೆ ಇಂದಿಗೂ ಬ್ಯಾಂಕ್ಗಳು 750 ರಿಂದ 800 ರೂ.ಗಳ ವೇತನ ನೀಡಲಾಗುತ್ತಿದೆ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಲಿದೆ~ ಎಂದರು.<br /> <br /> ಸುಪ್ರೀಂಕೋರ್ಟ್ ಈಗಾಗಲೇ ಠೇವಣಿ ಸಂಗ್ರಹಕಾರರಿಗೆ ನೌಕರರ ಸ್ಥಾನ ಘೋಷಣೆಗೆ ಸೂಚಿಸಿದೆ. ಪ್ರತಿ ತಿಂಗಳು ಕನಿಷ್ಠ ವೇತನ 9200 ರೂ.ಗಳನ್ನು ಸಂಘಟನೆಯು ಹಿಂದಿನಿಂದಲೂ ಒತ್ತಾಯ ಮಾಡುತ್ತಲೇ ಬಂದಿದೆ. ಆದರೆ ಬ್ಯಾಂಕ್ಗಳು ಯಾವ ಕ್ರಮಕ್ಕೂ ಮುಂದಾಗಿಲ್ಲ ಎಂದು ಅವರು ದೂರಿದರು.<br /> <br /> `ಠೇವಣಿ ಸಂಗ್ರಹಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಇದೇ 17 ರಂದು ಬಸವನಗುಡಿಯ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಒಂದು ದಿನಗಳ ಅಧಿವೇಶನವನ್ನು ಆಯೋಜಿಸಲಾಗಿದೆ~ ಎಂದು ಅವರು ತಿಳಿಸಿದರು.<br /> ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಮಜ್ದೂರ್ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ.ರಾಮಕೃಷ್ಣ ಪೂಂಜಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ತುಂಬಾ ಕಡಿಮೆ ವೇತನವನ್ನು ಪಡೆಯುತ್ತಿರುವ ಬ್ಯಾಂಕ್ ಠೇವಣಿ ಸಂಗ್ರಹಕಾರರಿಗೆ ಸಮರ್ಪಕ ವೇತನ ನೀಡಲು ಸರ್ಕಾರವು ಬ್ಯಾಂಕ್ಗಳಿಗೆ ನಿರ್ದೇಶನ ನೀಡಬೇಕು ಎಂದು ಅಖಿಲ ಭಾರತ ಬ್ಯಾಂಕ್ ಠೇವಣಿ ಸಂಗ್ರಹಕಾರರ ಸಂಘಟನೆಯು ಒತ್ತಾಯಿಸಿದೆ.<br /> <br /> ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ್, `ಬ್ಯಾಂಕ್ ಠೇವಣಿ ಸಂಗ್ರಹಕಾರರಿಗೆ ಇಂದಿಗೂ ಬ್ಯಾಂಕ್ಗಳು 750 ರಿಂದ 800 ರೂ.ಗಳ ವೇತನ ನೀಡಲಾಗುತ್ತಿದೆ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಲಿದೆ~ ಎಂದರು.<br /> <br /> ಸುಪ್ರೀಂಕೋರ್ಟ್ ಈಗಾಗಲೇ ಠೇವಣಿ ಸಂಗ್ರಹಕಾರರಿಗೆ ನೌಕರರ ಸ್ಥಾನ ಘೋಷಣೆಗೆ ಸೂಚಿಸಿದೆ. ಪ್ರತಿ ತಿಂಗಳು ಕನಿಷ್ಠ ವೇತನ 9200 ರೂ.ಗಳನ್ನು ಸಂಘಟನೆಯು ಹಿಂದಿನಿಂದಲೂ ಒತ್ತಾಯ ಮಾಡುತ್ತಲೇ ಬಂದಿದೆ. ಆದರೆ ಬ್ಯಾಂಕ್ಗಳು ಯಾವ ಕ್ರಮಕ್ಕೂ ಮುಂದಾಗಿಲ್ಲ ಎಂದು ಅವರು ದೂರಿದರು.<br /> <br /> `ಠೇವಣಿ ಸಂಗ್ರಹಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಇದೇ 17 ರಂದು ಬಸವನಗುಡಿಯ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಒಂದು ದಿನಗಳ ಅಧಿವೇಶನವನ್ನು ಆಯೋಜಿಸಲಾಗಿದೆ~ ಎಂದು ಅವರು ತಿಳಿಸಿದರು.<br /> ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಮಜ್ದೂರ್ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ.ರಾಮಕೃಷ್ಣ ಪೂಂಜಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>