<p><strong>ಮಡಿಕೇರಿ:</strong> ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ಗೆ ಕೇಂದ್ರ ಸರ್ಕಾರ ನೀಡುತ್ತಿರುವ ಸಬ್ಸಿಡಿ ಹಣವನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ತಲುಪಿಸುವ ನೇರ ನಗದು ವರ್ಗಾವಣೆ ಯೋಜನೆಯು ಕೊಡಗು ಜಿಲ್ಲೆಯಲ್ಲಿ ಜನವರಿ 1ರಿಂದ ಜಾರಿಗೊಳ್ಳಲಿದೆ.<br /> <br /> ಯೋಜನೆ ಜಾರಿಗೊಳಿಸುವ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನುರಾಗ್ ತಿವಾರಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು.<br /> <br /> ನೇರ ಸೌಲಭ್ಯ ವರ್ಗಾವಣೆಯಡಿ ಎಲ್ಪಿಜಿ ಬಳಕೆದಾರರ ಆಧಾರ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಿ ಅಂಥವರಿಗೆ ಮಾರುಕಟ್ಟೆ ದರದಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ಸರಬರಾಜು ಮಾಡಬೇಕಾಗಿದೆ. ನಂತರ ದೊರೆಯಬಹುದಾದ ಸಬ್ಸಿಡಿಯನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಣೆ ಮಾಡುವಂತೆ ಅನುರಾಗ್ ತಿವಾರಿ ಅವರು ಅಧಿಕಾರಿಗಳಿಗೆ, ಗ್ಯಾಸ್ ಏಜೆನ್ಸಿಗಳಿಗೆ ಸಲಹೆ ಮಾಡಿದರು.<br /> <br /> ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣಾಚಲ ಶರ್ಮಾ ಮಾತನಾಡಿ, ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಪಡೆಯದೇ ಇರುವವರು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಲ್ಲಿ ತಮ್ಮ ಹೆಸರು ನೋಂದಾಯಿಸಿ ಈ ನಂಬರನ್ನು ಗ್ಯಾಸ್ ಏಜೆನ್ಸಿಗೆ ಮತ್ತು ಬ್ಯಾಂಕ್ ಖಾತೆಗೆ ಜೋಡಣೆ ಮಾಡಬಹುದು ಎಂದು ಅವರು ತಿಳಿಸಿದರು.<br /> <br /> ಉಳಿತಾಯ ಖಾತೆಯನ್ನು ತೆರೆದು ಆಧಾರ್ ಕಾರ್ಡ್ನೊಂದಿಗೆ ಜೋಡಿಸಿದರೆ ಎಲ್ಪಿಜಿ ಸಬ್ಸಿಡಿ, ಪಿಂಚಣಿ ಸೌಲಭ್ಯ, ವೃದ್ಧಾಪ್ಯ, ವಿಧವಾ, ಉದ್ಯೋಗ ಖಾತರಿ, ವಿಮಾ ಯೋಜನೆ, ವಿದ್ಯಾರ್ಥಿ ವೇತನ ಮತ್ತಿತರ ಸರ್ಕಾರಿ ಸವಲತ್ತುಗಳನ್ನು ಪಡೆಯಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.<br /> <br /> ಜಿಲ್ಲೆಯಲ್ಲಿ 1.15 ಲಕ್ಷ ಜನರು ಆಧಾರ್ ಕಾರ್ಡ್ ನೋಂದಣಿ ಮಾಡಿಸಿದ್ದು, 44 ಸಾವಿರ ಮಂದಿ ಆಧಾರ್ ಕಾರ್ಡ್ ಪಡೆದಿದ್ದಾರೆ. 7 ಸಾವಿರ ಮಂದಿ ಅನಿಲ ಕಂಪನಿಗೆ ಆಧಾರ್ ಸಂಖ್ಯೆಯನ್ನು ನೀಡಿದ್ದು, ಬ್ಯಾಂಕ್ ಖಾತೆಗೆ 200 ಮಂದಿ ಮಾತ್ರ ಜೋಡಣೆ ಮಾಡಿಸಿದ್ದಾರೆ ಎಂದು ಅವರು ಹೇಳಿದರು.<br /> <br /> ದೇವಿ ಎಲ್ಪಿಜಿ ಸಂಸ್ಥೆಯ ರಮೇಶ್ ಮಾತನಾಡಿ, ಎಲ್ಪಿಜಿ ಹೊಂದಿದವರೆಲ್ಲರೂ ಆಧಾರ ಕಾರ್ಡ್ ಪಡೆದಿರುವುದಿಲ್ಲ. ಈ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಬೇಕಿದೆ ಎಂದು ಅವರು ತಿಳಿಸಿದರು.<br /> <br /> ಗೋಣಿಕೊಪ್ಪದಲ್ಲಿನ ಗ್ಯಾಸ್ ಏಜೆನ್ಸಿ ಮಾಲೀಕರಾದ ಎಚ್.ಎಂ. ನಂದಕುಮಾರ್ ಮಾತನಾಡಿ, ನ್ಯಾಯಾಲಯ ನಿರ್ದೇಶನದಂತೆ ಸಬ್ಸಿಡಿ ದರದಲ್ಲಿ ಎಲ್ಪಿಜಿ ಸಿಲಿಂಡರ್ ವಿತರಿಸಬೇಕಿದೆ ಎಂದರು.<br /> <br /> ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ತಿವಾರಿ ಅವರು ಸರ್ಕಾರದ ನಿರ್ದೇಶನವನ್ನು ಪ್ರತಿಯೊಬ್ಬರೂ ಪಾಲಿಸಬೇಕಿದೆ.<br /> ಬ್ಯಾಂಕರ್ಸ್ಗಳು ಮತ್ತು ಎಲ್ಪಿಜಿ ಏಜೆನ್ಸಿಯವರು ಒಂದು ಗೂಡಿ ಆಧಾರ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಜೋಡಣೆ ಮಾಡಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಬಗ್ಗೆ ಮಾಹಿತಿ ನೀಡಬೇಕಿದೆ ಎಂದು ಅವರು ಸಲಹೆ ಮಾಡಿದರು.<br /> <br /> ಉಪ ವಿಭಾಗಾಧಿಕಾರಿ ಅಭಿರಾಮ್ ಜಿ. ಶಂಕರ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕರಾದ ನವೀದ್ ಅಹಮದ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸದಾಶಿವ, ಗ್ಯಾಸ್ ಏಜೆನ್ಸಿ ವಿತರಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ಗೆ ಕೇಂದ್ರ ಸರ್ಕಾರ ನೀಡುತ್ತಿರುವ ಸಬ್ಸಿಡಿ ಹಣವನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ತಲುಪಿಸುವ ನೇರ ನಗದು ವರ್ಗಾವಣೆ ಯೋಜನೆಯು ಕೊಡಗು ಜಿಲ್ಲೆಯಲ್ಲಿ ಜನವರಿ 1ರಿಂದ ಜಾರಿಗೊಳ್ಳಲಿದೆ.<br /> <br /> ಯೋಜನೆ ಜಾರಿಗೊಳಿಸುವ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನುರಾಗ್ ತಿವಾರಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು.<br /> <br /> ನೇರ ಸೌಲಭ್ಯ ವರ್ಗಾವಣೆಯಡಿ ಎಲ್ಪಿಜಿ ಬಳಕೆದಾರರ ಆಧಾರ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಿ ಅಂಥವರಿಗೆ ಮಾರುಕಟ್ಟೆ ದರದಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ಸರಬರಾಜು ಮಾಡಬೇಕಾಗಿದೆ. ನಂತರ ದೊರೆಯಬಹುದಾದ ಸಬ್ಸಿಡಿಯನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಣೆ ಮಾಡುವಂತೆ ಅನುರಾಗ್ ತಿವಾರಿ ಅವರು ಅಧಿಕಾರಿಗಳಿಗೆ, ಗ್ಯಾಸ್ ಏಜೆನ್ಸಿಗಳಿಗೆ ಸಲಹೆ ಮಾಡಿದರು.<br /> <br /> ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣಾಚಲ ಶರ್ಮಾ ಮಾತನಾಡಿ, ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಪಡೆಯದೇ ಇರುವವರು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಲ್ಲಿ ತಮ್ಮ ಹೆಸರು ನೋಂದಾಯಿಸಿ ಈ ನಂಬರನ್ನು ಗ್ಯಾಸ್ ಏಜೆನ್ಸಿಗೆ ಮತ್ತು ಬ್ಯಾಂಕ್ ಖಾತೆಗೆ ಜೋಡಣೆ ಮಾಡಬಹುದು ಎಂದು ಅವರು ತಿಳಿಸಿದರು.<br /> <br /> ಉಳಿತಾಯ ಖಾತೆಯನ್ನು ತೆರೆದು ಆಧಾರ್ ಕಾರ್ಡ್ನೊಂದಿಗೆ ಜೋಡಿಸಿದರೆ ಎಲ್ಪಿಜಿ ಸಬ್ಸಿಡಿ, ಪಿಂಚಣಿ ಸೌಲಭ್ಯ, ವೃದ್ಧಾಪ್ಯ, ವಿಧವಾ, ಉದ್ಯೋಗ ಖಾತರಿ, ವಿಮಾ ಯೋಜನೆ, ವಿದ್ಯಾರ್ಥಿ ವೇತನ ಮತ್ತಿತರ ಸರ್ಕಾರಿ ಸವಲತ್ತುಗಳನ್ನು ಪಡೆಯಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.<br /> <br /> ಜಿಲ್ಲೆಯಲ್ಲಿ 1.15 ಲಕ್ಷ ಜನರು ಆಧಾರ್ ಕಾರ್ಡ್ ನೋಂದಣಿ ಮಾಡಿಸಿದ್ದು, 44 ಸಾವಿರ ಮಂದಿ ಆಧಾರ್ ಕಾರ್ಡ್ ಪಡೆದಿದ್ದಾರೆ. 7 ಸಾವಿರ ಮಂದಿ ಅನಿಲ ಕಂಪನಿಗೆ ಆಧಾರ್ ಸಂಖ್ಯೆಯನ್ನು ನೀಡಿದ್ದು, ಬ್ಯಾಂಕ್ ಖಾತೆಗೆ 200 ಮಂದಿ ಮಾತ್ರ ಜೋಡಣೆ ಮಾಡಿಸಿದ್ದಾರೆ ಎಂದು ಅವರು ಹೇಳಿದರು.<br /> <br /> ದೇವಿ ಎಲ್ಪಿಜಿ ಸಂಸ್ಥೆಯ ರಮೇಶ್ ಮಾತನಾಡಿ, ಎಲ್ಪಿಜಿ ಹೊಂದಿದವರೆಲ್ಲರೂ ಆಧಾರ ಕಾರ್ಡ್ ಪಡೆದಿರುವುದಿಲ್ಲ. ಈ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಬೇಕಿದೆ ಎಂದು ಅವರು ತಿಳಿಸಿದರು.<br /> <br /> ಗೋಣಿಕೊಪ್ಪದಲ್ಲಿನ ಗ್ಯಾಸ್ ಏಜೆನ್ಸಿ ಮಾಲೀಕರಾದ ಎಚ್.ಎಂ. ನಂದಕುಮಾರ್ ಮಾತನಾಡಿ, ನ್ಯಾಯಾಲಯ ನಿರ್ದೇಶನದಂತೆ ಸಬ್ಸಿಡಿ ದರದಲ್ಲಿ ಎಲ್ಪಿಜಿ ಸಿಲಿಂಡರ್ ವಿತರಿಸಬೇಕಿದೆ ಎಂದರು.<br /> <br /> ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ತಿವಾರಿ ಅವರು ಸರ್ಕಾರದ ನಿರ್ದೇಶನವನ್ನು ಪ್ರತಿಯೊಬ್ಬರೂ ಪಾಲಿಸಬೇಕಿದೆ.<br /> ಬ್ಯಾಂಕರ್ಸ್ಗಳು ಮತ್ತು ಎಲ್ಪಿಜಿ ಏಜೆನ್ಸಿಯವರು ಒಂದು ಗೂಡಿ ಆಧಾರ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಜೋಡಣೆ ಮಾಡಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಬಗ್ಗೆ ಮಾಹಿತಿ ನೀಡಬೇಕಿದೆ ಎಂದು ಅವರು ಸಲಹೆ ಮಾಡಿದರು.<br /> <br /> ಉಪ ವಿಭಾಗಾಧಿಕಾರಿ ಅಭಿರಾಮ್ ಜಿ. ಶಂಕರ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕರಾದ ನವೀದ್ ಅಹಮದ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸದಾಶಿವ, ಗ್ಯಾಸ್ ಏಜೆನ್ಸಿ ವಿತರಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>