<p>ತುಮಕೂರು: ನಗರದ ಎಸ್ಬಿಎಂ ಮುಖ್ಯ ಶಾಖೆ ಎದುರು ಬ್ಯಾಂಕ್ ನೌಕರರು ಬುಧವಾರ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.<br /> <br /> ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರ ಮಟ್ಟದಲ್ಲಿ ಕರೆ ನೀಡಲಾಗಿದ್ದ ಬ್ಯಾಂಕ್ ಮುಷ್ಕರದ ಹಿನ್ನೆಲೆಯಲ್ಲಿ ನಗರದಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳನ್ನು ಬಂದ್ ಮಾಡಿ ನೌಕರರು ಪ್ರತಿಭಟನೆ ನಡೆಸಿದರು.<br /> <br /> ಕಂಡೇವಾಲ್ ವರದಿ ಶಿಫಾರಸುಗಳನ್ನು ರದ್ದು ಮಾಡಬೇಕು. ಕಾರ್ಮಿಕ ವಿರೋಧಿ ನೀತಿಯನ್ನು ಕೈಬಿಡಬೇಕು. ಹೊರಗುತ್ತಿಗೆ ಆಧಾರದ ನೇಮಕಾತಿ ಕೈಬಿಡಬೇಕು. ಉದ್ಯೋಗವಕಾಶ ಹೆಚ್ಚಿಸಬೇಕು. ಗ್ರಾಮೀಣ ಬ್ಯಾಂಕ್ ಶಾಖೆಗಳನ್ನು ರದ್ದು ಮಾಡಬಾರದು. ಬ್ಯಾಂಕಿಂಗ್ ರೆಗ್ಯುಲೇಶನ್ ನಿಯಮವನ್ನು ಪುನರ್ ಪರಿಶೀಲನೆ ಮಾಡಬಾರದು ಎಂದು ಪ್ರತಿಭನಾನಿರತ ನೌಕರರು ಒತ್ತಾಯಿಸಿದರು.<br /> <br /> ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಧಾರಣೆ ತರುವ ಪ್ರಯತ್ನ ಸಿಬ್ಬಂದಿ ಮೇಲೆ ದುಷ್ಪರಿಣಾಮ ಬೀರಲಿದೆ. ಈ ನಿಟ್ಟಿನಲ್ಲಿ ಎಲ್ಲ ಸುಧಾರಣಾ ಕ್ರಮಗಳನ್ನು ಕೂಡಲೇ ಕೈಬಿಡಬೇಕು. ಸಾವಿರಾರು ಜನರಿಗೆ ಅನುಕೂಲ ಕಲ್ಪಿಸುತ್ತಿರುವ ಗ್ರಾಮೀಣ ಶಾಖೆಗಳನ್ನು ಮುಚ್ಚುವ ಪ್ರಯತ್ನ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಬ್ಯಾಂಕ್ನ ಮಾನವ ಸಂಪನ್ಮೂಲ ವಿಭಾಗಗಳಿಗೆ ಸಂಬಂಧಿಸಿದಂತೆ ಹೊಸದಾಗಿ ನೀಡುವ ಸೂಚನೆ ನಿಲ್ಲಿಸಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.<br /> <br /> ಬ್ಯಾಂಕ್ ನೌಕರರಾದ ವೆಂಕಟೇಶ್, ಜಾನಕಿರಾಂಬಾಬು, ಶಂಕರ್ಜೋಷಿ. ಲಕ್ಷ್ಮಯ್ಯ, ರಾಮಕೃಷ್ಣ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.<br /> <br /> ಜಿಲ್ಲೆಯ ತಾಲ್ಲೂಕು ಕೇಂದ್ರಗಳು, ಇತರೆಡೆ ಬ್ಯಾಂಕುಗಳು ಮುಚ್ಚಿದ್ದವು. ವಹಿವಾಟು ನಡೆಯದೆ ಸಾರ್ವಜನಿಕರು ಪರದಾಡಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ನಗರದ ಎಸ್ಬಿಎಂ ಮುಖ್ಯ ಶಾಖೆ ಎದುರು ಬ್ಯಾಂಕ್ ನೌಕರರು ಬುಧವಾರ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.<br /> <br /> ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರ ಮಟ್ಟದಲ್ಲಿ ಕರೆ ನೀಡಲಾಗಿದ್ದ ಬ್ಯಾಂಕ್ ಮುಷ್ಕರದ ಹಿನ್ನೆಲೆಯಲ್ಲಿ ನಗರದಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳನ್ನು ಬಂದ್ ಮಾಡಿ ನೌಕರರು ಪ್ರತಿಭಟನೆ ನಡೆಸಿದರು.<br /> <br /> ಕಂಡೇವಾಲ್ ವರದಿ ಶಿಫಾರಸುಗಳನ್ನು ರದ್ದು ಮಾಡಬೇಕು. ಕಾರ್ಮಿಕ ವಿರೋಧಿ ನೀತಿಯನ್ನು ಕೈಬಿಡಬೇಕು. ಹೊರಗುತ್ತಿಗೆ ಆಧಾರದ ನೇಮಕಾತಿ ಕೈಬಿಡಬೇಕು. ಉದ್ಯೋಗವಕಾಶ ಹೆಚ್ಚಿಸಬೇಕು. ಗ್ರಾಮೀಣ ಬ್ಯಾಂಕ್ ಶಾಖೆಗಳನ್ನು ರದ್ದು ಮಾಡಬಾರದು. ಬ್ಯಾಂಕಿಂಗ್ ರೆಗ್ಯುಲೇಶನ್ ನಿಯಮವನ್ನು ಪುನರ್ ಪರಿಶೀಲನೆ ಮಾಡಬಾರದು ಎಂದು ಪ್ರತಿಭನಾನಿರತ ನೌಕರರು ಒತ್ತಾಯಿಸಿದರು.<br /> <br /> ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಧಾರಣೆ ತರುವ ಪ್ರಯತ್ನ ಸಿಬ್ಬಂದಿ ಮೇಲೆ ದುಷ್ಪರಿಣಾಮ ಬೀರಲಿದೆ. ಈ ನಿಟ್ಟಿನಲ್ಲಿ ಎಲ್ಲ ಸುಧಾರಣಾ ಕ್ರಮಗಳನ್ನು ಕೂಡಲೇ ಕೈಬಿಡಬೇಕು. ಸಾವಿರಾರು ಜನರಿಗೆ ಅನುಕೂಲ ಕಲ್ಪಿಸುತ್ತಿರುವ ಗ್ರಾಮೀಣ ಶಾಖೆಗಳನ್ನು ಮುಚ್ಚುವ ಪ್ರಯತ್ನ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಬ್ಯಾಂಕ್ನ ಮಾನವ ಸಂಪನ್ಮೂಲ ವಿಭಾಗಗಳಿಗೆ ಸಂಬಂಧಿಸಿದಂತೆ ಹೊಸದಾಗಿ ನೀಡುವ ಸೂಚನೆ ನಿಲ್ಲಿಸಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.<br /> <br /> ಬ್ಯಾಂಕ್ ನೌಕರರಾದ ವೆಂಕಟೇಶ್, ಜಾನಕಿರಾಂಬಾಬು, ಶಂಕರ್ಜೋಷಿ. ಲಕ್ಷ್ಮಯ್ಯ, ರಾಮಕೃಷ್ಣ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.<br /> <br /> ಜಿಲ್ಲೆಯ ತಾಲ್ಲೂಕು ಕೇಂದ್ರಗಳು, ಇತರೆಡೆ ಬ್ಯಾಂಕುಗಳು ಮುಚ್ಚಿದ್ದವು. ವಹಿವಾಟು ನಡೆಯದೆ ಸಾರ್ವಜನಿಕರು ಪರದಾಡಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>