<p>ಬೀದರ್: ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಪಿಂಚಣಿ ವ್ಯವಸ್ಥೆಯನ್ನು ಖಾಸಗೀಕರಣ ಮಡುವ ಚಿಂತನೆಯನ್ನು ಕೈಬಿಡಬೇಕು ಎಂದು ನಗರದಲ್ಲಿ ನಡೆದ ಎಸ್.ಸಿ., ಎಸ್.ಟಿ. ಸರ್ಕಾರಿ ನೌಕರರ ಪ್ರಥಮ ಜಿಲ್ಲಾ ಸಮ್ಮೇಳನ ಆಗ್ರಹಪಡಿಸಿದೆ.<br /> <br /> ಭಾನುವಾರ ನಗರದ ರಂಗಮಂದಿರದಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಪರಿಶಿಷ್ಟ ಜಾತಿ, ವರ್ಗದ ಸರ್ಕಾರಿ ನೌಕರರ ಸಮನ್ವಯ ಸಮಿತಿಯ ಮುಖಂಡರು, ಇವು ಸೇರಿದಂತೆ 10 ಬೇಡಿಕೆಗಳ ಈಡೇರಿಕೆಗೆ ಹಕ್ಕೊತ್ತಾಯ ಮಂಡಿಸಿದರು.<br /> <br /> ಸ್ವಾತಂತ್ರ್ಯ ಬಂದು 60 ವರ್ಷ ಗತಿಸಿದರೂ ಪರಿಶಿಷ್ಟ ವರ್ಗದ ಜನರು, ನೌಕರರಿಗೆ ಇನ್ನು ನಿಜವಾದ ಅರ್ಥದಲ್ಲಿ ಸ್ವಾತಂತ್ರ್ಯ ಬಂದಿಲ್ಲ. ಈ ವರ್ಗದ ನೌಕರರು, ಜನರು ಮನುಷ್ಯರೇ ಎಂದು ಮಾನಸಿಕವಾಗಿ ನೋಡುವ ಮನೋಭಾವ ಇನ್ನೂ ಮೂಡಿಲ್ಲ ಎಂದು ಮುಖಂಡರು ವಿಷಾದಿಸಿದರು.<br /> <br /> ರಾಜ್ಯ ಪರಿಶಿಷ್ಟ ಜಾತಿ, ಪಂಗಡದ ಸರ್ಕಾರಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಿ. ಶಿವಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಈ ವರ್ಗದ ಜನರು ಇನ್ನೂ ಸಂಕೋಲೆಯಿಂದ ಹೊರಬಂದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.<br /> <br /> ಸಮ್ಮೇಳನ ಉದ್ಘಾಟಿಸಿದ ಶಾಸಕ ರಹೀಮ್ ಖಾನ್, ನೌಕರರ ಪ್ರಥಮ ಸಮ್ಮೇಳನ ನಡೆದಿರುವುದು ಸ್ವಾಗತಾರ್ಹ. ಬೇಡಿಕೆ ಈಡೇರಿಕೆಗಾಗಿ ಎಲ್ಲರೂ ಹೋರಾಡಬೇಕಾಗಿದೆ ಎಂದರು.<br /> <br /> ಶಾಸಕ ರಘುನಾಥರಾವ್ ಮಲ್ಕಾಪೂರೆ, ಜಿಪಂ ಉಪಾಧ್ಯಕ್ಷೆ ಸಂತೋಷಮ್ಮ, ಮುಖಂಡರಾದ ವಿ.ಟಿ.ವೆಂಕಟೇಶಯ್ಯ, ಎಸ್.ಆರ್.ಲಿಂಗದೇವರು, ಆರ್.ಎಸ್. ದೇವಣಿಕರ್, ಆರ್.ಮೋಹನ್, ಸತ್ಯನಾರಾಯಣ, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್.ಮನೋಹರ್ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಪಿಂಚಣಿ ವ್ಯವಸ್ಥೆಯನ್ನು ಖಾಸಗೀಕರಣ ಮಡುವ ಚಿಂತನೆಯನ್ನು ಕೈಬಿಡಬೇಕು ಎಂದು ನಗರದಲ್ಲಿ ನಡೆದ ಎಸ್.ಸಿ., ಎಸ್.ಟಿ. ಸರ್ಕಾರಿ ನೌಕರರ ಪ್ರಥಮ ಜಿಲ್ಲಾ ಸಮ್ಮೇಳನ ಆಗ್ರಹಪಡಿಸಿದೆ.<br /> <br /> ಭಾನುವಾರ ನಗರದ ರಂಗಮಂದಿರದಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಪರಿಶಿಷ್ಟ ಜಾತಿ, ವರ್ಗದ ಸರ್ಕಾರಿ ನೌಕರರ ಸಮನ್ವಯ ಸಮಿತಿಯ ಮುಖಂಡರು, ಇವು ಸೇರಿದಂತೆ 10 ಬೇಡಿಕೆಗಳ ಈಡೇರಿಕೆಗೆ ಹಕ್ಕೊತ್ತಾಯ ಮಂಡಿಸಿದರು.<br /> <br /> ಸ್ವಾತಂತ್ರ್ಯ ಬಂದು 60 ವರ್ಷ ಗತಿಸಿದರೂ ಪರಿಶಿಷ್ಟ ವರ್ಗದ ಜನರು, ನೌಕರರಿಗೆ ಇನ್ನು ನಿಜವಾದ ಅರ್ಥದಲ್ಲಿ ಸ್ವಾತಂತ್ರ್ಯ ಬಂದಿಲ್ಲ. ಈ ವರ್ಗದ ನೌಕರರು, ಜನರು ಮನುಷ್ಯರೇ ಎಂದು ಮಾನಸಿಕವಾಗಿ ನೋಡುವ ಮನೋಭಾವ ಇನ್ನೂ ಮೂಡಿಲ್ಲ ಎಂದು ಮುಖಂಡರು ವಿಷಾದಿಸಿದರು.<br /> <br /> ರಾಜ್ಯ ಪರಿಶಿಷ್ಟ ಜಾತಿ, ಪಂಗಡದ ಸರ್ಕಾರಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಿ. ಶಿವಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಈ ವರ್ಗದ ಜನರು ಇನ್ನೂ ಸಂಕೋಲೆಯಿಂದ ಹೊರಬಂದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.<br /> <br /> ಸಮ್ಮೇಳನ ಉದ್ಘಾಟಿಸಿದ ಶಾಸಕ ರಹೀಮ್ ಖಾನ್, ನೌಕರರ ಪ್ರಥಮ ಸಮ್ಮೇಳನ ನಡೆದಿರುವುದು ಸ್ವಾಗತಾರ್ಹ. ಬೇಡಿಕೆ ಈಡೇರಿಕೆಗಾಗಿ ಎಲ್ಲರೂ ಹೋರಾಡಬೇಕಾಗಿದೆ ಎಂದರು.<br /> <br /> ಶಾಸಕ ರಘುನಾಥರಾವ್ ಮಲ್ಕಾಪೂರೆ, ಜಿಪಂ ಉಪಾಧ್ಯಕ್ಷೆ ಸಂತೋಷಮ್ಮ, ಮುಖಂಡರಾದ ವಿ.ಟಿ.ವೆಂಕಟೇಶಯ್ಯ, ಎಸ್.ಆರ್.ಲಿಂಗದೇವರು, ಆರ್.ಎಸ್. ದೇವಣಿಕರ್, ಆರ್.ಮೋಹನ್, ಸತ್ಯನಾರಾಯಣ, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್.ಮನೋಹರ್ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>