<p><strong>ನವದೆಹಲಿ (ಪಿಟಿಐ):</strong> ಭಾರತದ ಗುರುಸಾಯಿದತ್ ಅವರು ಆಕ್ಲೆಂಡ್ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ಇಂಟರ್ನ್ಯಾಷನಲ್ ಚಾಲೆಂಜ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೋಲು ಅನುಭವಿಸಿದರು. ಇದರೊಂದಿಗೆ ಭಾರತದ ಸವಾಲಿಗೆ ತೆರೆಬಿತ್ತು.ಶನಿವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗುರುಸಾಯಿದತ್ 20-22, 23-21, 16-21 ರಲ್ಲಿ ಹಾಂಕಾಂಗ್ನ ವಿಂಗ್ ಕಿ ವೊಂಗ್ ಕೈಯಲ್ಲಿ ಪರಾಭವಗೊಂಡರು.<br /> <br /> ಈ ಮ್ಯಾರಥಾನ್ ಹೋರಾಟ ಒಂದು ಗಂಟೆಗೂ ಅಧಿಕ ಕಾಲ ನಡೆಯಿತು. ಮೊದಲ ಸೆಟ್ನಲ್ಲಿ ಸೋಲು ಅನುಭವಿಸಿದ ಗುರು ಎರಡನೇ ಸೆಟ್ನಲ್ಲಿ ತಿರುಗೇಟು ನೀಡಿದರು. ಜಿದ್ದಾಜಿದ್ದಿನ ಹೋರಾಟದಲ್ಲಿ ಕೊನೆಯ ಸೆಟ್ನ್ನು 23-21 ರಲ್ಲಿ ಗೆದ್ದುಕೊಂಡರು. ಆದರೆ ಹಾಂಕಾಂಗ್ನ ಆಟಗಾರ ಮೂರನೇ ಸೆಟ್ನಲ್ಲಿ ಎಚ್ಚರಿಕೆಯ ಆಟವಾಡಿ ಪಂದ್ಯ ತಮ್ಮದಾಗಿಸಿಕೊಂಡರು.ಕಣದಲ್ಲಿದ್ದ ಭಾರತದ ಇನ್ನೊಬ್ಬ ಸ್ಪರ್ಧಿ ಅರವಿಂದ್ ಭಟ್ ಪ್ರೀ ಕ್ವಾರ್ಟರ್ ಫೈನಲ್ನಲ್ಲಿ ಸೋಲು ಅನುಭವಿಸಿದ್ದರು. ಚೈನೀಸ್ ತೈಪೆಯ ಜೆನ್ ಹಾವೊ ಸು 21-19, 21-16 ರಲ್ಲಿ ಅರವಿಂದ್ ವಿರುದ್ಧ ಜಯ ಸಾಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಭಾರತದ ಗುರುಸಾಯಿದತ್ ಅವರು ಆಕ್ಲೆಂಡ್ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ಇಂಟರ್ನ್ಯಾಷನಲ್ ಚಾಲೆಂಜ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೋಲು ಅನುಭವಿಸಿದರು. ಇದರೊಂದಿಗೆ ಭಾರತದ ಸವಾಲಿಗೆ ತೆರೆಬಿತ್ತು.ಶನಿವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗುರುಸಾಯಿದತ್ 20-22, 23-21, 16-21 ರಲ್ಲಿ ಹಾಂಕಾಂಗ್ನ ವಿಂಗ್ ಕಿ ವೊಂಗ್ ಕೈಯಲ್ಲಿ ಪರಾಭವಗೊಂಡರು.<br /> <br /> ಈ ಮ್ಯಾರಥಾನ್ ಹೋರಾಟ ಒಂದು ಗಂಟೆಗೂ ಅಧಿಕ ಕಾಲ ನಡೆಯಿತು. ಮೊದಲ ಸೆಟ್ನಲ್ಲಿ ಸೋಲು ಅನುಭವಿಸಿದ ಗುರು ಎರಡನೇ ಸೆಟ್ನಲ್ಲಿ ತಿರುಗೇಟು ನೀಡಿದರು. ಜಿದ್ದಾಜಿದ್ದಿನ ಹೋರಾಟದಲ್ಲಿ ಕೊನೆಯ ಸೆಟ್ನ್ನು 23-21 ರಲ್ಲಿ ಗೆದ್ದುಕೊಂಡರು. ಆದರೆ ಹಾಂಕಾಂಗ್ನ ಆಟಗಾರ ಮೂರನೇ ಸೆಟ್ನಲ್ಲಿ ಎಚ್ಚರಿಕೆಯ ಆಟವಾಡಿ ಪಂದ್ಯ ತಮ್ಮದಾಗಿಸಿಕೊಂಡರು.ಕಣದಲ್ಲಿದ್ದ ಭಾರತದ ಇನ್ನೊಬ್ಬ ಸ್ಪರ್ಧಿ ಅರವಿಂದ್ ಭಟ್ ಪ್ರೀ ಕ್ವಾರ್ಟರ್ ಫೈನಲ್ನಲ್ಲಿ ಸೋಲು ಅನುಭವಿಸಿದ್ದರು. ಚೈನೀಸ್ ತೈಪೆಯ ಜೆನ್ ಹಾವೊ ಸು 21-19, 21-16 ರಲ್ಲಿ ಅರವಿಂದ್ ವಿರುದ್ಧ ಜಯ ಸಾಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>