ಬ್ಯಾಡ್ಮಿಂಟನ್: ಸೆಮಿಫೈನಲ್ಗೆ ಅರವಿಂದ್ ಭಟ್
ಬೆಂಗಳೂರು: ಅಗ್ರ ಶ್ರೇಯಾಂಕದ ಅರವಿಂದ್ ಭಟ್ ತ್ರಿ ಸ್ಟಾರ್ ರಾಜ್ಯ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದ ಸಿಂಗಲ್ಸ್ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಕೆನರಾ ಯೂನಿಯನ್ ಕೋರ್ಟ್ನಲ್ಲಿ ಸೋಮವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅರವಿಂದ್ 21-15, 21-16ರಲ್ಲಿ ಆರನೇ ಶ್ರೇಯಾಂಕದ ರೋಹನ್ ಕ್ಯಾಸ್ಟಲಿನೊ ಎದುರು ಗೆಲುವು ಸಾಧಿಸಿದರು.
ಇತರ ಪಂದ್ಯಗಳಲ್ಲಿ ಹೇಮಂತ್ ಗೌಡ 21-19, 15-21, 21-18ರಲ್ಲಿ ಬಿ.ಆರ್. ಸಂಕೀರ್ತ್ ಮೇಲೂ, ಆರ್.ಎನ್. ಸೂರಜ್ 21-13, 21-16ರಲ್ಲಿ ವೆಂಕಟೇಶ್ ಪ್ರಸಾದ್ ವಿರುದ್ಧವೂ, ಎಸ್. ಅದರ್ಶ ಕುಮಾರ್ 21-11, 21-8ರಲ್ಲಿ ಕಾರ್ತಿಕ್ ಎಂ. ಮೇಲೂ ಗೆಲುವು ಸಾಧಿಸಿ ನಾಲ್ಕರ ಘಟ್ಟ ಪ್ರವೇಶಿಸಿದರು.
ಮಹಿಳೆಯರ ಕ್ವಾರ್ಟರ್ ಫೈನಲ್ನಲ್ಲಿ ಜಿ.ಎಂ. ನಿಶ್ವಿತಾ 21-15, 21-13ರಲ್ಲಿ ಮೀರಾ ಮಹಾದೇವನ್ ಎದುರು ಗೆಲುವು ಪಡೆದು ನಾಲ್ಕರ ಘಟ್ಟಕ್ಕೆ ಲಗ್ಗೆ ಇಟ್ಟರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.