<p><strong>ಬೆಂಗಳೂರು:</strong> ಕರ್ನಾಟಕ ರಾಜ್ಯ ಬ್ಯಾಸ್ಕೆಟ್ಬಾಲ್ ಸಂಸ್ಥೆಯ ಅಧ್ಯಕ್ಷರಾಗಿ ಪೊಲೀಸ್ ಮಹಾನಿರ್ದೇಶಕ (ಅಗ್ನಿಶಾಮಕ ದಳ ಮತ್ತು ತುರ್ತುಸೇವಾ ಇಲಾಖೆ) ಓಂ ಪ್ರಕಾಶ್ ಮತ್ತು ಕಾರ್ಯದರ್ಶಿಯಾಗಿ ಕೆ.ಗೋವಿಂದರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.<br /> <br /> ಭಾನುವಾರ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಯಾದ ಇತರ ಪದಾಧಿಕಾರಿಗಳು ಇಂತಿದ್ದಾರೆ.<br /> <br /> ಉಪಾಧ್ಯಕ್ಷರು: ಆರ್.ರಾಜನ್, ನಂದಿನಿ ಬಸಪ್ಪ, ಡಿ.ಸಿ.ತಮ್ಮಣ್ಣ, ರಾಜೇಂದ್ರ ಪ್ರಸಾದ್, ಜಂಟಿ ಕಾರ್ಯದರ್ಶಿಗಳು: ಎಸ್.ಗುಣಶೇಖರ್, ಆರ್.ಪ್ರಕಾಶ್, ಮೋಹನ್ ಕುಮಾರ್. ಖಜಾಂಚಿ;ಎಚ್.ಶ್ರೀನಿವಾಸಮೂರ್ತಿ. ಸದಸ್ಯರು: ದಾವಣಗೆರೆಯ ಮರ್ಚೆಂಟ್ಸ್ ಸ್ಪೋರ್ಟ್ಸ್ ಕ್ಲಬ್, ಕೋಲಾರದ ಕನಕ ಬ್ಯಾಸ್ಕೆಟ್ಬಾಲ್ ಕ್ಲಬ್, ದೇವಾಂಗ ಯೂನಿಯನ್ ಸ್ಪೋರ್ಟ್ಸ್ ಕ್ಲಬ್, ಜಯನಗರ ಸ್ಪೋರ್ಟ್ಸ್ ಕ್ಲಬ್, ವಿವೇಕನಗರ ಬ್ಯಾಸ್ಕೆಟ್ಬಾಲ್ ಕ್ಲಬ್ ಮತ್ತು ವಿಜಯಾ ಬ್ಯಾಂಕ್.<br /> <br /> <strong>ರಾಜ್ಯ ಆಟಗಾರರಿಗೆ ಮಾಸಿಕ ವೇತನ</strong>: ಸಭೆಯಲ್ಲಿ 50 ಲಕ್ಷ ರೂಪಾಯಿಗಳ ವಾರ್ಷಿಕ ಬಜೆಟ್ನ ವಿವರಗಳನ್ನು ನೀಡಲಾಯಿತು. ಇದರ ಪ್ರಕಾರ ರಾಜ್ಯ ತಂಡದ ಆಟಗಾರರಿಗೆ ಮಾಸಿಕ ವೇತನವನ್ನು ನೀಡಲಾಗುವುದು. ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಗೆಲ್ಲುವ ತಂಡಕ್ಕೆ ಎರಡು ಲಕ್ಷ ರೂಪಾಯಿಗಳನ್ನು ನೀಡಲಾಗುತ್ತದೆ. <br /> <br /> ನವೆಂಬರ್ 22ರಿಂದ ಶಿವಮೊಗ್ಗದಲ್ಲಿ ರಾಜ್ಯ ಅಸೋಸಿಯೇಷನ್ ಕಪ್ ಟೂರ್ನಿ ಮತ್ತು ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಫೆಡರೇಷನ್ ಕಪ್ ಟೂರ್ನಿಗಳನ್ನು ಸಂಘಟಿಸಲಾಗುವುದು ಎಂದೂ ಸಭೆಯಲ್ಲಿ ಪ್ರಕಟಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ರಾಜ್ಯ ಬ್ಯಾಸ್ಕೆಟ್ಬಾಲ್ ಸಂಸ್ಥೆಯ ಅಧ್ಯಕ್ಷರಾಗಿ ಪೊಲೀಸ್ ಮಹಾನಿರ್ದೇಶಕ (ಅಗ್ನಿಶಾಮಕ ದಳ ಮತ್ತು ತುರ್ತುಸೇವಾ ಇಲಾಖೆ) ಓಂ ಪ್ರಕಾಶ್ ಮತ್ತು ಕಾರ್ಯದರ್ಶಿಯಾಗಿ ಕೆ.ಗೋವಿಂದರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.<br /> <br /> ಭಾನುವಾರ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಯಾದ ಇತರ ಪದಾಧಿಕಾರಿಗಳು ಇಂತಿದ್ದಾರೆ.<br /> <br /> ಉಪಾಧ್ಯಕ್ಷರು: ಆರ್.ರಾಜನ್, ನಂದಿನಿ ಬಸಪ್ಪ, ಡಿ.ಸಿ.ತಮ್ಮಣ್ಣ, ರಾಜೇಂದ್ರ ಪ್ರಸಾದ್, ಜಂಟಿ ಕಾರ್ಯದರ್ಶಿಗಳು: ಎಸ್.ಗುಣಶೇಖರ್, ಆರ್.ಪ್ರಕಾಶ್, ಮೋಹನ್ ಕುಮಾರ್. ಖಜಾಂಚಿ;ಎಚ್.ಶ್ರೀನಿವಾಸಮೂರ್ತಿ. ಸದಸ್ಯರು: ದಾವಣಗೆರೆಯ ಮರ್ಚೆಂಟ್ಸ್ ಸ್ಪೋರ್ಟ್ಸ್ ಕ್ಲಬ್, ಕೋಲಾರದ ಕನಕ ಬ್ಯಾಸ್ಕೆಟ್ಬಾಲ್ ಕ್ಲಬ್, ದೇವಾಂಗ ಯೂನಿಯನ್ ಸ್ಪೋರ್ಟ್ಸ್ ಕ್ಲಬ್, ಜಯನಗರ ಸ್ಪೋರ್ಟ್ಸ್ ಕ್ಲಬ್, ವಿವೇಕನಗರ ಬ್ಯಾಸ್ಕೆಟ್ಬಾಲ್ ಕ್ಲಬ್ ಮತ್ತು ವಿಜಯಾ ಬ್ಯಾಂಕ್.<br /> <br /> <strong>ರಾಜ್ಯ ಆಟಗಾರರಿಗೆ ಮಾಸಿಕ ವೇತನ</strong>: ಸಭೆಯಲ್ಲಿ 50 ಲಕ್ಷ ರೂಪಾಯಿಗಳ ವಾರ್ಷಿಕ ಬಜೆಟ್ನ ವಿವರಗಳನ್ನು ನೀಡಲಾಯಿತು. ಇದರ ಪ್ರಕಾರ ರಾಜ್ಯ ತಂಡದ ಆಟಗಾರರಿಗೆ ಮಾಸಿಕ ವೇತನವನ್ನು ನೀಡಲಾಗುವುದು. ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಗೆಲ್ಲುವ ತಂಡಕ್ಕೆ ಎರಡು ಲಕ್ಷ ರೂಪಾಯಿಗಳನ್ನು ನೀಡಲಾಗುತ್ತದೆ. <br /> <br /> ನವೆಂಬರ್ 22ರಿಂದ ಶಿವಮೊಗ್ಗದಲ್ಲಿ ರಾಜ್ಯ ಅಸೋಸಿಯೇಷನ್ ಕಪ್ ಟೂರ್ನಿ ಮತ್ತು ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಫೆಡರೇಷನ್ ಕಪ್ ಟೂರ್ನಿಗಳನ್ನು ಸಂಘಟಿಸಲಾಗುವುದು ಎಂದೂ ಸಭೆಯಲ್ಲಿ ಪ್ರಕಟಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>