<p><strong>ಬ್ರಹ್ಮಾವರ:</strong> ನಗರದ ಕ್ರಾಸ್ಲ್ಯಾಂಡ್ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಪರಿಸರದ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಕ್ರಾಸ್ರೋಡ್ನ ಸಮಗ್ರ ಪ್ರಶಸ್ತಿಯನ್ನು ಬ್ರಹ್ಮಾವರದ ಎಸ್.ಎಂ.ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪಡೆದುಕೊಂಡಿತು.<br /> <br /> ಪೇತ್ರಿಯ ವಿದ್ಯಾ ಟ್ಯುಟೋರಿಯಲ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.<br /> ಬಹುಮಾನ ವಿತರಿಸಿ ಮಾತನಾಡಿದ ಕೋಟ ಪಡುಕೆರೆ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಮಂಜುನಾಥ ಆಚಾರಿ ವಿದ್ಯಾರ್ಥಿಗಳ ಜೀವನದಲ್ಲಿ ಕನಸುಗಳೊಂದಿಗೆ ಪ್ರಯತ್ನವೂ ಅಗತ್ಯವಾಗಿದೆ.<br /> <br /> ಸಾಧಕ ವ್ಯಕ್ತಿಗಳ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಂಡು ಜೀವನವನ್ನು ರೂಪಿಸಿಕೊಳ್ಳಬೇಕು. ಸಿಗುವ ಅವಕಾಶ<br /> ಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೊರಹಾಕಿ ಜೀವನದಲ್ಲಿ ಯಶಸ್ಸನ್ನು ಗಳಿಸಿ ಎಂದು ಶುಭ ಹಾರೈಸಿದರು.<br /> <br /> ಪದವಿ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ.ಎಲಿಜೆಬೆತ್ ರಾಯ್ ಮಾತನಾಡಿ ಸ್ಪರ್ಧೆಯಲ್ಲಿ ಸೋಲು ಗೆಲುವುಗಳು ನಿಶ್ಚಿತ. ಸೋಲನ್ನು ಸ್ವೀಕರಿಸಿ ಭವಿಷ್ಯವನ್ನು ನಿರ್ಮಿಸಿಕೊಳ್ಳುವಂತೆ ಸಲಹೆ ನೀಡಿದರು.<br /> <br /> ಕನ್ನಡ, ಆಂಗ್ಲ ಭಾಷೆಯಲ್ಲಿ ಭಾಚಣ ಸ್ಪರ್ಧೆ, ಸಮೂಹಗಾನ, ಸಮೂಹ ನೃತ್ಯ ಮತ್ತು ರಸಪ್ರಶ್ನೆಗೆ ನಡೆದ ಸ್ಪರ್ಧೆಯಲ್ಲಿ ಪರಿಸರದ 6ಪದವಿ ಪೂರ್ವ ಮತ್ತು ಟ್ಯುಟೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.<br /> <br /> ಉಪನ್ಯಾಸಕ ಶೇಷಗಿರಿ ಭಟ್, ವಿದ್ಯಾರ್ಥಿ ಸಂಘದ ಸಂಚಾಲಕಿ ಸರಿತಾ, ಉಪನ್ಯಾಸಕಿಯರಾದ ಪ್ರತಿಭಾ ಶೆಟ್ಟಿ, ಮಮತಾ, ಜ್ಯೋತಿ, ಸ್ಮಿತಾ ಮೈಪಾಡಿ, ರಶ್ಮಿನ್ ತನ್ವೀರ್, ಉಪನ್ಯಾಸಕ ರವಿ ಶಾಸ್ರ್ತಿ ಉಪಸ್ಥಿತರಿದ್ದರು.<br /> <br /> ವಿದ್ಯಾರ್ಥಿಗಳಾದ ಜೆಫಿನ್ ಸ್ವಾಗತಿಸಿದರು. ಜೆರಿನ್ ವಂದಿಸಿದರು. ಲ್ಯೂಕ್ ಕಾರ್ಯಕ್ರಮ ನಿರೂಪಿಸಿದರು.<br /> ಇದಕ್ಕೂ ಮುನ್ನ ಬೆಳಿಗ್ಗೆ ಬ್ರಹ್ಮಾವರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸವಿತಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ನಗರದ ಕ್ರಾಸ್ಲ್ಯಾಂಡ್ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಪರಿಸರದ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಕ್ರಾಸ್ರೋಡ್ನ ಸಮಗ್ರ ಪ್ರಶಸ್ತಿಯನ್ನು ಬ್ರಹ್ಮಾವರದ ಎಸ್.ಎಂ.ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪಡೆದುಕೊಂಡಿತು.<br /> <br /> ಪೇತ್ರಿಯ ವಿದ್ಯಾ ಟ್ಯುಟೋರಿಯಲ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.<br /> ಬಹುಮಾನ ವಿತರಿಸಿ ಮಾತನಾಡಿದ ಕೋಟ ಪಡುಕೆರೆ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಮಂಜುನಾಥ ಆಚಾರಿ ವಿದ್ಯಾರ್ಥಿಗಳ ಜೀವನದಲ್ಲಿ ಕನಸುಗಳೊಂದಿಗೆ ಪ್ರಯತ್ನವೂ ಅಗತ್ಯವಾಗಿದೆ.<br /> <br /> ಸಾಧಕ ವ್ಯಕ್ತಿಗಳ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಂಡು ಜೀವನವನ್ನು ರೂಪಿಸಿಕೊಳ್ಳಬೇಕು. ಸಿಗುವ ಅವಕಾಶ<br /> ಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೊರಹಾಕಿ ಜೀವನದಲ್ಲಿ ಯಶಸ್ಸನ್ನು ಗಳಿಸಿ ಎಂದು ಶುಭ ಹಾರೈಸಿದರು.<br /> <br /> ಪದವಿ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ.ಎಲಿಜೆಬೆತ್ ರಾಯ್ ಮಾತನಾಡಿ ಸ್ಪರ್ಧೆಯಲ್ಲಿ ಸೋಲು ಗೆಲುವುಗಳು ನಿಶ್ಚಿತ. ಸೋಲನ್ನು ಸ್ವೀಕರಿಸಿ ಭವಿಷ್ಯವನ್ನು ನಿರ್ಮಿಸಿಕೊಳ್ಳುವಂತೆ ಸಲಹೆ ನೀಡಿದರು.<br /> <br /> ಕನ್ನಡ, ಆಂಗ್ಲ ಭಾಷೆಯಲ್ಲಿ ಭಾಚಣ ಸ್ಪರ್ಧೆ, ಸಮೂಹಗಾನ, ಸಮೂಹ ನೃತ್ಯ ಮತ್ತು ರಸಪ್ರಶ್ನೆಗೆ ನಡೆದ ಸ್ಪರ್ಧೆಯಲ್ಲಿ ಪರಿಸರದ 6ಪದವಿ ಪೂರ್ವ ಮತ್ತು ಟ್ಯುಟೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.<br /> <br /> ಉಪನ್ಯಾಸಕ ಶೇಷಗಿರಿ ಭಟ್, ವಿದ್ಯಾರ್ಥಿ ಸಂಘದ ಸಂಚಾಲಕಿ ಸರಿತಾ, ಉಪನ್ಯಾಸಕಿಯರಾದ ಪ್ರತಿಭಾ ಶೆಟ್ಟಿ, ಮಮತಾ, ಜ್ಯೋತಿ, ಸ್ಮಿತಾ ಮೈಪಾಡಿ, ರಶ್ಮಿನ್ ತನ್ವೀರ್, ಉಪನ್ಯಾಸಕ ರವಿ ಶಾಸ್ರ್ತಿ ಉಪಸ್ಥಿತರಿದ್ದರು.<br /> <br /> ವಿದ್ಯಾರ್ಥಿಗಳಾದ ಜೆಫಿನ್ ಸ್ವಾಗತಿಸಿದರು. ಜೆರಿನ್ ವಂದಿಸಿದರು. ಲ್ಯೂಕ್ ಕಾರ್ಯಕ್ರಮ ನಿರೂಪಿಸಿದರು.<br /> ಇದಕ್ಕೂ ಮುನ್ನ ಬೆಳಿಗ್ಗೆ ಬ್ರಹ್ಮಾವರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸವಿತಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>