<p><strong>ಸಾವೊಪೊಲೊ (ಎಪಿ):</strong> ರಾಜಕೀಯ ಭ್ರಷ್ಟಾಚಾರ ನಿರ್ಮೂಲನೆಗೆ ಆಗ್ರಹಿಸಿ ಬ್ರೆಜಿಲ್ನಲ್ಲಿ ನಡೆಯುತ್ತಿರುವ ಚಳವಳಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎರಡೂವರೆ ಲಕ್ಷ ಮಂದಿ ಭಾನುವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದರು.<br /> <br /> ಪ್ರತಿಭಟನೆಯಲ್ಲಿ ಪಾಲ್ಗೊಂಡ ಜನರು, ರಾಜಕೀಯ ವ್ಯವಸ್ಥೆಯನ್ನು ಸುಧಾರಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳದ ಹೊರತೂ ಚಳವಳಿ ಕೈಬಿಡುವುದಿಲ್ಲ ಎಂದು ಘೋಷಿಸಿದರು. ಭ್ರಷ್ಟ ರಾಜಕಾರಣಿಗಳನ್ನು ಜೈಲುಪಾಲು ಮಾಡದಿರುವ ಉದ್ದೇಶದಿಂದ ರೂಪಿಸಲಾದ ಹಾಗೂ ಅಪರಾಧ ಪ್ರಕರಣಗಳ ತನಿಖೆಗೆ ಮಿತಿ ಹಾಕುವ `ಪಿಇಸಿ 37' ಎಂಬ ಕಾನೂನನ್ನು ಕೈಬಿಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.<br /> <br /> ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕಳೆದ ವರ್ಷ 24 ಜನರಿಗೆ ದಂಡನೆ ವಿಧಿಸಿದ ಬಳಿಕ, ಭ್ರಷ್ಟಾಚಾರದ ವಿರುದ್ಧ ಜನಾಂದೋಲನ ಶುರುವಾಗಿದೆ. ಶಿಕ್ಷೆಗೆ ಗುರಿಯಾಗಿದ್ದವರು ಸಲ್ಲಿಸಿದ ಮೇಲ್ಮನವಿಯಿಂದಾಗಿ ಇನ್ನೂ ಅವರಿಗೆ ಶಿಕ್ಷೆ ಜಾರಿಯಾಗಿಲ್ಲ. ಇದು ಬ್ರೆಜಿಲ್ ನಿವಾಸಿಗಳನ್ನು ಕೆರಳಿಸಿದೆ.<br /> <br /> ಈ ಮಧ್ಯೆ ಶನಿವಾರ ರಾತ್ರಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದಿಲ್ಮಾ ರೌಸೆಫ್, ಶಾಂತಿಯುತ ಪ್ರತಿಭಟನೆಗೆ ಸರ್ಕಾರ ಅಡ್ಡಿಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಲ್ಲದೇ ತಮ್ಮ ಸರ್ಕಾರ ಯಾವತ್ತಿಗೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದರು.<br /> <br /> `ಭ್ರಷ್ಟಾಚಾರ ನಿರ್ಮೂಲನೆ ಕುರಿತಂತೆ ಜನರ ಆಶಯವನ್ನು ದಿಲ್ಮಾ ಅವರು ಸರಿಯಾಗಿ ಅರ್ಥೈಸಿಕೊಳ್ಳುತ್ತಿಲ್ಲ. ಅವರು ಬರೀ ಮಾತನಾಡಿದರಷ್ಟೇ ಹೊರತೂ ಮತ್ತೇನೂ ಹೇಳಲಿಲ್ಲ' ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೈದ್ಯಕೀಯ ವಿದ್ಯಾರ್ಥಿ ಮಯೂರ ಫರ್ನಾಂಡಿಸ್ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಬ್ರೆಜಿಲ್ನ ನೂರಕ್ಕೂ ಹೆಚ್ಚು ನಗರಗಳಲ್ಲಿ ಸಾವಿರಾರು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಲೊ ಹಾರಿಜಾಂಟ್ ನಗರದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರೆ, ಸಾಲ್ವಡರ್ನಲ್ಲಿ ಸಹ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಘಟನೆ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾವೊಪೊಲೊ (ಎಪಿ):</strong> ರಾಜಕೀಯ ಭ್ರಷ್ಟಾಚಾರ ನಿರ್ಮೂಲನೆಗೆ ಆಗ್ರಹಿಸಿ ಬ್ರೆಜಿಲ್ನಲ್ಲಿ ನಡೆಯುತ್ತಿರುವ ಚಳವಳಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎರಡೂವರೆ ಲಕ್ಷ ಮಂದಿ ಭಾನುವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದರು.<br /> <br /> ಪ್ರತಿಭಟನೆಯಲ್ಲಿ ಪಾಲ್ಗೊಂಡ ಜನರು, ರಾಜಕೀಯ ವ್ಯವಸ್ಥೆಯನ್ನು ಸುಧಾರಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳದ ಹೊರತೂ ಚಳವಳಿ ಕೈಬಿಡುವುದಿಲ್ಲ ಎಂದು ಘೋಷಿಸಿದರು. ಭ್ರಷ್ಟ ರಾಜಕಾರಣಿಗಳನ್ನು ಜೈಲುಪಾಲು ಮಾಡದಿರುವ ಉದ್ದೇಶದಿಂದ ರೂಪಿಸಲಾದ ಹಾಗೂ ಅಪರಾಧ ಪ್ರಕರಣಗಳ ತನಿಖೆಗೆ ಮಿತಿ ಹಾಕುವ `ಪಿಇಸಿ 37' ಎಂಬ ಕಾನೂನನ್ನು ಕೈಬಿಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.<br /> <br /> ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕಳೆದ ವರ್ಷ 24 ಜನರಿಗೆ ದಂಡನೆ ವಿಧಿಸಿದ ಬಳಿಕ, ಭ್ರಷ್ಟಾಚಾರದ ವಿರುದ್ಧ ಜನಾಂದೋಲನ ಶುರುವಾಗಿದೆ. ಶಿಕ್ಷೆಗೆ ಗುರಿಯಾಗಿದ್ದವರು ಸಲ್ಲಿಸಿದ ಮೇಲ್ಮನವಿಯಿಂದಾಗಿ ಇನ್ನೂ ಅವರಿಗೆ ಶಿಕ್ಷೆ ಜಾರಿಯಾಗಿಲ್ಲ. ಇದು ಬ್ರೆಜಿಲ್ ನಿವಾಸಿಗಳನ್ನು ಕೆರಳಿಸಿದೆ.<br /> <br /> ಈ ಮಧ್ಯೆ ಶನಿವಾರ ರಾತ್ರಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದಿಲ್ಮಾ ರೌಸೆಫ್, ಶಾಂತಿಯುತ ಪ್ರತಿಭಟನೆಗೆ ಸರ್ಕಾರ ಅಡ್ಡಿಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಲ್ಲದೇ ತಮ್ಮ ಸರ್ಕಾರ ಯಾವತ್ತಿಗೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದರು.<br /> <br /> `ಭ್ರಷ್ಟಾಚಾರ ನಿರ್ಮೂಲನೆ ಕುರಿತಂತೆ ಜನರ ಆಶಯವನ್ನು ದಿಲ್ಮಾ ಅವರು ಸರಿಯಾಗಿ ಅರ್ಥೈಸಿಕೊಳ್ಳುತ್ತಿಲ್ಲ. ಅವರು ಬರೀ ಮಾತನಾಡಿದರಷ್ಟೇ ಹೊರತೂ ಮತ್ತೇನೂ ಹೇಳಲಿಲ್ಲ' ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೈದ್ಯಕೀಯ ವಿದ್ಯಾರ್ಥಿ ಮಯೂರ ಫರ್ನಾಂಡಿಸ್ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಬ್ರೆಜಿಲ್ನ ನೂರಕ್ಕೂ ಹೆಚ್ಚು ನಗರಗಳಲ್ಲಿ ಸಾವಿರಾರು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಲೊ ಹಾರಿಜಾಂಟ್ ನಗರದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರೆ, ಸಾಲ್ವಡರ್ನಲ್ಲಿ ಸಹ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಘಟನೆ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>