<p><strong>ಬ್ರಹ್ಮಾವರ: </strong>ಟೆಂಪೊದಲ್ಲಿ ದನವನ್ನು ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕೊಲೆ ಮಾಡಿದ ಘಟನೆ ಬ್ರಹ್ಮಾವರದ ಕೊಕ್ಕರ್ಣೆಯ ಕೆಂಜೂರು ಶಾಲೆಯ ಬಳಿ ಬುಧವಾರ ಮಧ್ಯರಾತ್ರಿ ನಡೆದಿದೆ.</p>.<p>ಕೆಂಜೂರಿನ ಪ್ರವೀಣ ಪೂಜಾರಿ (28) ಕೊಲೆಯಾದ ಬಿಜೆಪಿ ಕಾರ್ಯಕರ್ತ. ಪ್ರವೀಣ್ ಮತ್ತು ಅವರ ಸ್ನೇಹಿತ ಅಕ್ಷಯ್ ದೇವಾಡಿಗ (20) ವಾಹನದಲ್ಲಿ 4 ದನಗಳನ್ನು ಸಾಗಿಸುತ್ತಿದ್ದರು. ಅವರ ಮೇಲೆ ಹಿಂದೂ ಜಾಗರಣ ವೇದಿಕೆಯ ಸುಮಾರು 30 ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಪ್ರವೀಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಕ್ಷಯ್ ಕೂಡ ಗಾಯಗೊಂಡಿದ್ದು ಬ್ರಹ್ಮಾವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.<br /> <br /> ಬ್ರಹ್ಮಾವರದಲ್ಲಿ ಪೆಟ್ರೋಲ್ ಬಂಕ್ ಹೊಂದಿರುವ ಹಿಂದೂ ಜಾಗರಣ ವೇದಿಕೆ ಮುಖಂಡ ಅರವಿಂದ ಸೇರಿಗಾರ ಎಂಬಾತ ತನ್ನ ಸಹಚರ ಪ್ರಕಾಶ್ನೊಂದಿಗೆ ಸೇರಿ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ. ಗುರುವಾರ ಪೆಟ್ರೋಲ್ ಬಂಕ್ಗೆ ಬೀಗ ಹಾಕಲಾಗಿದೆ.<br /> <br /> ಪ್ರಕರಣದ ಸಂಬಂಧ 17 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಉಳಿದವರಿಗೆ ಶೋಧ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಕೆ.ಟಿ. ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ: </strong>ಟೆಂಪೊದಲ್ಲಿ ದನವನ್ನು ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕೊಲೆ ಮಾಡಿದ ಘಟನೆ ಬ್ರಹ್ಮಾವರದ ಕೊಕ್ಕರ್ಣೆಯ ಕೆಂಜೂರು ಶಾಲೆಯ ಬಳಿ ಬುಧವಾರ ಮಧ್ಯರಾತ್ರಿ ನಡೆದಿದೆ.</p>.<p>ಕೆಂಜೂರಿನ ಪ್ರವೀಣ ಪೂಜಾರಿ (28) ಕೊಲೆಯಾದ ಬಿಜೆಪಿ ಕಾರ್ಯಕರ್ತ. ಪ್ರವೀಣ್ ಮತ್ತು ಅವರ ಸ್ನೇಹಿತ ಅಕ್ಷಯ್ ದೇವಾಡಿಗ (20) ವಾಹನದಲ್ಲಿ 4 ದನಗಳನ್ನು ಸಾಗಿಸುತ್ತಿದ್ದರು. ಅವರ ಮೇಲೆ ಹಿಂದೂ ಜಾಗರಣ ವೇದಿಕೆಯ ಸುಮಾರು 30 ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಪ್ರವೀಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಕ್ಷಯ್ ಕೂಡ ಗಾಯಗೊಂಡಿದ್ದು ಬ್ರಹ್ಮಾವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.<br /> <br /> ಬ್ರಹ್ಮಾವರದಲ್ಲಿ ಪೆಟ್ರೋಲ್ ಬಂಕ್ ಹೊಂದಿರುವ ಹಿಂದೂ ಜಾಗರಣ ವೇದಿಕೆ ಮುಖಂಡ ಅರವಿಂದ ಸೇರಿಗಾರ ಎಂಬಾತ ತನ್ನ ಸಹಚರ ಪ್ರಕಾಶ್ನೊಂದಿಗೆ ಸೇರಿ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ. ಗುರುವಾರ ಪೆಟ್ರೋಲ್ ಬಂಕ್ಗೆ ಬೀಗ ಹಾಕಲಾಗಿದೆ.<br /> <br /> ಪ್ರಕರಣದ ಸಂಬಂಧ 17 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಉಳಿದವರಿಗೆ ಶೋಧ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಕೆ.ಟಿ. ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>