<p><strong>ಭದ್ರಾವತಿ:</strong> ಡೆಂಗೆ ವಿರುದ್ಧ ಜಾಗೃತಿ ಅವಶ್ಯ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಗುಡದಪ್ಪ ಹೇಳಿದರು. <br /> ಸೋಮವಾರ ತಾಲ್ಲೂಕು ಆಡಳಿತ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜರುಗಿದ ಡೆಂಗೆ ಕುರಿತ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ನಡೆಸಲಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.<br /> <br /> ಇಲ್ಲಿ ತನಕ ತಾಲ್ಲೂಕಿನಲ್ಲಿ 21 ಡೆಂಗೆ ಜ್ವರದ ಪ್ರಕರಣಗಳು ದಾಖಲಾಗಿದ್ದು, ಆಪೈಕಿ 5 ಪ್ರಕರಣಗಳು ಗ್ರಾಮಾಂತರ ಪ್ರದೇಶಗಳಲ್ಲಿ ಕಂಡು ಬಂದಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜನರ ಬಳಿ ತೆರಳಿ ಮನೆ ಜಾಗೃತಿ ಮೂಡಿಸುವ ಕೆಲಸ ನಡೆಸಿದ್ದಾರೆ ಎಂದರು.<br /> <br /> ತಹಶೀಲ್ದಾರ್ ಸಿದ್ದಮಲ್ಲಪ್ಪ, ಉಪ ತಹಸೀಲ್ದಾರ್ ನಫೀಜಾ ಬೇಗಂ, ತಾ.ಪಂ. ಕಾರ್ಯನಿರ್ವಹ ಣಾಧಿಕಾರಿ ಮಲ್ಲೇಶಪ್ಪ, ನಗರಸಭಾ ಆಯುಕ್ತ ಬಸವರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಯ್ಯ, ಮಾಜಿ ನಗರಸಭಾ ಸದಸ್ಯರಾದ ಬಿ.ಟಿ.ನಾಗರಾಜ್, ದಿಲ್ದಾರ್, ಅಂಜುಮಾನ್ ಸಂಸ್ಥೆ ಪೀರ್ ಶರೀಫ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಂದಾಯ ಇಲಾಖೆ ಸಿಬ್ಬಂದಿ, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ಡೆಂಗೆ ವಿರುದ್ಧ ಜಾಗೃತಿ ಅವಶ್ಯ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಗುಡದಪ್ಪ ಹೇಳಿದರು. <br /> ಸೋಮವಾರ ತಾಲ್ಲೂಕು ಆಡಳಿತ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜರುಗಿದ ಡೆಂಗೆ ಕುರಿತ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ನಡೆಸಲಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.<br /> <br /> ಇಲ್ಲಿ ತನಕ ತಾಲ್ಲೂಕಿನಲ್ಲಿ 21 ಡೆಂಗೆ ಜ್ವರದ ಪ್ರಕರಣಗಳು ದಾಖಲಾಗಿದ್ದು, ಆಪೈಕಿ 5 ಪ್ರಕರಣಗಳು ಗ್ರಾಮಾಂತರ ಪ್ರದೇಶಗಳಲ್ಲಿ ಕಂಡು ಬಂದಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜನರ ಬಳಿ ತೆರಳಿ ಮನೆ ಜಾಗೃತಿ ಮೂಡಿಸುವ ಕೆಲಸ ನಡೆಸಿದ್ದಾರೆ ಎಂದರು.<br /> <br /> ತಹಶೀಲ್ದಾರ್ ಸಿದ್ದಮಲ್ಲಪ್ಪ, ಉಪ ತಹಸೀಲ್ದಾರ್ ನಫೀಜಾ ಬೇಗಂ, ತಾ.ಪಂ. ಕಾರ್ಯನಿರ್ವಹ ಣಾಧಿಕಾರಿ ಮಲ್ಲೇಶಪ್ಪ, ನಗರಸಭಾ ಆಯುಕ್ತ ಬಸವರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಯ್ಯ, ಮಾಜಿ ನಗರಸಭಾ ಸದಸ್ಯರಾದ ಬಿ.ಟಿ.ನಾಗರಾಜ್, ದಿಲ್ದಾರ್, ಅಂಜುಮಾನ್ ಸಂಸ್ಥೆ ಪೀರ್ ಶರೀಫ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಂದಾಯ ಇಲಾಖೆ ಸಿಬ್ಬಂದಿ, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>