<p><strong>ನವದೆಹಲಿ:</strong> ಲೋಕಸಭೆ ಚುನಾವಣೆಗೂ ಮೊದಲು ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಹೆಚ್ಚುವ ಸಾಧ್ಯತೆಗಳಿವೆ ಎಂದು ಭದ್ರತಾ ಅಧಿಕಾರಿಗಳು ಶಂಕಿಸಿದ್ದಾರೆ. ಶ್ರೀನಗರ ಮತ್ತು ದಕ್ಷಿಣ ಕಾಶ್ಮೀರಕ್ಕೆ ಉಗ್ರರು ಪಿರ್ ಪಂಜಾಲ್್ ವ್ಯಾಪ್ತಿಯ ಮೂಲಕ ಪ್ರವೇಶ ಪಡೆಯಲಿದ್ದಾರೆ ಎಂದು ಅವರು ಅಂದಾಜಿಸಿದ್ದಾರೆ.<br /> <br /> ಕಳೆದ ಕೆಲ ತಿಂಗಳಿಂದ ಪಿರ್ ಪಂಜಾಲ್ನ ದಕ್ಷಿಣದಿಂದ ಉತ್ತರದ ಗುಡ್ಡಗಾಡು ಪ್ರದೇಶದಲ್ಲಿರುವ ಉಗ್ರರ ಶಿಬಿರದ ಕಡೆ ಅವರ ಚಲನವಲನ ಹೆಚ್ಚಿದೆ. ಭಾರತ ಮತ್ತು ಪಾಕಿಸ್ತಾನದ ಗಡಿ ನಿಯಂತ್ರಣ ರೇಖೆಯ ಬದಿಯಲ್ಲಿ 42 ಉಗ್ರರ ತರಬೇತಿ ಶಿಬಿರಗಳು ಇರುವುದು ಅಧಿಕಾರಿಗಳ ನಿದ್ದೆಗೆಡಿಸಿದೆ.<br /> <br /> ಜಮ್ಮು ಮತ್ತು ಕಾಶ್ಮೀರದಲ್ಲಿ ಲೋಕಸಭೆ ಚುನಾವಣೆ ಶಾಂತಿಯುತವಾಗಿ ನಡೆದರೂ ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಉಗ್ರರ ಕರಿನೆರಳು ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರು ಲೋಕಸಭಾ ಸ್ಥಾನಗಳಿರುವ ರಾಜ್ಯದಲ್ಲಿ ಏಪ್ರಿಲ್ ಮತ್ತು ಮೇನಲ್ಲಿ ಚುನಾವಣೆ ನಡೆಯಲಿದೆ.<br /> <br /> ಜನವರಿಯಿಂದ ಮಾರ್ಚ್ 10ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು 20 ಉಗ್ರರನ್ನು ಸಾಯಿಸಿವೆ.<br /> ಇವರಲ್ಲಿ 11 ಜನ ಪಾಕಿಸ್ತಾನಿಯರು. ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ ಮೂವರು ಉಗ್ರರು ಹತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲೋಕಸಭೆ ಚುನಾವಣೆಗೂ ಮೊದಲು ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಹೆಚ್ಚುವ ಸಾಧ್ಯತೆಗಳಿವೆ ಎಂದು ಭದ್ರತಾ ಅಧಿಕಾರಿಗಳು ಶಂಕಿಸಿದ್ದಾರೆ. ಶ್ರೀನಗರ ಮತ್ತು ದಕ್ಷಿಣ ಕಾಶ್ಮೀರಕ್ಕೆ ಉಗ್ರರು ಪಿರ್ ಪಂಜಾಲ್್ ವ್ಯಾಪ್ತಿಯ ಮೂಲಕ ಪ್ರವೇಶ ಪಡೆಯಲಿದ್ದಾರೆ ಎಂದು ಅವರು ಅಂದಾಜಿಸಿದ್ದಾರೆ.<br /> <br /> ಕಳೆದ ಕೆಲ ತಿಂಗಳಿಂದ ಪಿರ್ ಪಂಜಾಲ್ನ ದಕ್ಷಿಣದಿಂದ ಉತ್ತರದ ಗುಡ್ಡಗಾಡು ಪ್ರದೇಶದಲ್ಲಿರುವ ಉಗ್ರರ ಶಿಬಿರದ ಕಡೆ ಅವರ ಚಲನವಲನ ಹೆಚ್ಚಿದೆ. ಭಾರತ ಮತ್ತು ಪಾಕಿಸ್ತಾನದ ಗಡಿ ನಿಯಂತ್ರಣ ರೇಖೆಯ ಬದಿಯಲ್ಲಿ 42 ಉಗ್ರರ ತರಬೇತಿ ಶಿಬಿರಗಳು ಇರುವುದು ಅಧಿಕಾರಿಗಳ ನಿದ್ದೆಗೆಡಿಸಿದೆ.<br /> <br /> ಜಮ್ಮು ಮತ್ತು ಕಾಶ್ಮೀರದಲ್ಲಿ ಲೋಕಸಭೆ ಚುನಾವಣೆ ಶಾಂತಿಯುತವಾಗಿ ನಡೆದರೂ ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಉಗ್ರರ ಕರಿನೆರಳು ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರು ಲೋಕಸಭಾ ಸ್ಥಾನಗಳಿರುವ ರಾಜ್ಯದಲ್ಲಿ ಏಪ್ರಿಲ್ ಮತ್ತು ಮೇನಲ್ಲಿ ಚುನಾವಣೆ ನಡೆಯಲಿದೆ.<br /> <br /> ಜನವರಿಯಿಂದ ಮಾರ್ಚ್ 10ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು 20 ಉಗ್ರರನ್ನು ಸಾಯಿಸಿವೆ.<br /> ಇವರಲ್ಲಿ 11 ಜನ ಪಾಕಿಸ್ತಾನಿಯರು. ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ ಮೂವರು ಉಗ್ರರು ಹತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>