<p><strong>ನವದೆಹಲಿ (ಪಿಟಿಐ):</strong> ಯುವಕರನ್ನು ಭಯೋತ್ಪಾದನೆಯತ್ತ ಸೆಳೆಯಲು ಹಾಗೂ ದೇಶದಾದ್ಯಂತ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಲು ಅಂತರ್ಜಾಲ ಮಾಧ್ಯಮವನ್ನೇ ಪ್ರಬಲ ಅಸ್ತ್ರವನ್ನಾಗಿ ಉಗ್ರಗಾಮಿಗಳು ಬಳಸುತ್ತಿದ್ದಾರೆ ಎಂದು ಗೃಹ ಕಾರ್ಯದರ್ಶಿ ಜಿ. ಕೆ. ಪಿಳ್ಳೈ ಸೋಮವಾರ ತಿಳಿಸಿದರು.<br /> <br /> ‘ಮುಂಬೈಯಲ್ಲಿ ನಡೆದಂತಹ ಭಯೋತ್ಪಾದನಾ ಚಟುವಟಿಕೆಗಳು ಇಂಟರ್ನೆಟ್ ಮೂಲಕವೇ ನಡೆಯುತ್ತಿದ್ದು, ಉಗ್ರಗಾಮಿಗಳು ತಮ್ಮ ಸಂಘಟನೆಗಳಿಗೆ ಯುವಕರನ್ನು ನೇಮಕಾತಿ ಮಾಡಲು ಇಂಟರ್ನೆಟ್ ಅನ್ನೇ ಪ್ರಬಲ ಅಸ್ತ್ರವನ್ನಾಗಿ ಬಳಸುತ್ತಿದ್ದಾರೆ’ ಎಂದು ಅವರು ಹೇಳಿದರು.<br /> <br /> ಈ ನಿಟ್ಟಿನಲ್ಲಿ ರಾಷ್ಟ್ರೀಯ ಸೈಬರ್ ಸುರಕ್ಷಾ ಕಾರ್ಯತಂತ್ರವನ್ನು ಪುನರ್ಪರಿಶೀಲಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಪಿಳ್ಳೈ ತಿಳಿಸಿದರು.<br /> <br /> ನಾಸ್ಕಾಮ್ ಏರ್ಪಡಿಸಿದ್ದ ಸೈಬರ್ ಅಪರಾಧದ ಸವಾಲುಗಳ ಕುರಿತ ಸಮ್ಮೇಳನದಲ್ಲಿ ಅವರು ಮಾತನಾಡುತ್ತಿದ್ದರು.ಸರ್ಕಾರ ಈ ನಿಟ್ಟಿನಲ್ಲಿ ಬಿಕ್ಕಟ್ಟು ನಿರ್ವಹಣಾ ಯೋಜನೆಯೊಂದನ್ನು ತಯಾರಿಸಿದ್ದು ರಾಷ್ಟ್ರೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (ಸರ್ಟ್-ಇನ್) ರೂಪಿಸಿದೆ ಎಂದೂ ಅವರು ಹೇಳಿದರು.<br /> <br /> ಸೈಬರ್ ಸುರಕ್ಷಾ ಸರ್ಟಿಫೀಕೇಶನ್ ವ್ಯವಸ್ಥೆಯನ್ನು ಬಲಪಡಿಸಬೇಕಾದ ಅಗತ್ಯವನ್ನು ಅವರು ಇದೇ ವೇಳೆ ಒತ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಯುವಕರನ್ನು ಭಯೋತ್ಪಾದನೆಯತ್ತ ಸೆಳೆಯಲು ಹಾಗೂ ದೇಶದಾದ್ಯಂತ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಲು ಅಂತರ್ಜಾಲ ಮಾಧ್ಯಮವನ್ನೇ ಪ್ರಬಲ ಅಸ್ತ್ರವನ್ನಾಗಿ ಉಗ್ರಗಾಮಿಗಳು ಬಳಸುತ್ತಿದ್ದಾರೆ ಎಂದು ಗೃಹ ಕಾರ್ಯದರ್ಶಿ ಜಿ. ಕೆ. ಪಿಳ್ಳೈ ಸೋಮವಾರ ತಿಳಿಸಿದರು.<br /> <br /> ‘ಮುಂಬೈಯಲ್ಲಿ ನಡೆದಂತಹ ಭಯೋತ್ಪಾದನಾ ಚಟುವಟಿಕೆಗಳು ಇಂಟರ್ನೆಟ್ ಮೂಲಕವೇ ನಡೆಯುತ್ತಿದ್ದು, ಉಗ್ರಗಾಮಿಗಳು ತಮ್ಮ ಸಂಘಟನೆಗಳಿಗೆ ಯುವಕರನ್ನು ನೇಮಕಾತಿ ಮಾಡಲು ಇಂಟರ್ನೆಟ್ ಅನ್ನೇ ಪ್ರಬಲ ಅಸ್ತ್ರವನ್ನಾಗಿ ಬಳಸುತ್ತಿದ್ದಾರೆ’ ಎಂದು ಅವರು ಹೇಳಿದರು.<br /> <br /> ಈ ನಿಟ್ಟಿನಲ್ಲಿ ರಾಷ್ಟ್ರೀಯ ಸೈಬರ್ ಸುರಕ್ಷಾ ಕಾರ್ಯತಂತ್ರವನ್ನು ಪುನರ್ಪರಿಶೀಲಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಪಿಳ್ಳೈ ತಿಳಿಸಿದರು.<br /> <br /> ನಾಸ್ಕಾಮ್ ಏರ್ಪಡಿಸಿದ್ದ ಸೈಬರ್ ಅಪರಾಧದ ಸವಾಲುಗಳ ಕುರಿತ ಸಮ್ಮೇಳನದಲ್ಲಿ ಅವರು ಮಾತನಾಡುತ್ತಿದ್ದರು.ಸರ್ಕಾರ ಈ ನಿಟ್ಟಿನಲ್ಲಿ ಬಿಕ್ಕಟ್ಟು ನಿರ್ವಹಣಾ ಯೋಜನೆಯೊಂದನ್ನು ತಯಾರಿಸಿದ್ದು ರಾಷ್ಟ್ರೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (ಸರ್ಟ್-ಇನ್) ರೂಪಿಸಿದೆ ಎಂದೂ ಅವರು ಹೇಳಿದರು.<br /> <br /> ಸೈಬರ್ ಸುರಕ್ಷಾ ಸರ್ಟಿಫೀಕೇಶನ್ ವ್ಯವಸ್ಥೆಯನ್ನು ಬಲಪಡಿಸಬೇಕಾದ ಅಗತ್ಯವನ್ನು ಅವರು ಇದೇ ವೇಳೆ ಒತ್ತಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>