<p>ಬೆಳಗಾವಿ: ಶಾಂತಿ ಮತ್ತು ಅಭಿವೃದ್ಧಿ ಆಂತರಿಕ ಸಂಬಂಧ ಹೊಂದಿವೆ. ಇವರೆಡೂ ಜೊತೆಯಾಗಿ ಇಲ್ಲದಿದ್ದರೆ ಅಭಿವೃದ್ಧಿ ಸಾಧ್ಯವಾಗುವುದಿಲ್ಲ ಎಂದು ಪ್ರಧಾನ ಹಿರಿಯ ನ್ಯಾಯಾಧೀಶ ರವಿ ನಾಯ್ಕ ಅಭಿಪ್ರಾಯಪಟ್ಟರು.<br /> <br /> ನಗರದ ಭಾವುರಾವ್ ಕಾಕತ್ಕರ್ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಮಾನವ ಹಕ್ಕುಗಳ ಹಿತರಕ್ಷಣಾ ಮಂಡಳಿ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ `ಅಂತರರಾಷ್ಟ್ರೀಯ ಶಾಂತಿ ದಿನ~ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಭಯೋತ್ಪಾದನೆ ದೇಶದ ಸಮಗ್ರತೆಗೆ ಧಕ್ಕೆ ತರುತ್ತಿದೆ. ಈ ಕಾರಣಕ್ಕಾಗಿಯೇ ಆಂತರಿಕ ಭದ್ರತೆಗೆ ಹೆಚ್ಚಿನ ವೆಚ್ಚ ಮಾಡಬೇಕಾಗಿದೆ. ಆದ್ದರಿಂದ ಹೊಸ ಜನಾಂಗ ಶಾಂತಿ ಕುರಿತು ಯೋಚಿಸಬೇಕು~ ಎಂದು ಹೇಳಿದರು.<br /> <br /> `ಒಪ್ಪಂದ ಮನೋಭಾವ ಇದ್ದಾಗ ಮಾತ್ರ ಎಂತಹದೇ ಸಮಸ್ಯೆ ಇದ್ದರೂ ಪರಿಹಾರ ಕಂಡುಕೊಳ್ಳಲು ಸಾಧ್ಯ. ಆದ್ದರಿಂದ ಒಪ್ಪಂದ ಸ್ವಭಾವ ರೂಢಿಸಿಕೊಳ್ಳಬೇಕು~ ಎಂದು ಸಲಹೆ ಮಾಡಿದರು.<br /> <br /> `ಶರಣರ ವಚನಗಳು ಶಾಂತಿ ದಾರಿಯಲ್ಲಿ ಸಾಗುವವರಿಗೆ ಮಾರ್ಗದರ್ಶಿಯಾಗಿವೆ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು~ ಎಂದರು.<br /> <br /> ಮುಕ್ತಿಮಠದ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಗುರುನಾಥ ಭೋರಿ, ಸಾಧನಾ ಪೋಟೆ, ಅಮಿತ ಕುಂದರಗಿ, ಅನ್ನಪೂರ್ಣ ನಿರ್ವಾಣಿ ಮತ್ತಿತರರು ಪಾಲ್ಗೊಂಡಿದ್ದರು. ಪ್ರಾಚಾರ್ಯ ಎಂ.ಎ. ಜಾಧವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.<br /> <br /> ಪ್ರಕಾಶ ಐಹೊಳೆ ಸ್ವಾಗತಿಸಿದರು. ಮೀನಾ ಮೋಹಿತೆ ನಿರೂಪಿಸಿದರು. ಪ್ರೊ.ಎಂ.ಡಿ. ನಾಗಣ್ಣವರ ಪರಿಚಯಿಸಿದರು. <br /> <br /> <strong>ಧರಣಿ ಸತ್ಯಾಗ್ರಹ ನಾಳೆ</strong><br /> ರಾಮದುರ್ಗ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಆಶ್ರಯದಲ್ಲಿ ನ್ಯಾಯಾಂಗ ಗೌರವಿಸಲು ಮತ್ತು ಹಾಗೂ ನೈಸರ್ಗಿಕ ಸಂಪತ್ತು ಲೂಟಿಕೋರರ ಶಿಕ್ಷಿಸುವಂತೆ ಆಗ್ರಹಿಸಿ ಇದೇ 22 ರಂದು ರಾಮದುರ್ಗ ಪಟ್ಟಣದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು.<br /> <br /> ಗುರುವಾರ ಇಲ್ಲಿನ ವೆಂಕಟೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ತೆರಳುವ ರೈತರು ತಾಲ್ಲೂಕು ಕಚೇರಿಯ ಮುಂದೆ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ.<br /> <br /> ಸಭೆ ನಾಳೆ: ರಾಮದುರ್ಗ ಮಹಾಂತೇಶ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿ ಪ್ರಸಕ್ತ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು ಇದೇ 22 ರಂದು ಸಂಜೆ ಸಂಘದ ಕಾರ್ಯಾಲಯದಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಶಾಂತಿ ಮತ್ತು ಅಭಿವೃದ್ಧಿ ಆಂತರಿಕ ಸಂಬಂಧ ಹೊಂದಿವೆ. ಇವರೆಡೂ ಜೊತೆಯಾಗಿ ಇಲ್ಲದಿದ್ದರೆ ಅಭಿವೃದ್ಧಿ ಸಾಧ್ಯವಾಗುವುದಿಲ್ಲ ಎಂದು ಪ್ರಧಾನ ಹಿರಿಯ ನ್ಯಾಯಾಧೀಶ ರವಿ ನಾಯ್ಕ ಅಭಿಪ್ರಾಯಪಟ್ಟರು.<br /> <br /> ನಗರದ ಭಾವುರಾವ್ ಕಾಕತ್ಕರ್ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಮಾನವ ಹಕ್ಕುಗಳ ಹಿತರಕ್ಷಣಾ ಮಂಡಳಿ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ `ಅಂತರರಾಷ್ಟ್ರೀಯ ಶಾಂತಿ ದಿನ~ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಭಯೋತ್ಪಾದನೆ ದೇಶದ ಸಮಗ್ರತೆಗೆ ಧಕ್ಕೆ ತರುತ್ತಿದೆ. ಈ ಕಾರಣಕ್ಕಾಗಿಯೇ ಆಂತರಿಕ ಭದ್ರತೆಗೆ ಹೆಚ್ಚಿನ ವೆಚ್ಚ ಮಾಡಬೇಕಾಗಿದೆ. ಆದ್ದರಿಂದ ಹೊಸ ಜನಾಂಗ ಶಾಂತಿ ಕುರಿತು ಯೋಚಿಸಬೇಕು~ ಎಂದು ಹೇಳಿದರು.<br /> <br /> `ಒಪ್ಪಂದ ಮನೋಭಾವ ಇದ್ದಾಗ ಮಾತ್ರ ಎಂತಹದೇ ಸಮಸ್ಯೆ ಇದ್ದರೂ ಪರಿಹಾರ ಕಂಡುಕೊಳ್ಳಲು ಸಾಧ್ಯ. ಆದ್ದರಿಂದ ಒಪ್ಪಂದ ಸ್ವಭಾವ ರೂಢಿಸಿಕೊಳ್ಳಬೇಕು~ ಎಂದು ಸಲಹೆ ಮಾಡಿದರು.<br /> <br /> `ಶರಣರ ವಚನಗಳು ಶಾಂತಿ ದಾರಿಯಲ್ಲಿ ಸಾಗುವವರಿಗೆ ಮಾರ್ಗದರ್ಶಿಯಾಗಿವೆ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು~ ಎಂದರು.<br /> <br /> ಮುಕ್ತಿಮಠದ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಗುರುನಾಥ ಭೋರಿ, ಸಾಧನಾ ಪೋಟೆ, ಅಮಿತ ಕುಂದರಗಿ, ಅನ್ನಪೂರ್ಣ ನಿರ್ವಾಣಿ ಮತ್ತಿತರರು ಪಾಲ್ಗೊಂಡಿದ್ದರು. ಪ್ರಾಚಾರ್ಯ ಎಂ.ಎ. ಜಾಧವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.<br /> <br /> ಪ್ರಕಾಶ ಐಹೊಳೆ ಸ್ವಾಗತಿಸಿದರು. ಮೀನಾ ಮೋಹಿತೆ ನಿರೂಪಿಸಿದರು. ಪ್ರೊ.ಎಂ.ಡಿ. ನಾಗಣ್ಣವರ ಪರಿಚಯಿಸಿದರು. <br /> <br /> <strong>ಧರಣಿ ಸತ್ಯಾಗ್ರಹ ನಾಳೆ</strong><br /> ರಾಮದುರ್ಗ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಆಶ್ರಯದಲ್ಲಿ ನ್ಯಾಯಾಂಗ ಗೌರವಿಸಲು ಮತ್ತು ಹಾಗೂ ನೈಸರ್ಗಿಕ ಸಂಪತ್ತು ಲೂಟಿಕೋರರ ಶಿಕ್ಷಿಸುವಂತೆ ಆಗ್ರಹಿಸಿ ಇದೇ 22 ರಂದು ರಾಮದುರ್ಗ ಪಟ್ಟಣದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು.<br /> <br /> ಗುರುವಾರ ಇಲ್ಲಿನ ವೆಂಕಟೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ತೆರಳುವ ರೈತರು ತಾಲ್ಲೂಕು ಕಚೇರಿಯ ಮುಂದೆ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ.<br /> <br /> ಸಭೆ ನಾಳೆ: ರಾಮದುರ್ಗ ಮಹಾಂತೇಶ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿ ಪ್ರಸಕ್ತ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು ಇದೇ 22 ರಂದು ಸಂಜೆ ಸಂಘದ ಕಾರ್ಯಾಲಯದಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>