<p><strong>ಬೆಂಗಳೂರು: </strong>ಅಮೃತ ತಂತ್ರಜ್ಞಾನ ಹಾಗೂ ವಿಜ್ಞಾನ ಕಾಲೇಜು ಆಡಳಿತವು ವಿದ್ಯಾರ್ಥಿಗಳ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಎರಡು ವಾರಗಳ ಗಡುವು ಕೇಳಿದ್ದು, ಪ್ರತಿಭಟನೆ ಕೈಬಿಟ್ಟಿರುವುದಾಗಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.<br /> <br /> ಶುಕ್ರವಾರ ಎಂಜಿನಿಯರಿಂಗ್ ವಿದ್ಯಾರ್ಥಿ ಜಿತೇಂದ್ರ ಸಾಯಿ ಕಾಲೇಜಿನ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೆ ಶೈಕ್ಷಣಿಕ ಒತ್ತಡ ಹಾಗೂ ಕಾಲೇಜಿನಲ್ಲಿದ್ದ ಕಠಿಣ ನಿಯಮಗಳೇ ಕಾರಣ ಎಂದು ಆರೋಪಿಸಿ ವಿದ್ಯಾರ್ಥಿಗಳು ಮಧ್ಯ ರಾತ್ರಿವರೆಗೂ ಧರಣಿ ನಡೆಸಿದ್ದರು. <br /> <br /> ಸ್ನೇಹಿತನನ್ನು ರಕ್ಷಿಸಲು ಮುಂದಾದಾಗ ತಮ್ಮನ್ನು ಅಡ್ಡಗಟ್ಟಿದ ವಸತಿನಿಲಯದ ವಾರ್ಡನ್ಗಳಾದ ಲಕ್ಷ್ಮಣ್ ಕಾರೆ, ಕರುಣಾಕರ್ ಬಾಬು ಹಾಗೂ ವಿದ್ಯಾರ್ಥಿಗಳ ಮೇಲೆ ಕಠಿಣ ನಿಯಮಗಳನ್ನು ಹೇರುತ್ತಿರುವ ಸಹಾಯಕ ಡೀನ್ ಡಾ. ರಾಕೇಶ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು.<br /> <br /> ಈ ಎಲ್ಲಾ ಬೇಡಿಕೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿರುವ ಆಡಳಿತ ಎರಡು ವಾರಗಳ ನಂತರ ಕಾಲೇಜನ್ನು ಪ್ರಾರಂಭಿಸುವುದಾಗಿ ಹಾಗೂ ಅಷ್ಟರೊಳಗೆ ವಿದ್ಯಾರ್ಥಿಗಳ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಸೂಚನಾ ಫಲಕದಲ್ಲಿ ತಿಳಿಸಿದ್ದು, ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳುತ್ತಿದ್ದ ದೃಶ್ಯಗಳು ಕಂಡು ಬಂದವು.<br /> <br /> ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಅಂತ್ಯ ಸಂಸ್ಕಾರಕ್ಕೆ ಮೃತದೇಹವನ್ನು ಅವರ ಜನ್ಮಸ್ಥಳವಾದ ಆಂದ್ರ ಪ್ರದೇಶದ ನೆಲ್ಲೂರಿಗೆ ಕೊಂಡೊಯ್ಯಲಾಗಿದ್ದು, ಪೊಲೀಸರ ಆಕಸ್ಮಿಕ ಸಾವು ಎಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಮೃತ ತಂತ್ರಜ್ಞಾನ ಹಾಗೂ ವಿಜ್ಞಾನ ಕಾಲೇಜು ಆಡಳಿತವು ವಿದ್ಯಾರ್ಥಿಗಳ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಎರಡು ವಾರಗಳ ಗಡುವು ಕೇಳಿದ್ದು, ಪ್ರತಿಭಟನೆ ಕೈಬಿಟ್ಟಿರುವುದಾಗಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ತಿಳಿಸಿದ್ದಾರೆ.<br /> <br /> ಶುಕ್ರವಾರ ಎಂಜಿನಿಯರಿಂಗ್ ವಿದ್ಯಾರ್ಥಿ ಜಿತೇಂದ್ರ ಸಾಯಿ ಕಾಲೇಜಿನ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೆ ಶೈಕ್ಷಣಿಕ ಒತ್ತಡ ಹಾಗೂ ಕಾಲೇಜಿನಲ್ಲಿದ್ದ ಕಠಿಣ ನಿಯಮಗಳೇ ಕಾರಣ ಎಂದು ಆರೋಪಿಸಿ ವಿದ್ಯಾರ್ಥಿಗಳು ಮಧ್ಯ ರಾತ್ರಿವರೆಗೂ ಧರಣಿ ನಡೆಸಿದ್ದರು. <br /> <br /> ಸ್ನೇಹಿತನನ್ನು ರಕ್ಷಿಸಲು ಮುಂದಾದಾಗ ತಮ್ಮನ್ನು ಅಡ್ಡಗಟ್ಟಿದ ವಸತಿನಿಲಯದ ವಾರ್ಡನ್ಗಳಾದ ಲಕ್ಷ್ಮಣ್ ಕಾರೆ, ಕರುಣಾಕರ್ ಬಾಬು ಹಾಗೂ ವಿದ್ಯಾರ್ಥಿಗಳ ಮೇಲೆ ಕಠಿಣ ನಿಯಮಗಳನ್ನು ಹೇರುತ್ತಿರುವ ಸಹಾಯಕ ಡೀನ್ ಡಾ. ರಾಕೇಶ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು.<br /> <br /> ಈ ಎಲ್ಲಾ ಬೇಡಿಕೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿರುವ ಆಡಳಿತ ಎರಡು ವಾರಗಳ ನಂತರ ಕಾಲೇಜನ್ನು ಪ್ರಾರಂಭಿಸುವುದಾಗಿ ಹಾಗೂ ಅಷ್ಟರೊಳಗೆ ವಿದ್ಯಾರ್ಥಿಗಳ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಸೂಚನಾ ಫಲಕದಲ್ಲಿ ತಿಳಿಸಿದ್ದು, ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳುತ್ತಿದ್ದ ದೃಶ್ಯಗಳು ಕಂಡು ಬಂದವು.<br /> <br /> ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಅಂತ್ಯ ಸಂಸ್ಕಾರಕ್ಕೆ ಮೃತದೇಹವನ್ನು ಅವರ ಜನ್ಮಸ್ಥಳವಾದ ಆಂದ್ರ ಪ್ರದೇಶದ ನೆಲ್ಲೂರಿಗೆ ಕೊಂಡೊಯ್ಯಲಾಗಿದ್ದು, ಪೊಲೀಸರ ಆಕಸ್ಮಿಕ ಸಾವು ಎಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>