<p><strong>ಹುಮನಾಬಾದ್:</strong> ತಾಲ್ಲೂಕಿನ ದುಬಲಗುಂಡಿ ಗ್ರಾಮದಲ್ಲಿ ಕುಸಿದುಬಿದ್ದ ಮಾದಿಗ ಸಮಾಜ ಸಮೂದಾಯ ಭವನ ಕಟ್ಡಡ ದುರುಸ್ತಿ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ವಿಜಯಕುಮಾರ ನಾತೆ ಆಗ್ರಹಿಸಿದ್ದಾರೆ.<br /> <br /> ಆ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ನಿರ್ಮಿಸಲಾದ ಕಾಮಗಾರಿ ಕಳೆಪೆ ಆಗಿದ್ದರಿಂದ ಕಳೆದ ಒಂದು ವರ್ಷದ ಹಿಂದೆ ಕುಸಿದು ಬಿದ್ದಿರುವ ವಿಷಯ ಸರ್ವರ ಗಮನಕ್ಕೆ ಇದ್ದರೂ ಅದರ ಅಭಿವೃದ್ಧಿ ಕೈಗೊಳ್ಳುವ ಮನಸ್ಸು ಯಾರೂ ಮಾಡುತ್ತಿಲ್ಲ.<br /> <br /> ಸಮುದಾಯ ಭವನದಲ್ಲಿ ವಿವಿಧ ಸಾಮಗ್ರಿಗಳು ಇಡುವುದಕ್ಕೆ ಹಾಗೂ ಸಭೆ ಸಮಾರಂಭ ನಡೆಸುವುದಕ್ಕೆ ಸ್ಥಳವಿಲ್ಲದೇ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ.<br /> <br /> ಸ್ಥಳ ಇಲ್ಲದ ವಿಷಯ ಜಿಲ್ಲಾ ಪಂಚಾಯಿತಿ ಸದಸ್ಯೆ ಚಂದ್ರಮ್ಮ ಗಂಗಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಚಂದ್ರಕಲಾ ಶಿರಶೆಟ್ಟಿ ಅವರ ಗಮನಕ್ಕೂ ತರಲಾಗಿದೆ. ಆದರೇ ಈವರೆಗೆ ಯಾವುದೇ ಪ್ರಯೋಜನ ಆಗಿಲ್ಲ ಎಂದು ವಿಜಯಕುಮಾರ ನಾತೆ ಮೊದಲಾದವರು ಆಪಾದಿಸಿದ್ದಾರೆ.<br /> <br /> ದಕ್ಷ ಆಡಳಿತಕ್ಕೆ ಹೆಸರಾದ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಈ ಮೂಲಕ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್:</strong> ತಾಲ್ಲೂಕಿನ ದುಬಲಗುಂಡಿ ಗ್ರಾಮದಲ್ಲಿ ಕುಸಿದುಬಿದ್ದ ಮಾದಿಗ ಸಮಾಜ ಸಮೂದಾಯ ಭವನ ಕಟ್ಡಡ ದುರುಸ್ತಿ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ವಿಜಯಕುಮಾರ ನಾತೆ ಆಗ್ರಹಿಸಿದ್ದಾರೆ.<br /> <br /> ಆ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ನಿರ್ಮಿಸಲಾದ ಕಾಮಗಾರಿ ಕಳೆಪೆ ಆಗಿದ್ದರಿಂದ ಕಳೆದ ಒಂದು ವರ್ಷದ ಹಿಂದೆ ಕುಸಿದು ಬಿದ್ದಿರುವ ವಿಷಯ ಸರ್ವರ ಗಮನಕ್ಕೆ ಇದ್ದರೂ ಅದರ ಅಭಿವೃದ್ಧಿ ಕೈಗೊಳ್ಳುವ ಮನಸ್ಸು ಯಾರೂ ಮಾಡುತ್ತಿಲ್ಲ.<br /> <br /> ಸಮುದಾಯ ಭವನದಲ್ಲಿ ವಿವಿಧ ಸಾಮಗ್ರಿಗಳು ಇಡುವುದಕ್ಕೆ ಹಾಗೂ ಸಭೆ ಸಮಾರಂಭ ನಡೆಸುವುದಕ್ಕೆ ಸ್ಥಳವಿಲ್ಲದೇ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ.<br /> <br /> ಸ್ಥಳ ಇಲ್ಲದ ವಿಷಯ ಜಿಲ್ಲಾ ಪಂಚಾಯಿತಿ ಸದಸ್ಯೆ ಚಂದ್ರಮ್ಮ ಗಂಗಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಚಂದ್ರಕಲಾ ಶಿರಶೆಟ್ಟಿ ಅವರ ಗಮನಕ್ಕೂ ತರಲಾಗಿದೆ. ಆದರೇ ಈವರೆಗೆ ಯಾವುದೇ ಪ್ರಯೋಜನ ಆಗಿಲ್ಲ ಎಂದು ವಿಜಯಕುಮಾರ ನಾತೆ ಮೊದಲಾದವರು ಆಪಾದಿಸಿದ್ದಾರೆ.<br /> <br /> ದಕ್ಷ ಆಡಳಿತಕ್ಕೆ ಹೆಸರಾದ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಈ ಮೂಲಕ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>