<p><strong>ಕುರುಗೋಡು: </strong>ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನ ರೂಪಿಸಿಕೊಳ್ಳಲು ಅತಿ ಪ್ರಮುಖ ಘಟ್ಟವಾಗಿದ್ದು, ಮಾನಸಿಕವಾಗಿ ವಿಚಲಿತರಾಗದೆ ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ. ಅಂಥೋಣಿ ಹೇಳಿದರು.<br /> <br /> ಬಾಲ ವಿಕಾಸ ಅಕಾಡೆಮಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದಲ್ಲಿ ಎಂ.ಡಿ.ಎಂ.ಎಂ. ಶಾಲೆಯಲ್ಲಿ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಿದ್ದತೆ ಕುರಿತು ಏರ್ಪಡಿಸಿದ್ದ ಶಿಬಿರದಲ್ಲಿ ಮಾತನಾಡಿದರು.<br /> <br /> ಹದಿ ಹರೆಯದ ಹೊಸ್ತಿಲಲ್ಲಿರುವ ವಿದ್ಯಾರ್ಥಿಗಳಿಗೆ ದೈಹಿಕ ಮತ್ತು ಮಾನಸಿಕ ಬದಲಾವಣೆಯ ಕಾಲ ಘಟ್ಟ. ಈ ಸಂದರ್ಭದಲ್ಲಿ ಮಾನಸಿಕ ಆಲೋಚನೆಗಳಿಗೆ ಮನ್ನಣೆ ನೀಡದೆ ಭವಿಷ್ಯದ ಬಗ್ಗೆ ಚಿಂತನೆ ಮಾಡಿ, ಅಧ್ಯಯನ ಮಾಡಬೇಕು ಎಂದು ಅವರು ಸಲಹೆ ನೀಡಿದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯೆ ಎನ್.ಎಂ. ಗಾಯಿತ್ರಮ್ಮ ಕಾರ್ಯಕ್ರಮ ಉದ್ಘಾಟಿಸಿದರು.<br /> <br /> ಎನ್. ಶಿವರುದ್ರಗೌಡ್ರು ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಗಾಳಿ ಮಾರುತಿ, ರಮೇಶ್, ಶಂಭುಲಿಂಗ, ಶ್ರೀನಿವಾಸ, ಬಸವರಾಜ ಶಿಬಿರದಲ್ಲಿ ಮಾದರಿ ಪಾಠ ಬೋಧನೆ ಮಾಡಿದರು.<br /> <br /> ಶಿಶುಭಿವೃದ್ಧಿ ಯೋಜನಾಧಿಕಾರಿ ಸೋಮಶೇಖರ್, ಶಿಕ್ಷಣ ಸಂಯೋಜಕ ಕೆ. ಗಾದಿಲಿಂಗಪ್ಪ, ಎನ್. ಮಂಜುನಾಥ ಗೌಡ, ಎನ್.ನಾಗನಗೌಡ, ಡಾ. ಹರಳೇಳಿ ಮಠ್ ಶಾಮ್ ಉಪಸ್ಥಿತರಿದ್ದರು.<br /> <br /> ಅಂಗನವಾಡಿ ಮೇಲ್ವಿಚಾರಕಿ ಕವಿತಾ ನಿರೂಪಿಸಿದರು. ಶಿಕ್ಷಕಿ ಟಿ.ಮಲ್ಲಮ್ಮ ಸ್ವಾಗತಿಸಿ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು: </strong>ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನ ರೂಪಿಸಿಕೊಳ್ಳಲು ಅತಿ ಪ್ರಮುಖ ಘಟ್ಟವಾಗಿದ್ದು, ಮಾನಸಿಕವಾಗಿ ವಿಚಲಿತರಾಗದೆ ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ. ಅಂಥೋಣಿ ಹೇಳಿದರು.<br /> <br /> ಬಾಲ ವಿಕಾಸ ಅಕಾಡೆಮಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದಲ್ಲಿ ಎಂ.ಡಿ.ಎಂ.ಎಂ. ಶಾಲೆಯಲ್ಲಿ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಿದ್ದತೆ ಕುರಿತು ಏರ್ಪಡಿಸಿದ್ದ ಶಿಬಿರದಲ್ಲಿ ಮಾತನಾಡಿದರು.<br /> <br /> ಹದಿ ಹರೆಯದ ಹೊಸ್ತಿಲಲ್ಲಿರುವ ವಿದ್ಯಾರ್ಥಿಗಳಿಗೆ ದೈಹಿಕ ಮತ್ತು ಮಾನಸಿಕ ಬದಲಾವಣೆಯ ಕಾಲ ಘಟ್ಟ. ಈ ಸಂದರ್ಭದಲ್ಲಿ ಮಾನಸಿಕ ಆಲೋಚನೆಗಳಿಗೆ ಮನ್ನಣೆ ನೀಡದೆ ಭವಿಷ್ಯದ ಬಗ್ಗೆ ಚಿಂತನೆ ಮಾಡಿ, ಅಧ್ಯಯನ ಮಾಡಬೇಕು ಎಂದು ಅವರು ಸಲಹೆ ನೀಡಿದರು.<br /> <br /> ಜಿಲ್ಲಾ ಪಂಚಾಯಿತಿ ಸದಸ್ಯೆ ಎನ್.ಎಂ. ಗಾಯಿತ್ರಮ್ಮ ಕಾರ್ಯಕ್ರಮ ಉದ್ಘಾಟಿಸಿದರು.<br /> <br /> ಎನ್. ಶಿವರುದ್ರಗೌಡ್ರು ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಗಾಳಿ ಮಾರುತಿ, ರಮೇಶ್, ಶಂಭುಲಿಂಗ, ಶ್ರೀನಿವಾಸ, ಬಸವರಾಜ ಶಿಬಿರದಲ್ಲಿ ಮಾದರಿ ಪಾಠ ಬೋಧನೆ ಮಾಡಿದರು.<br /> <br /> ಶಿಶುಭಿವೃದ್ಧಿ ಯೋಜನಾಧಿಕಾರಿ ಸೋಮಶೇಖರ್, ಶಿಕ್ಷಣ ಸಂಯೋಜಕ ಕೆ. ಗಾದಿಲಿಂಗಪ್ಪ, ಎನ್. ಮಂಜುನಾಥ ಗೌಡ, ಎನ್.ನಾಗನಗೌಡ, ಡಾ. ಹರಳೇಳಿ ಮಠ್ ಶಾಮ್ ಉಪಸ್ಥಿತರಿದ್ದರು.<br /> <br /> ಅಂಗನವಾಡಿ ಮೇಲ್ವಿಚಾರಕಿ ಕವಿತಾ ನಿರೂಪಿಸಿದರು. ಶಿಕ್ಷಕಿ ಟಿ.ಮಲ್ಲಮ್ಮ ಸ್ವಾಗತಿಸಿ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>