<p><strong>ಗದಗ</strong>: ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ಹಾಡು ಒಳಗೊಂಡಿರುವ `ಭಾಗ್ ಮಿಲ್ಖಾ ಭಾಗ್' ಚಿತ್ರ ಬಹಿಷ್ಕರಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಭಾನುವಾರ ಪ್ರತಿಭಟನೆ ನಡೆಸಿದರು.<br /> <br /> ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಗಾಂಧಿವೃತ್ತದಲ್ಲಿ ಮಾನವ ಸರಪಳಿ ರಚಿಸಿ ಚಿತ್ರ ಪ್ರದರ್ಶನ ನಿಲ್ಲಿಸುವಂತೆ ಘೋಷಣೆ ಕೂಗಿದರು.<br /> <br /> ಚಲನಚಿತ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಗೌರವಿಸುವ ಶಬ್ಧಗಳು ಹಾಡಿನಲ್ಲಿ ಒಳಗೊಂಡಿದೆ. ಹವನ ಹಿಂದೂ ಧರ್ಮದಲ್ಲಿ ಪವಿತ್ರ ಧಾರ್ಮಿಕ ಅನುಷ್ಠಾನವಾಗಿದೆ. ಆದ್ದರಿಂದ ಈ ಶಬ್ಧವನ್ನು ತಪ್ಪಾಗಿ ಉಪಯೋಗಿಸಿದ್ದರಿಂದ ವಿಶ್ವದಲ್ಲಿರುವ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ಆದ್ದರಿಂದ ಚಿತ್ರಮಂದಿರದ ಮಾಲೀಕರು ಸಹ ಚಿತ್ರ ಪ್ರದರ್ಶನವನ್ನು ತಕ್ಷಣ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಈ ಚಿತ್ರಕ್ಕೆ ನೀಡಿರುವ ಪ್ರಮಾಣಪತ್ರ ರದ್ದುಗೊಳಿಸಬೇಕು ಎಂದು ಕೇಂದ್ರ ಚಲನಚಿತ್ರ ಪರಿವೀಕ್ಷಣಾ ಮಂಡಳಿಗೆ (ಸೆನ್ಸಾರ್ ಬೋರ್ಡ್) ಪತ್ರ ಬರೆಯಲಾಗಿದೆ. ಚಲನಚಿತ್ರಗಳು ಹಿಂದೂಗಳ ಧಾರ್ಮಿಕ ಭಾವನೆಯನ್ನು ವಿವಿಧ ರೀತಿಯಲ್ಲಿ ಅವಮಾನ ಮಾಡುತ್ತಿವೆ. ಈ ಹಾಡನ್ನು ಚಿತ್ರದಿಂದ ತೆಗೆದು ಹಾಕಬೇಕು. ಇಲ್ಲದಿದ್ದರೆ ಚಿತ್ರವನ್ನು ಬಹಿಷ್ಕರಿಸಲು ಕರೆ ನೀಡಲಾಗುವುದು ಎಂದು ಎಚ್ಚರಿಸಿದರು.<br /> ಪ್ರತಿಭಟನೆಯಲ್ಲಿ ಸಮಿತಿಯ ಜಿ.ಆರ್. ಹಿರೇಮಠ್, ಮುಂಗಂಡದ, ರಾಜು, ಮಹೇಶ, ರಾಘವೇಂದ್ರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ಹಾಡು ಒಳಗೊಂಡಿರುವ `ಭಾಗ್ ಮಿಲ್ಖಾ ಭಾಗ್' ಚಿತ್ರ ಬಹಿಷ್ಕರಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಭಾನುವಾರ ಪ್ರತಿಭಟನೆ ನಡೆಸಿದರು.<br /> <br /> ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಗಾಂಧಿವೃತ್ತದಲ್ಲಿ ಮಾನವ ಸರಪಳಿ ರಚಿಸಿ ಚಿತ್ರ ಪ್ರದರ್ಶನ ನಿಲ್ಲಿಸುವಂತೆ ಘೋಷಣೆ ಕೂಗಿದರು.<br /> <br /> ಚಲನಚಿತ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಗೌರವಿಸುವ ಶಬ್ಧಗಳು ಹಾಡಿನಲ್ಲಿ ಒಳಗೊಂಡಿದೆ. ಹವನ ಹಿಂದೂ ಧರ್ಮದಲ್ಲಿ ಪವಿತ್ರ ಧಾರ್ಮಿಕ ಅನುಷ್ಠಾನವಾಗಿದೆ. ಆದ್ದರಿಂದ ಈ ಶಬ್ಧವನ್ನು ತಪ್ಪಾಗಿ ಉಪಯೋಗಿಸಿದ್ದರಿಂದ ವಿಶ್ವದಲ್ಲಿರುವ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ಆದ್ದರಿಂದ ಚಿತ್ರಮಂದಿರದ ಮಾಲೀಕರು ಸಹ ಚಿತ್ರ ಪ್ರದರ್ಶನವನ್ನು ತಕ್ಷಣ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಈ ಚಿತ್ರಕ್ಕೆ ನೀಡಿರುವ ಪ್ರಮಾಣಪತ್ರ ರದ್ದುಗೊಳಿಸಬೇಕು ಎಂದು ಕೇಂದ್ರ ಚಲನಚಿತ್ರ ಪರಿವೀಕ್ಷಣಾ ಮಂಡಳಿಗೆ (ಸೆನ್ಸಾರ್ ಬೋರ್ಡ್) ಪತ್ರ ಬರೆಯಲಾಗಿದೆ. ಚಲನಚಿತ್ರಗಳು ಹಿಂದೂಗಳ ಧಾರ್ಮಿಕ ಭಾವನೆಯನ್ನು ವಿವಿಧ ರೀತಿಯಲ್ಲಿ ಅವಮಾನ ಮಾಡುತ್ತಿವೆ. ಈ ಹಾಡನ್ನು ಚಿತ್ರದಿಂದ ತೆಗೆದು ಹಾಕಬೇಕು. ಇಲ್ಲದಿದ್ದರೆ ಚಿತ್ರವನ್ನು ಬಹಿಷ್ಕರಿಸಲು ಕರೆ ನೀಡಲಾಗುವುದು ಎಂದು ಎಚ್ಚರಿಸಿದರು.<br /> ಪ್ರತಿಭಟನೆಯಲ್ಲಿ ಸಮಿತಿಯ ಜಿ.ಆರ್. ಹಿರೇಮಠ್, ಮುಂಗಂಡದ, ರಾಜು, ಮಹೇಶ, ರಾಘವೇಂದ್ರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>