<p><strong>ದುಶಾಂಬೆ</strong> (ಪಿಟಿಐ): ಹೆಚ್ಚುತ್ತಿರುವ ಭಾರತದ ಇಂಧನ ಅವಶ್ಯಕತೆಗಳನ್ನು ಪೂರೈಸುವ ಸಾಮರ್ಥ್ಯವನ್ನು ಯುರೇಷಿಯಾ ಹೊಂದಿದ್ದು ಅದನ್ನು ಅಗತ್ಯಗಳಿಗೆ ತಕ್ಕಂತೆ ಪೂರಕವಾಗಿ ಬಳಸಿಕೊಳ್ಳಬೇಕಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಂ. ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.<br /> <br /> ಯುರೇಷಿಯಾ ರಾಷ್ಟ್ರಗಳ ನೆರವು ಪಡೆದು ಅಗಾಧ ನೈಸರ್ಗಿಕ ಸಂಪನ್ಮೂಲಗಳನ್ನು ರಾಷ್ಟ್ರದ ಆರ್ಥಿಕ ಬೆಳವಣಿಯ ಸಾಧನಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಅವರು ಭಾರತದ ರಾಯಭಾರ ಕಚೇರಿಯ ಹಿರಿಯ ಅಧಿಕಾರಿಗಳಿಗೆ ಸಲಹೆ ಮಾಡಿದರು. <br /> <br /> ಹನ್ನೊಂದು ರಾಷ್ಟ್ರಗಳಲ್ಲಿರುವ ಭಾರತದ ರಾಯಭಾರ ಕಚೇರಿ ಅಧಿಕಾರಿಗಳು ಭಾಗವಹಿಸಿದ್ದ 6ನೇ ಪ್ರಾದೇಶಿಕ ಸಮಾವೇಶದಲ್ಲಿ ಮಾತನಾಡಿದ ಅವರು, `ವಾಣಿಜ್ಯ, ಸಾರಿಗೆ ಸಂಪರ್ಕ, ಸಮುದಾಯ ಮತ್ತು ರಾಜತಾಂತ್ರಿಕ ಬಾಂಧವ್ಯಕ್ಕೆ ಸಂಬಂಧಿಸಿದಂತೆ ಮಧ್ಯ ಏಷ್ಯ ರಾಷ್ಟ್ರಗಳ ಜತೆ ಭಾರತ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದುವುದು ಅಗತ್ಯ~ ಎಂದು ಪ್ರತಿಪಾದಿಸಿದರು.<br /> <br /> ಮುಂಬರುವ ದಿನಗಳಲ್ಲಿ ಈ ಪ್ರದೇಶ ಭಾರತೀಯ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸದ ತಾಣವಾಗುವ ಅಲ್ಲ ಅರ್ಹತೆಗಳನ್ನು ಹೊಂದಿದೆ ಎಂದು ಕೃಷ್ಣ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಶಾಂಬೆ</strong> (ಪಿಟಿಐ): ಹೆಚ್ಚುತ್ತಿರುವ ಭಾರತದ ಇಂಧನ ಅವಶ್ಯಕತೆಗಳನ್ನು ಪೂರೈಸುವ ಸಾಮರ್ಥ್ಯವನ್ನು ಯುರೇಷಿಯಾ ಹೊಂದಿದ್ದು ಅದನ್ನು ಅಗತ್ಯಗಳಿಗೆ ತಕ್ಕಂತೆ ಪೂರಕವಾಗಿ ಬಳಸಿಕೊಳ್ಳಬೇಕಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಂ. ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.<br /> <br /> ಯುರೇಷಿಯಾ ರಾಷ್ಟ್ರಗಳ ನೆರವು ಪಡೆದು ಅಗಾಧ ನೈಸರ್ಗಿಕ ಸಂಪನ್ಮೂಲಗಳನ್ನು ರಾಷ್ಟ್ರದ ಆರ್ಥಿಕ ಬೆಳವಣಿಯ ಸಾಧನಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಅವರು ಭಾರತದ ರಾಯಭಾರ ಕಚೇರಿಯ ಹಿರಿಯ ಅಧಿಕಾರಿಗಳಿಗೆ ಸಲಹೆ ಮಾಡಿದರು. <br /> <br /> ಹನ್ನೊಂದು ರಾಷ್ಟ್ರಗಳಲ್ಲಿರುವ ಭಾರತದ ರಾಯಭಾರ ಕಚೇರಿ ಅಧಿಕಾರಿಗಳು ಭಾಗವಹಿಸಿದ್ದ 6ನೇ ಪ್ರಾದೇಶಿಕ ಸಮಾವೇಶದಲ್ಲಿ ಮಾತನಾಡಿದ ಅವರು, `ವಾಣಿಜ್ಯ, ಸಾರಿಗೆ ಸಂಪರ್ಕ, ಸಮುದಾಯ ಮತ್ತು ರಾಜತಾಂತ್ರಿಕ ಬಾಂಧವ್ಯಕ್ಕೆ ಸಂಬಂಧಿಸಿದಂತೆ ಮಧ್ಯ ಏಷ್ಯ ರಾಷ್ಟ್ರಗಳ ಜತೆ ಭಾರತ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದುವುದು ಅಗತ್ಯ~ ಎಂದು ಪ್ರತಿಪಾದಿಸಿದರು.<br /> <br /> ಮುಂಬರುವ ದಿನಗಳಲ್ಲಿ ಈ ಪ್ರದೇಶ ಭಾರತೀಯ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸದ ತಾಣವಾಗುವ ಅಲ್ಲ ಅರ್ಹತೆಗಳನ್ನು ಹೊಂದಿದೆ ಎಂದು ಕೃಷ್ಣ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>