<p>ಜಾಮ್ ನಗರ (ಗುಜರಾತ್) (ಪಿಟಿಐ): ಜಕಾಹು ಕರಾವಳಿಯಾಚೆ ಅರಬ್ಬೀ ಸಮುದ್ರದಲ್ಲಿ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ನೌಕಾಪಡೆ ಸಿಬ್ಬಂದಿ ಭಾರತೀಯ ಮೀನುಗಾರರ ಮೇಲೆ ಯದ್ವಾತದ್ವ ಗುಂಡು ಹಾರಿಸಿದ ಪರಿಣಾಮವಾಗಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ಅಧಿಕಾರಿಗಳು ಶುಕ್ರವಾರ ಇಲ್ಲಿ ತಿಳಿಸಿದ್ದಾರೆ.<br /> <br /> ನಾವೆಯಲ್ಲಿದ್ದ ಆರು ಮಂದಿ ಮೀನುಗಾರರ ಪೈಕಿ ದಯಾ ಭಾಯಿ ಹೆಸರಿನ ಒಬ್ಬ ಭಾರತೀಯ ಮೀನುಗಾರನಿಗೆ ಕಳೆದ ರಾತ್ರಿ ಪಾಕಿಸ್ತಾನ ನೌಕಾಪಡೆ ಭದ್ರತಾ ಸಿಬ್ಬಂದಿ ನಡೆಸಿದ ದಾಳಿಯಿಂದ ಗುಂಡೇಟಿನ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿದರು.<br /> <br /> ಭಾರತೀಯ ಮೀನುಗಾರರು ಸಮುದ್ರದಲ್ಲಿ ಅಂತರರಾಷ್ಟ್ರೀಯ ಗಡಿಯಲ್ಲಿ ಮೀನುಗಾರಿಕೆ ನಿರತರಾಗಿದ್ದಾಗ ಈ ದಾಳಿ ನಡೆದಿದೆ. ಎಂದು ನೌಕಾಪಡೆ ಪೊಲೀಸ್ ಅಧಿಕಾರಿಗಳು ನುಡಿದರು.<br /> <br /> ಪೋರ್ ಬಂದರಿಗೆ ಸೇರಿದ ~ಸಾಗರ ಭುಜ~ ನಾವೆಯ ಮೂಲಕ ಮೀನುಗಾರರು ಸಮುದ್ರಕ್ಕೆ ಮೀನು ಹಿಡಿಯಲು ತೆರಳಿದ್ದರು. ಘಟನೆಯಲ್ಲಿ ಗಾಯಗೊಂಡ ಮೀನುಗಾರನನ್ನು ಓಖಾದಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಾಮ್ ನಗರ (ಗುಜರಾತ್) (ಪಿಟಿಐ): ಜಕಾಹು ಕರಾವಳಿಯಾಚೆ ಅರಬ್ಬೀ ಸಮುದ್ರದಲ್ಲಿ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ನೌಕಾಪಡೆ ಸಿಬ್ಬಂದಿ ಭಾರತೀಯ ಮೀನುಗಾರರ ಮೇಲೆ ಯದ್ವಾತದ್ವ ಗುಂಡು ಹಾರಿಸಿದ ಪರಿಣಾಮವಾಗಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ಅಧಿಕಾರಿಗಳು ಶುಕ್ರವಾರ ಇಲ್ಲಿ ತಿಳಿಸಿದ್ದಾರೆ.<br /> <br /> ನಾವೆಯಲ್ಲಿದ್ದ ಆರು ಮಂದಿ ಮೀನುಗಾರರ ಪೈಕಿ ದಯಾ ಭಾಯಿ ಹೆಸರಿನ ಒಬ್ಬ ಭಾರತೀಯ ಮೀನುಗಾರನಿಗೆ ಕಳೆದ ರಾತ್ರಿ ಪಾಕಿಸ್ತಾನ ನೌಕಾಪಡೆ ಭದ್ರತಾ ಸಿಬ್ಬಂದಿ ನಡೆಸಿದ ದಾಳಿಯಿಂದ ಗುಂಡೇಟಿನ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿದರು.<br /> <br /> ಭಾರತೀಯ ಮೀನುಗಾರರು ಸಮುದ್ರದಲ್ಲಿ ಅಂತರರಾಷ್ಟ್ರೀಯ ಗಡಿಯಲ್ಲಿ ಮೀನುಗಾರಿಕೆ ನಿರತರಾಗಿದ್ದಾಗ ಈ ದಾಳಿ ನಡೆದಿದೆ. ಎಂದು ನೌಕಾಪಡೆ ಪೊಲೀಸ್ ಅಧಿಕಾರಿಗಳು ನುಡಿದರು.<br /> <br /> ಪೋರ್ ಬಂದರಿಗೆ ಸೇರಿದ ~ಸಾಗರ ಭುಜ~ ನಾವೆಯ ಮೂಲಕ ಮೀನುಗಾರರು ಸಮುದ್ರಕ್ಕೆ ಮೀನು ಹಿಡಿಯಲು ತೆರಳಿದ್ದರು. ಘಟನೆಯಲ್ಲಿ ಗಾಯಗೊಂಡ ಮೀನುಗಾರನನ್ನು ಓಖಾದಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>