<p><strong>ಬೀಜಿಂಗ್ (ಐಎಎನ್ಎಸ್/ಪಿಟಿಐ): </strong> ಭಾರತದ ಜತೆಗಿನ ಮನಸ್ತಾಪ ಅಲ್ಪ ಪ್ರಮಾಣದ್ದು ಎಂದು ಹೇಳಿರುವ ಚೀನಾ, ಇದು ಎರಡೂ ದೇಶಗಳ ನಡುವಿನ ವ್ಯವಹಾರ ಹಾಗೂ ಸ್ನೇಹಕ್ಕೆ ಅಡ್ಡಿಯಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.<br /> <br /> ಇಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ಸಂದರ್ಭದಲ್ಲಿ ಗುರುವಾರ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರೊಂದಿಗೆ ಮಾತುಕತೆ ನಡೆಸಿದ ಚೀನಾ ವಿದೇಶಾಂಗ ಸಚಿವ ಯಾಂಗ್ ಜೇಚಿ ಈ ಹೇಳಿಕೆ ನೀಡಿದ್ದಾರೆ.<br /> <br /> ಎರಡೂ ದೇಶಗಳ ನಡುವಿನ ಆರ್ಥಿಕ ಸಂಬಂಧವನ್ನು ಗಮನದಲ್ಲಿಟ್ಟುಕೊಂಡು ಚೀನಾ, ಭಾರತದ ಅಭಿವೃದ್ಧಿಯ ಆಶಯಗಳಿಗೆ ಉತ್ತೇಜನ ನೀಡುತ್ತದೆ ಹಾಗೂ `ಸೂಕ್ಷ್ಮ ವಿಷಯ~ಗಳನ್ನು ಜಾಗರೂಕತೆಯಿಂದ ನಿಭಾಯಿಸುತ್ತದೆ ಎಂದು ಅವರು ಹೇಳಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.<br /> <br /> <strong>ಜರ್ದಾರಿ, ಕೃಷ್ಣ ಮಾತುಕತೆ</strong><br /> <strong>ಬೀಜಿಂಗ್ (ಐಎಎನ್ಎಸ್): </strong>ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಮತ್ತು ಪಾಕಿಸ್ತಾನ ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಗುರುವಾರ ಇಲ್ಲಿ ಆಫ್ಘಾನಿಸ್ತಾನದ ಕುರಿತು ಚರ್ಚೆ ನಡೆಸಿದರು.ಆಫ್ಘಾನಿಸ್ತಾನದಲ್ಲಿ ಭಾರತ ಮಾಡಿರುವ ಹೂಡಿಕೆಯ ಕುರಿತು ಜರ್ದಾರಿ ಪ್ರಶ್ನಿಸಿದರು. <br /> <br /> ಆರೋಗ್ಯ, ಶಿಕ್ಷಣ, ಅಭಿವೃದ್ಧಿ ಯೋಜನೆಗಳಲ್ಲಿ ಭಾರತ ಹಣ ತೊಡಗಿಸಿರುವುದಾಗಿ ಕೃಷ್ಣ ತಿಳಿಸಿದರು. ಇದಕ್ಕೂ ಮುನ್ನ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಮಾತನಾಡಿದ ಕೃಷ್ಣ, ಆಫ್ಘಾನಿಸ್ತಾನದ ಪುನರ್ನಿರ್ಮಾಣಕ್ಕಾಗಿ ಭಾರತ 200 ಕೋಟಿ ಡಾಲರ್ ಹಣ ವಿನಿಯೋಗಿಸಿದ್ದಾಗಿ ಹೇಳಿದ್ದರು. <br /> <br /> ಶಾಂಘೈ ಸಹಕಾರ ಸಂಘಟನೆಯ 12ನೇ ಶೃಂಗಸಭೆಯಲ್ಲಿ ಪಾಲ್ಗೊಂಡ ಕೃಷ್ಣ ಗುರುವಾರ ಭಾರತಕ್ಕೆ ವಾಪಸಾಗುವ ಮುನ್ನ ಚೀನಾ ಅಧ್ಯಕ್ಷ ಹು ಜಿಂಟಾವೊ ಅವರನ್ನು ಸಹ ಭೇಟಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್ (ಐಎಎನ್ಎಸ್/ಪಿಟಿಐ): </strong> ಭಾರತದ ಜತೆಗಿನ ಮನಸ್ತಾಪ ಅಲ್ಪ ಪ್ರಮಾಣದ್ದು ಎಂದು ಹೇಳಿರುವ ಚೀನಾ, ಇದು ಎರಡೂ ದೇಶಗಳ ನಡುವಿನ ವ್ಯವಹಾರ ಹಾಗೂ ಸ್ನೇಹಕ್ಕೆ ಅಡ್ಡಿಯಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.<br /> <br /> ಇಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ಸಂದರ್ಭದಲ್ಲಿ ಗುರುವಾರ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರೊಂದಿಗೆ ಮಾತುಕತೆ ನಡೆಸಿದ ಚೀನಾ ವಿದೇಶಾಂಗ ಸಚಿವ ಯಾಂಗ್ ಜೇಚಿ ಈ ಹೇಳಿಕೆ ನೀಡಿದ್ದಾರೆ.<br /> <br /> ಎರಡೂ ದೇಶಗಳ ನಡುವಿನ ಆರ್ಥಿಕ ಸಂಬಂಧವನ್ನು ಗಮನದಲ್ಲಿಟ್ಟುಕೊಂಡು ಚೀನಾ, ಭಾರತದ ಅಭಿವೃದ್ಧಿಯ ಆಶಯಗಳಿಗೆ ಉತ್ತೇಜನ ನೀಡುತ್ತದೆ ಹಾಗೂ `ಸೂಕ್ಷ್ಮ ವಿಷಯ~ಗಳನ್ನು ಜಾಗರೂಕತೆಯಿಂದ ನಿಭಾಯಿಸುತ್ತದೆ ಎಂದು ಅವರು ಹೇಳಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.<br /> <br /> <strong>ಜರ್ದಾರಿ, ಕೃಷ್ಣ ಮಾತುಕತೆ</strong><br /> <strong>ಬೀಜಿಂಗ್ (ಐಎಎನ್ಎಸ್): </strong>ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಮತ್ತು ಪಾಕಿಸ್ತಾನ ಅಧ್ಯಕ್ಷ ಆಸೀಫ್ ಅಲಿ ಜರ್ದಾರಿ ಗುರುವಾರ ಇಲ್ಲಿ ಆಫ್ಘಾನಿಸ್ತಾನದ ಕುರಿತು ಚರ್ಚೆ ನಡೆಸಿದರು.ಆಫ್ಘಾನಿಸ್ತಾನದಲ್ಲಿ ಭಾರತ ಮಾಡಿರುವ ಹೂಡಿಕೆಯ ಕುರಿತು ಜರ್ದಾರಿ ಪ್ರಶ್ನಿಸಿದರು. <br /> <br /> ಆರೋಗ್ಯ, ಶಿಕ್ಷಣ, ಅಭಿವೃದ್ಧಿ ಯೋಜನೆಗಳಲ್ಲಿ ಭಾರತ ಹಣ ತೊಡಗಿಸಿರುವುದಾಗಿ ಕೃಷ್ಣ ತಿಳಿಸಿದರು. ಇದಕ್ಕೂ ಮುನ್ನ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಮಾತನಾಡಿದ ಕೃಷ್ಣ, ಆಫ್ಘಾನಿಸ್ತಾನದ ಪುನರ್ನಿರ್ಮಾಣಕ್ಕಾಗಿ ಭಾರತ 200 ಕೋಟಿ ಡಾಲರ್ ಹಣ ವಿನಿಯೋಗಿಸಿದ್ದಾಗಿ ಹೇಳಿದ್ದರು. <br /> <br /> ಶಾಂಘೈ ಸಹಕಾರ ಸಂಘಟನೆಯ 12ನೇ ಶೃಂಗಸಭೆಯಲ್ಲಿ ಪಾಲ್ಗೊಂಡ ಕೃಷ್ಣ ಗುರುವಾರ ಭಾರತಕ್ಕೆ ವಾಪಸಾಗುವ ಮುನ್ನ ಚೀನಾ ಅಧ್ಯಕ್ಷ ಹು ಜಿಂಟಾವೊ ಅವರನ್ನು ಸಹ ಭೇಟಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>