<p><strong>ಇಸ್ಲಾಮಾಬಾದ್ (ಪಿಟಿಐ):</strong> ಭಾರತ ಮತ್ತು ಪಾಕಿಸ್ತಾನ ಮಧ್ಯ ಇರುವ ವಾಘಾ-ಅಟ್ಟಾರಿ ಗಡಿ ಸೇರಿದಂತೆ ನಿಯಂತ್ರಣ ರೇಖೆಯುದ್ದಕ್ಕೂ ಇರುವ ಉದ್ವೇಗವನ್ನು ಕಡಿಮೆಗೊಳಿಸಿ, ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಬಹು ನಿರೀಕ್ಷಿತವಾಗಿದ್ದ ಉಭಯ ದೇಶಗಳ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರ ಸಭೆ ಮಂಗಳವಾರ ಪ್ರಾರಂಭವಾಯಿತು.<br /> <br /> ಸಭೆಯಲ್ಲಿ ಭಾರತೀಯ ಸೇನಾ ನಿಯೋಗದ ಮುಖ್ಯಸ್ಥರಾಗಿ ಲೆಪ್ಟಿನೆಂಟ್ ಜನರಲ್ ವಿನೋದ್ ಭಾಟಿಯಾ ಮತ್ತು ಪಾಕ್ ಸೇನಾ ನಿಯೋಗದ ಮುಖ್ಯಸ್ಥರಾಗಿ ಮೇಜರ್ ಜನರಲ್ ಆಮಿರ್ ರಿಯಾಜ್ ಅವರು ಭಾಗವಹಿಸಿದ್ದಾರೆ.<br /> <br /> ಸಭೆಯಲ್ಲಿ ಪಾಲ್ಗೊಂಡ ಉಭಯ ಸೇನಾ ನಿಯೋಗಗಳು ಓರ್ವ ಬ್ರಿಗೇಡಿಯರ್ ಮತ್ತು ಮೂವರು ಲೆಪ್ಟಿನೆಂಟ್ ಕರ್ನಲ್ಗಳನ್ನು ಒಳಗೊಂಡಿವೆ.<br /> <br /> ಇತ್ತೀಚಿನ ದಿನಗಳಲ್ಲಿ ಪದೇ ಪದೇ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆಯಂತಹ ಘಟನೆಗಳು ಜರಗುತ್ತಿರುವ ಹಿನ್ನೆಲೆಯಲ್ಲಿ ಈ ಸಭೆಗೆ ಮಹತ್ವ ಬಂದಿದೆ.<br /> <br /> ಅಲ್ಲದೇ, ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರ ಸಭೆಯು 14 ವರ್ಷಗಳ ತರುವಾಯ ಇದೇ ಮೊದಲ ಬಾರಿಗೆ ನಡೆಯುತ್ತಿದೆ. ಈ ಹಿಂದೆ 1999ರಲ್ಲಿ ಕಾರ್ಗಿಲ್ ಯುದ್ಧದ ನಂತರ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್ (ಪಿಟಿಐ):</strong> ಭಾರತ ಮತ್ತು ಪಾಕಿಸ್ತಾನ ಮಧ್ಯ ಇರುವ ವಾಘಾ-ಅಟ್ಟಾರಿ ಗಡಿ ಸೇರಿದಂತೆ ನಿಯಂತ್ರಣ ರೇಖೆಯುದ್ದಕ್ಕೂ ಇರುವ ಉದ್ವೇಗವನ್ನು ಕಡಿಮೆಗೊಳಿಸಿ, ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಬಹು ನಿರೀಕ್ಷಿತವಾಗಿದ್ದ ಉಭಯ ದೇಶಗಳ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರ ಸಭೆ ಮಂಗಳವಾರ ಪ್ರಾರಂಭವಾಯಿತು.<br /> <br /> ಸಭೆಯಲ್ಲಿ ಭಾರತೀಯ ಸೇನಾ ನಿಯೋಗದ ಮುಖ್ಯಸ್ಥರಾಗಿ ಲೆಪ್ಟಿನೆಂಟ್ ಜನರಲ್ ವಿನೋದ್ ಭಾಟಿಯಾ ಮತ್ತು ಪಾಕ್ ಸೇನಾ ನಿಯೋಗದ ಮುಖ್ಯಸ್ಥರಾಗಿ ಮೇಜರ್ ಜನರಲ್ ಆಮಿರ್ ರಿಯಾಜ್ ಅವರು ಭಾಗವಹಿಸಿದ್ದಾರೆ.<br /> <br /> ಸಭೆಯಲ್ಲಿ ಪಾಲ್ಗೊಂಡ ಉಭಯ ಸೇನಾ ನಿಯೋಗಗಳು ಓರ್ವ ಬ್ರಿಗೇಡಿಯರ್ ಮತ್ತು ಮೂವರು ಲೆಪ್ಟಿನೆಂಟ್ ಕರ್ನಲ್ಗಳನ್ನು ಒಳಗೊಂಡಿವೆ.<br /> <br /> ಇತ್ತೀಚಿನ ದಿನಗಳಲ್ಲಿ ಪದೇ ಪದೇ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆಯಂತಹ ಘಟನೆಗಳು ಜರಗುತ್ತಿರುವ ಹಿನ್ನೆಲೆಯಲ್ಲಿ ಈ ಸಭೆಗೆ ಮಹತ್ವ ಬಂದಿದೆ.<br /> <br /> ಅಲ್ಲದೇ, ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರ ಸಭೆಯು 14 ವರ್ಷಗಳ ತರುವಾಯ ಇದೇ ಮೊದಲ ಬಾರಿಗೆ ನಡೆಯುತ್ತಿದೆ. ಈ ಹಿಂದೆ 1999ರಲ್ಲಿ ಕಾರ್ಗಿಲ್ ಯುದ್ಧದ ನಂತರ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>