<p><strong>ಕುಶಾಲನಗರ:</strong> ‘ಯುವಜನೋತ್ಸವಗಳು ಯುವ ಸಮುದಾಯದಲ್ಲಿ ಶಾಂತಿ, ಸಹಬಾಳ್ವೆ, ಸೌಹಾರ್ದ ಬೆಳೆಸುವ ಮೂಲಕ ರಾಷ್ಟ್ರೀಯ ಭಾವೈಕ್ಯ ಮೂಡಿಸಲು ಸಹಕಾರಿ’ ಎಂದು ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಗುರುವಾರ ಹೇಳಿದರು.<br /> <br /> ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಡಿ.ಎಡ್ ಶಿಕ್ಷಕರ ತರಬೇತಿ ಸಂಸ್ಥೆಗಳ ಪ್ರಶಿಕ್ಷಣಾರ್ಥಿಗಳಿಗೆ ಎರಡು ದಿನಗಳ ಕಾಲ ಏರ್ಪಡಿಸಿರುವ ಎನ್ನೆಸ್ಸೆಸ್ ಜಿಲ್ಲಾಮಟ್ಟದ ಯುವಜನೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಇಂತಹ ಉತ್ಸವಗಳು ಯುವಜನಾಂಗದಲ್ಲಿ ಉತ್ತಮ ವ್ಯಕ್ತಿತ್ವ, ನಾಯಕತ್ವ ಬೆಳೆಸುವ ಮೂಲಕ ಪರಸ್ಪರ ಸಾಂಸ್ಕೃತಿಕ ವಿನಿಮಯ ಮಾಡಿಕೊಳ್ಳಲು ಸೂಕ್ತ ವೇದಿಕೆ ಒದಗಿಸುತ್ತವೆ ಎಂದರು. <br /> <br /> ಡಿಡಿಪಿಐ ಎನ್.ಎ.ರಾಮಸ್ವಾಮಿ, ವಿದ್ಯಾರ್ಥಿಗಳ ಸಾರ್ಥಕ ಸಾಧನೆಗೆ ಸತತ ಅಧ್ಯಯನ, ಕಠಿಣ ಪರಿಶ್ರಮ ಅಗತ್ಯ ಎಂದರು. ಡಯಟ್ ಪ್ರಾಂಶುಪಾಲ ಸಿ.ಜಿ.ಸಿದ್ದಲಿಂಗಸ್ವಾಮಿ, ಎನ್ಎಸ್ಎಸ್ ಅಧಿಕಾರಿ ಕೃಷ್ಣಪ್ಪ ಮಾತನಾಡಿದರು. ಕೂಡುಮಂಗಳೂರು ಗ್ರಾ.ಪಂ.ಅಧ್ಯಕ್ಷೆ ಹೇಮಾವತಿ ಅಧ್ಯಕ್ಷತೆ ವಹಿಸಿದ್ದರು.<br /> <br /> ಮಡಿಕೇರಿ ಬಿಇಓ ಮರಿಸ್ವಾಮಿ, ಸಂಸ್ಥೆಯ ಹಿರಿಯ ಉಪನ್ಯಾಸಕ ಎಸ್.ಸುಂದರ್, ಮಡಿಕೇರಿ ಸರಸ್ವತಿ ಶಿಕ್ಷಕರ ತರಬೇತಿ ಸಂಸ್ಥೆ ಪ್ರಾಂಶುಪಾಲ ಕುಮಾರ್, ಶ್ರೀಮಂಗಲ ಜೇಸಿ ಶಿಕ್ಷಣ ಟ್ರಸ್ಟ್ನ ಅಧ್ಯಕ್ಷ ಕೊಟ್ರಂಗಡ ಸುಬ್ರಮಣಿ, ಸದಾಶಿವ ಪಲ್ಲೇದ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ‘ಯುವಜನೋತ್ಸವಗಳು ಯುವ ಸಮುದಾಯದಲ್ಲಿ ಶಾಂತಿ, ಸಹಬಾಳ್ವೆ, ಸೌಹಾರ್ದ ಬೆಳೆಸುವ ಮೂಲಕ ರಾಷ್ಟ್ರೀಯ ಭಾವೈಕ್ಯ ಮೂಡಿಸಲು ಸಹಕಾರಿ’ ಎಂದು ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಗುರುವಾರ ಹೇಳಿದರು.<br /> <br /> ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಡಿ.ಎಡ್ ಶಿಕ್ಷಕರ ತರಬೇತಿ ಸಂಸ್ಥೆಗಳ ಪ್ರಶಿಕ್ಷಣಾರ್ಥಿಗಳಿಗೆ ಎರಡು ದಿನಗಳ ಕಾಲ ಏರ್ಪಡಿಸಿರುವ ಎನ್ನೆಸ್ಸೆಸ್ ಜಿಲ್ಲಾಮಟ್ಟದ ಯುವಜನೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಇಂತಹ ಉತ್ಸವಗಳು ಯುವಜನಾಂಗದಲ್ಲಿ ಉತ್ತಮ ವ್ಯಕ್ತಿತ್ವ, ನಾಯಕತ್ವ ಬೆಳೆಸುವ ಮೂಲಕ ಪರಸ್ಪರ ಸಾಂಸ್ಕೃತಿಕ ವಿನಿಮಯ ಮಾಡಿಕೊಳ್ಳಲು ಸೂಕ್ತ ವೇದಿಕೆ ಒದಗಿಸುತ್ತವೆ ಎಂದರು. <br /> <br /> ಡಿಡಿಪಿಐ ಎನ್.ಎ.ರಾಮಸ್ವಾಮಿ, ವಿದ್ಯಾರ್ಥಿಗಳ ಸಾರ್ಥಕ ಸಾಧನೆಗೆ ಸತತ ಅಧ್ಯಯನ, ಕಠಿಣ ಪರಿಶ್ರಮ ಅಗತ್ಯ ಎಂದರು. ಡಯಟ್ ಪ್ರಾಂಶುಪಾಲ ಸಿ.ಜಿ.ಸಿದ್ದಲಿಂಗಸ್ವಾಮಿ, ಎನ್ಎಸ್ಎಸ್ ಅಧಿಕಾರಿ ಕೃಷ್ಣಪ್ಪ ಮಾತನಾಡಿದರು. ಕೂಡುಮಂಗಳೂರು ಗ್ರಾ.ಪಂ.ಅಧ್ಯಕ್ಷೆ ಹೇಮಾವತಿ ಅಧ್ಯಕ್ಷತೆ ವಹಿಸಿದ್ದರು.<br /> <br /> ಮಡಿಕೇರಿ ಬಿಇಓ ಮರಿಸ್ವಾಮಿ, ಸಂಸ್ಥೆಯ ಹಿರಿಯ ಉಪನ್ಯಾಸಕ ಎಸ್.ಸುಂದರ್, ಮಡಿಕೇರಿ ಸರಸ್ವತಿ ಶಿಕ್ಷಕರ ತರಬೇತಿ ಸಂಸ್ಥೆ ಪ್ರಾಂಶುಪಾಲ ಕುಮಾರ್, ಶ್ರೀಮಂಗಲ ಜೇಸಿ ಶಿಕ್ಷಣ ಟ್ರಸ್ಟ್ನ ಅಧ್ಯಕ್ಷ ಕೊಟ್ರಂಗಡ ಸುಬ್ರಮಣಿ, ಸದಾಶಿವ ಪಲ್ಲೇದ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>