<p><strong>ಬೆಂಗಳೂರು:</strong> `ಕಂದಾಯ ಇಲಾಖೆಯ ಭೂಮಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು' ಎಂದು ಆಗ್ರಹಿಸಿ ನೇಮಕಾತಿಗೊಂಡ ಭೂಮಾಕಪರು ಒಂದೆಡೆ ಪ್ರತಿಭಟನೆ ನಡೆಸಿದರೆ, ಮತ್ತೊಂದೆಡೆ `ಈ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದನ್ನು ಸಿಐಡಿ ತನಿಖೆಗೆ ವಹಿಸಬೇಕು' ಎಂದು ಸರ್ಕಾರದ ಪರವಾನಗಿ ಹೊಂದಿದ ಭೂಮಾಪಕರು ಭಿಕ್ಷೆ ಬೇಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.<br /> <br /> ಹೊಸದಾಗಿ ನೇಮಕಾತಿಗೊಂಡ ಅಭ್ಯರ್ಥಿಗಳು ನಗರದ ಭೂಮಾಪನ ಇಲಾಖೆ ಕಚೇರಿ ಸಮೀಪ ಪ್ರತಿಭಟನೆ ನಡೆಸಿ, `ಭೂಮಾಪಕರ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಮುಗಿದು ಎರಡು ವರ್ಷಗಳು ಕಳೆದಿವೆ. ಆದರೆ, ಸರ್ಕಾರದಿಂದ ಈವರೆಗೂ ಅಧಿಕೃತ ಆದೇಶ ಪತ್ರ ಬಂದಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> `ಸರ್ಕಾರ ಎರಡು ವರ್ಷಗಳ ಹಿಂದೆ 1,834 ಭೂಮಾಪರ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿತ್ತು. ಈ ಪೈಕಿ 1,704 ಸ್ಥಾನಗಳಿಗೆ ಮಾತ್ರ ನೇಮಕಾತಿ ನಡೆದಿದೆ. ಆದರೆ, ಆದೇಶ ಪ್ರತಿ ಇನ್ನೂ ಕೈಸೇರದ ಕಾರಣ ಅಭ್ಯರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರದಿಂದ ನಗರದ ಬನಪ್ಪ ಉದ್ಯಾನದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಲು ನಿರ್ಧರಿಸಲಾಗಿದ್ದು, ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ' ಎಂದು ಹೋರಾಟ ಸಮಿತಿ ಸದಸ್ಯ ರಾಜೇಂದ್ರ ತಿಳಿಸಿದರು.<br /> <br /> <strong>ಭಿಕ್ಷೆ ಬೇಡಿ ಪ್ರತಿಭಟನೆ</strong>: ಇನ್ನೂ ಕೆ.ಆರ್.ವೃತ್ತ ಸಮೀಪದ ಭೂ ಮಾಪನಾ ಇಲಾಖೆ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸರ್ಕಾರದ ಪರವಾನಗಿ ಪಡೆದ ಭೂಮಾಪಕರು, `ಈ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು' ಎಂದು ಒತ್ತಾಯಿಸಿದರು.<br /> <br /> ಹೋರಾಟ ಸಮಿತಿಯ ಮುಖಂಡ ಲೋಕೇಶ್ ಮಾತನಾಡಿ, `ನ್ಯಾಯಾಲಯದ ಆದೇಶದ ಅನ್ವಯ ಒಂದು ಪ್ರಕರಣಕ್ಕೆ ಅಳತೆ ಶುಲ್ಕ 300 ರಿಂದ 2,000 ರೂಪಾಯಿಗೆ ಹೆಚ್ಚಳ ಮಾಡಬೇಕು. ಜತೆಗೆ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸಿದ್ದಕ್ಕೆ ಗೌರವ ಧನ ಬಿಡುಗಡೆ ಮಾಡದೆ ತಡೆ ಹಿಡಿಯಲಾಗಿದೆ. ಈ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಈ ಬೇಡಿಕೆಗಳು ಈಡೇರಿಸಿದರೆ ಮಾತ್ರ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತೇವೆ. ಇಲ್ಲದಿದ್ದಲ್ಲಿ ಹಂತ ಹಂತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಕಂದಾಯ ಇಲಾಖೆಯ ಭೂಮಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು' ಎಂದು ಆಗ್ರಹಿಸಿ ನೇಮಕಾತಿಗೊಂಡ ಭೂಮಾಕಪರು ಒಂದೆಡೆ ಪ್ರತಿಭಟನೆ ನಡೆಸಿದರೆ, ಮತ್ತೊಂದೆಡೆ `ಈ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದನ್ನು ಸಿಐಡಿ ತನಿಖೆಗೆ ವಹಿಸಬೇಕು' ಎಂದು ಸರ್ಕಾರದ ಪರವಾನಗಿ ಹೊಂದಿದ ಭೂಮಾಪಕರು ಭಿಕ್ಷೆ ಬೇಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.<br /> <br /> ಹೊಸದಾಗಿ ನೇಮಕಾತಿಗೊಂಡ ಅಭ್ಯರ್ಥಿಗಳು ನಗರದ ಭೂಮಾಪನ ಇಲಾಖೆ ಕಚೇರಿ ಸಮೀಪ ಪ್ರತಿಭಟನೆ ನಡೆಸಿ, `ಭೂಮಾಪಕರ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಮುಗಿದು ಎರಡು ವರ್ಷಗಳು ಕಳೆದಿವೆ. ಆದರೆ, ಸರ್ಕಾರದಿಂದ ಈವರೆಗೂ ಅಧಿಕೃತ ಆದೇಶ ಪತ್ರ ಬಂದಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> `ಸರ್ಕಾರ ಎರಡು ವರ್ಷಗಳ ಹಿಂದೆ 1,834 ಭೂಮಾಪರ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿತ್ತು. ಈ ಪೈಕಿ 1,704 ಸ್ಥಾನಗಳಿಗೆ ಮಾತ್ರ ನೇಮಕಾತಿ ನಡೆದಿದೆ. ಆದರೆ, ಆದೇಶ ಪ್ರತಿ ಇನ್ನೂ ಕೈಸೇರದ ಕಾರಣ ಅಭ್ಯರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರದಿಂದ ನಗರದ ಬನಪ್ಪ ಉದ್ಯಾನದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಲು ನಿರ್ಧರಿಸಲಾಗಿದ್ದು, ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ' ಎಂದು ಹೋರಾಟ ಸಮಿತಿ ಸದಸ್ಯ ರಾಜೇಂದ್ರ ತಿಳಿಸಿದರು.<br /> <br /> <strong>ಭಿಕ್ಷೆ ಬೇಡಿ ಪ್ರತಿಭಟನೆ</strong>: ಇನ್ನೂ ಕೆ.ಆರ್.ವೃತ್ತ ಸಮೀಪದ ಭೂ ಮಾಪನಾ ಇಲಾಖೆ ಆಯುಕ್ತರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸರ್ಕಾರದ ಪರವಾನಗಿ ಪಡೆದ ಭೂಮಾಪಕರು, `ಈ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು' ಎಂದು ಒತ್ತಾಯಿಸಿದರು.<br /> <br /> ಹೋರಾಟ ಸಮಿತಿಯ ಮುಖಂಡ ಲೋಕೇಶ್ ಮಾತನಾಡಿ, `ನ್ಯಾಯಾಲಯದ ಆದೇಶದ ಅನ್ವಯ ಒಂದು ಪ್ರಕರಣಕ್ಕೆ ಅಳತೆ ಶುಲ್ಕ 300 ರಿಂದ 2,000 ರೂಪಾಯಿಗೆ ಹೆಚ್ಚಳ ಮಾಡಬೇಕು. ಜತೆಗೆ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸಿದ್ದಕ್ಕೆ ಗೌರವ ಧನ ಬಿಡುಗಡೆ ಮಾಡದೆ ತಡೆ ಹಿಡಿಯಲಾಗಿದೆ. ಈ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಈ ಬೇಡಿಕೆಗಳು ಈಡೇರಿಸಿದರೆ ಮಾತ್ರ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತೇವೆ. ಇಲ್ಲದಿದ್ದಲ್ಲಿ ಹಂತ ಹಂತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>