<p><strong>ಯಾದಗಿರಿ</strong>: ಜಿಲ್ಲೆಯಲ್ಲಿ ಎರಡು ನದಿಗಳು ಹರಿದಿರುವುದರಿಂದ ಬಹುತೇಕ ಜಮೀನು ನೀರಾವರಿ ಸೌಲಭ್ಯ ಪಡೆದಿದ್ದು, ರೈತರು ಭತ್ತ ಬೆಳೆಯುತ್ತಿದ್ದಾರೆ. ವರ್ಷದಲ್ಲಿ ಎರಡು ಭತ್ತದ ಬೆಳೆಗಳನ್ನು ಬೆಳೆಯುವ ಜಿಲ್ಲೆಯ ರೈತರಿಗೆ, ಈ ಬಾರಿಯೂ ಕಾಲುವೆಗೆ ನೀರು ಹರಿಸುವ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಇದರಿಂದ ರೈತರು ಆತಂಕ ಎದುರಿಸುವಂತಾಗಿದೆ.<br /> <br /> ನಗರದ ಸುತ್ತಲಿನ ಭೀಮಾ ನದಿ ತೀರದ ರೈತರು ಭತ್ತದ ನಾಟಿಯನ್ನು ಭರದಿಂದ ಆರಂಭಿಸಿದ್ದಾರೆ. ಭೀಮಾ ನದಿ ತೀರದ ಆಂಧ್ರ ವಲಸಿಗ ರೈತರು ಮತ್ತು ಸ್ಥಳೀಯ ರೈತರು ಭತ್ತದ ನಾಟಿ ಆರಂಭಿಸಿದ್ದು, ಸತತ 3 ದಿನಗಳಿಂದ ಧಾರಾಕಾರ ಸುರಿದ ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.<br /> <br /> ಆದರೆ ನಾರಾಯಣಪುರ ಎಡದಂಡೆ ಕಾಲುವೆಯಿಂದ ನೀರಾವರಿ ಸೌಲಭ್ಯ ಪಡೆದಿರುವ ರೈತರು ಮಾತ್ರ ಇನ್ನೂ ಭತ್ತದ ನಾಟಿ ಮಾಡುವುದೂ ಸಾಧ್ಯವಾಗಿಲ್ಲ. ಮೊದಲೇ ಸುರಪುರ ತಾಲ್ಲೂಕಿನಲ್ಲಿ ಕಡಿಮೆ ಪ್ರಮಾಣದ ಮಳೆ ಸುರಿದಿದ್ದು, ಈ ಮಧ್ಯೆ ಕಾಲುವೆಗೆ ನೀರು ಹರಿಸುವ ದಿನವೂ ನಿಗದಿ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಯಾವ ನಂಬಿಕೆಯ ಮೇಲೆ ಭತ್ತದ ನಾಟಿ ಮಾಡಬೇಕು ಎನ್ನುವ ಪ್ರಶ್ನೆ ರೈತರದ್ದು.<br /> <br /> ಆಲಮಟ್ಟಿ ಜಲಾಶಯದಲ್ಲೂ ನೀರಿನ ಸಂಗ್ರಹವಿಲ್ಲ. ಹೀಗಾಗಿ ನಾರಾಯಣಪುರ ಜಲಾಶಯಕ್ಕೆ ನೀರು ಹರಿಸುವುದು ಇನ್ನೂ ವಿಳಂಬವಾಗಲಿದೆ. ನಾರಾಯಣಪುರ ಜಲಾಶಯದಲ್ಲಿ ಅಗತ್ಯ ನೀರು ಸಂಗ್ರಹವಿದ್ದರೆ ಮಾತ್ರ ಕಾಲುವೆಗೆ ನೀರು ಹರಿಸುವುದು ಸಾಧ್ಯ.<br /> ಈ ಹಿನ್ನೆಲೆಯಲ್ಲಿ ಕಾಲುವೆಯಿಂದ ನೀರಾವರಿ ಸೌಲಭ್ಯ ಪಡೆದ ರೈತರಿಗೆ ದಿಕ್ಕು ತೋಚದಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಹೇಳಿದ್ದಾರೆ.<br /> <br /> ಕೃಷ್ಣಾ ನದಿಯ ಮೇಲ್ಭಾಗದಲ್ಲಿ ಸಾಕಷ್ಟು ಮಳೆ ಆಗಿಲ್ಲ. ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದ ಭಾಗದಲ್ಲೂ ಮಳೆಯ ಪ್ರಮಾಣ ಅಷ್ಟಕ್ಕಷ್ಟೇ. ಇದರಿಂದಾಗಿ ಜಲಾಶಯಗಳೂ ಇನ್ನೂ ಖಾಲಿಯಾಗಿಯೇ ಇವೆ. ಇದು ರೈತರ ಜೀವನದ ಮೇಲೆ ನೇರ ಪರಿಣಾಮ ಬೀರಲಿದೆ ಎಂದರು.<br /> <br /> ಮುಂಗಾರು ಹಂಗಾಮಿನ ಭತ್ತ ಬೆಳೆಯುವುದು ಇನ್ನೂ ಅನಿಶ್ಚಿತವಾಗಿದೆ. ಮುಂಗಾರು ಬಿತ್ತನೆ ವಿಳಂಬವಾದರೆ, ಹಿಂಗಾರು ಬಿತ್ತನೆಯೂ ವಿಳಂಬವಾಗಲಿದೆ. ಹಂಗಾಮು ಮುಗಿದು ಹೋಗುವುದರಿಂದ ಇಳುವರಿ ಕಡಿಮೆ ಆಗಲಿದೆ.<br /> <br /> ಕಳೆದ ಎರಡು ವರ್ಷಗಳಿಂದ ಒಂದಿಲ್ಲೊಂದು ಕಾರಣದಿಂದ ಉತ್ತಮ ಬೆಳೆ ಪಡೆಯದ ರೈತರು, ಸಾಲದ ಹೊರೆಯಲ್ಲಿ ಮುಳುಗಿದ್ದಾರೆ.<br /> ಈ ಬಾರಿಯೂ ನೀರು ಸಿಗದೇ ಇದ್ದರೆ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.<br /> <br /> ಕೂಡಲೇ ರಾಜ್ಯ ಸರ್ಕಾರ ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿಸುವ ಮೂಲಕ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು. ಭತ್ತದ ನಾಟಿ ಮಾಡಿಕೊಳ್ಳಲು ಅನುಕೂಲ ಆಗುವಂತೆ ರೈತರಿಗೆ ಅಗತ್ಯ ಮಾಹಿತಿ ನೀಡಬೇಕು.<br /> <br /> ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಕರೆದು, ಇದೆಲ್ಲವನ್ನೂ ಚರ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಜಿಲ್ಲೆಯಲ್ಲಿ ಎರಡು ನದಿಗಳು ಹರಿದಿರುವುದರಿಂದ ಬಹುತೇಕ ಜಮೀನು ನೀರಾವರಿ ಸೌಲಭ್ಯ ಪಡೆದಿದ್ದು, ರೈತರು ಭತ್ತ ಬೆಳೆಯುತ್ತಿದ್ದಾರೆ. ವರ್ಷದಲ್ಲಿ ಎರಡು ಭತ್ತದ ಬೆಳೆಗಳನ್ನು ಬೆಳೆಯುವ ಜಿಲ್ಲೆಯ ರೈತರಿಗೆ, ಈ ಬಾರಿಯೂ ಕಾಲುವೆಗೆ ನೀರು ಹರಿಸುವ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಇದರಿಂದ ರೈತರು ಆತಂಕ ಎದುರಿಸುವಂತಾಗಿದೆ.<br /> <br /> ನಗರದ ಸುತ್ತಲಿನ ಭೀಮಾ ನದಿ ತೀರದ ರೈತರು ಭತ್ತದ ನಾಟಿಯನ್ನು ಭರದಿಂದ ಆರಂಭಿಸಿದ್ದಾರೆ. ಭೀಮಾ ನದಿ ತೀರದ ಆಂಧ್ರ ವಲಸಿಗ ರೈತರು ಮತ್ತು ಸ್ಥಳೀಯ ರೈತರು ಭತ್ತದ ನಾಟಿ ಆರಂಭಿಸಿದ್ದು, ಸತತ 3 ದಿನಗಳಿಂದ ಧಾರಾಕಾರ ಸುರಿದ ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.<br /> <br /> ಆದರೆ ನಾರಾಯಣಪುರ ಎಡದಂಡೆ ಕಾಲುವೆಯಿಂದ ನೀರಾವರಿ ಸೌಲಭ್ಯ ಪಡೆದಿರುವ ರೈತರು ಮಾತ್ರ ಇನ್ನೂ ಭತ್ತದ ನಾಟಿ ಮಾಡುವುದೂ ಸಾಧ್ಯವಾಗಿಲ್ಲ. ಮೊದಲೇ ಸುರಪುರ ತಾಲ್ಲೂಕಿನಲ್ಲಿ ಕಡಿಮೆ ಪ್ರಮಾಣದ ಮಳೆ ಸುರಿದಿದ್ದು, ಈ ಮಧ್ಯೆ ಕಾಲುವೆಗೆ ನೀರು ಹರಿಸುವ ದಿನವೂ ನಿಗದಿ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಯಾವ ನಂಬಿಕೆಯ ಮೇಲೆ ಭತ್ತದ ನಾಟಿ ಮಾಡಬೇಕು ಎನ್ನುವ ಪ್ರಶ್ನೆ ರೈತರದ್ದು.<br /> <br /> ಆಲಮಟ್ಟಿ ಜಲಾಶಯದಲ್ಲೂ ನೀರಿನ ಸಂಗ್ರಹವಿಲ್ಲ. ಹೀಗಾಗಿ ನಾರಾಯಣಪುರ ಜಲಾಶಯಕ್ಕೆ ನೀರು ಹರಿಸುವುದು ಇನ್ನೂ ವಿಳಂಬವಾಗಲಿದೆ. ನಾರಾಯಣಪುರ ಜಲಾಶಯದಲ್ಲಿ ಅಗತ್ಯ ನೀರು ಸಂಗ್ರಹವಿದ್ದರೆ ಮಾತ್ರ ಕಾಲುವೆಗೆ ನೀರು ಹರಿಸುವುದು ಸಾಧ್ಯ.<br /> ಈ ಹಿನ್ನೆಲೆಯಲ್ಲಿ ಕಾಲುವೆಯಿಂದ ನೀರಾವರಿ ಸೌಲಭ್ಯ ಪಡೆದ ರೈತರಿಗೆ ದಿಕ್ಕು ತೋಚದಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಹೇಳಿದ್ದಾರೆ.<br /> <br /> ಕೃಷ್ಣಾ ನದಿಯ ಮೇಲ್ಭಾಗದಲ್ಲಿ ಸಾಕಷ್ಟು ಮಳೆ ಆಗಿಲ್ಲ. ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದ ಭಾಗದಲ್ಲೂ ಮಳೆಯ ಪ್ರಮಾಣ ಅಷ್ಟಕ್ಕಷ್ಟೇ. ಇದರಿಂದಾಗಿ ಜಲಾಶಯಗಳೂ ಇನ್ನೂ ಖಾಲಿಯಾಗಿಯೇ ಇವೆ. ಇದು ರೈತರ ಜೀವನದ ಮೇಲೆ ನೇರ ಪರಿಣಾಮ ಬೀರಲಿದೆ ಎಂದರು.<br /> <br /> ಮುಂಗಾರು ಹಂಗಾಮಿನ ಭತ್ತ ಬೆಳೆಯುವುದು ಇನ್ನೂ ಅನಿಶ್ಚಿತವಾಗಿದೆ. ಮುಂಗಾರು ಬಿತ್ತನೆ ವಿಳಂಬವಾದರೆ, ಹಿಂಗಾರು ಬಿತ್ತನೆಯೂ ವಿಳಂಬವಾಗಲಿದೆ. ಹಂಗಾಮು ಮುಗಿದು ಹೋಗುವುದರಿಂದ ಇಳುವರಿ ಕಡಿಮೆ ಆಗಲಿದೆ.<br /> <br /> ಕಳೆದ ಎರಡು ವರ್ಷಗಳಿಂದ ಒಂದಿಲ್ಲೊಂದು ಕಾರಣದಿಂದ ಉತ್ತಮ ಬೆಳೆ ಪಡೆಯದ ರೈತರು, ಸಾಲದ ಹೊರೆಯಲ್ಲಿ ಮುಳುಗಿದ್ದಾರೆ.<br /> ಈ ಬಾರಿಯೂ ನೀರು ಸಿಗದೇ ಇದ್ದರೆ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.<br /> <br /> ಕೂಡಲೇ ರಾಜ್ಯ ಸರ್ಕಾರ ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿಸುವ ಮೂಲಕ ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು. ಭತ್ತದ ನಾಟಿ ಮಾಡಿಕೊಳ್ಳಲು ಅನುಕೂಲ ಆಗುವಂತೆ ರೈತರಿಗೆ ಅಗತ್ಯ ಮಾಹಿತಿ ನೀಡಬೇಕು.<br /> <br /> ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಕರೆದು, ಇದೆಲ್ಲವನ್ನೂ ಚರ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>