<p><strong>ಮಂಗಾನ್/ಸಿಕ್ಕಿಂ (ಪಿಟಿಐ):</strong> ಭೂಕಂಪದಿಂದ ನೆಲಸಮವಾದ ಅವಶೇಷಗಳ ಅಡಿಯಿಂದ ಬುಧವಾರ ಮತ್ತೆ 20 ಶವಗಳನ್ನು ಹೊರತೆಗೆಯಲಾಗಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 116ಕ್ಕೆ ಏರಿದೆ. <br /> <br /> ಸಿಕ್ಕಿಂ ರಾಜ್ಯವೊಂದರಲ್ಲಿಯೇ ಮೃತರ ಸಂಖ್ಯೆ 53ರಿಂದ 73ಕ್ಕೆಏರಿಕೆಯಾಗಿದೆ. 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. <br /> <br /> ಪರಿಹಾರ ಕಾರ್ಯಾಚರಣೆಗೆ ಪ್ರತಿಕೂಲ ಹವಾಮಾನ ಅಡ್ಡಿಯಾಗಿದ್ದು ತೀವ್ರ ಹಾನಿಗೊಳಗಾಗಿರುವ ಇನ್ನೂ 15 ಗ್ರಾಮಗಳನ್ನು ತಲುಪಲು ಸೇನಾಪಡೆಗೆ ಸಾಧ್ಯವಾಗಿಲ್ಲ. <br /> <br /> ಆ ಗ್ರಾಮಗಳಲ್ಲಿ ಶೋಧ ಕಾರ್ಯ ನಡೆದರೆ ಮೃತರಾದವರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭೀತಿಪಡಲಾಗಿದೆ.<br /> <br /> ಸೇನಾಪಡೆಯ ಸಿಬ್ಬಂದಿ ಇನ್ನೂ ರಸ್ತೆಯಲ್ಲಿ ಹರಡಿಕೊಂಡಿರುವ ಮಣ್ಣು ಮತ್ತು ಕಲ್ಲುಗಳ ತೆರವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಸದ್ಯ 40 ಪ್ರಮುಖ ರಸ್ತೆಗಳನ್ನುತೆರವುಗೊಳಿಸಲಾಗಿದೆ. <br /> <br /> ಈ ನಡುವೆ ರಾಜ್ಯದ ಉತ್ತರ ಭಾಗದಲ್ಲಿ ಸುಮಾರು 400 ವಿದೇಶಿ ಪ್ರವಾಸಿಗರು ಸಿಲುಕಿಕೊಂಡಿದ್ದು ಅವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಾನ್/ಸಿಕ್ಕಿಂ (ಪಿಟಿಐ):</strong> ಭೂಕಂಪದಿಂದ ನೆಲಸಮವಾದ ಅವಶೇಷಗಳ ಅಡಿಯಿಂದ ಬುಧವಾರ ಮತ್ತೆ 20 ಶವಗಳನ್ನು ಹೊರತೆಗೆಯಲಾಗಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 116ಕ್ಕೆ ಏರಿದೆ. <br /> <br /> ಸಿಕ್ಕಿಂ ರಾಜ್ಯವೊಂದರಲ್ಲಿಯೇ ಮೃತರ ಸಂಖ್ಯೆ 53ರಿಂದ 73ಕ್ಕೆಏರಿಕೆಯಾಗಿದೆ. 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. <br /> <br /> ಪರಿಹಾರ ಕಾರ್ಯಾಚರಣೆಗೆ ಪ್ರತಿಕೂಲ ಹವಾಮಾನ ಅಡ್ಡಿಯಾಗಿದ್ದು ತೀವ್ರ ಹಾನಿಗೊಳಗಾಗಿರುವ ಇನ್ನೂ 15 ಗ್ರಾಮಗಳನ್ನು ತಲುಪಲು ಸೇನಾಪಡೆಗೆ ಸಾಧ್ಯವಾಗಿಲ್ಲ. <br /> <br /> ಆ ಗ್ರಾಮಗಳಲ್ಲಿ ಶೋಧ ಕಾರ್ಯ ನಡೆದರೆ ಮೃತರಾದವರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭೀತಿಪಡಲಾಗಿದೆ.<br /> <br /> ಸೇನಾಪಡೆಯ ಸಿಬ್ಬಂದಿ ಇನ್ನೂ ರಸ್ತೆಯಲ್ಲಿ ಹರಡಿಕೊಂಡಿರುವ ಮಣ್ಣು ಮತ್ತು ಕಲ್ಲುಗಳ ತೆರವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಸದ್ಯ 40 ಪ್ರಮುಖ ರಸ್ತೆಗಳನ್ನುತೆರವುಗೊಳಿಸಲಾಗಿದೆ. <br /> <br /> ಈ ನಡುವೆ ರಾಜ್ಯದ ಉತ್ತರ ಭಾಗದಲ್ಲಿ ಸುಮಾರು 400 ವಿದೇಶಿ ಪ್ರವಾಸಿಗರು ಸಿಲುಕಿಕೊಂಡಿದ್ದು ಅವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>