<p><strong>ಚಿತ್ತಾಪುರ: </strong>`ಸ್ಥಳೀಯ ತಹಸೀಲ್ದಾರ್ ಕಚೇರಿಯಲ್ಲಿರುವ ಭೂಮಾಪನಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಸರಿಯಾಗಿ ಕೆಲಸ ಮಾಡಿಕೊಡದೆ ರೈತರನ್ನು ಸತಾಯಿಸುತ್ತಿದ್ದಾರೆ~ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಜಿಲ್ಲಾ ಕೋಲಿ ಸಮಾಜ ಉಪಾಧ್ಯಕ್ಷ ಶರಣಪ್ಪ ನಾಟೀಕಾರ್ ಅವರು ಸೇಡಂ ಸಹಾಯಕ ಆಯುಕ್ತರಿಗೆ ಬುಧವಾರ ದೂರು ಸಲ್ಲಿಸಿದ್ದಾರೆ.<br /> <br /> ತಹಸೀಲ್ದಾರ್ ಕಚೇರಿಗೆ ಬಂದಿದ್ದ ಸಹಾಯಕ ಆಯುಕ್ತರಿಗೆ ಭೇಟಿ ಮಾಡಿ ದೂರು ಸಲ್ಲಿಸಿರುವ ಅವರು, `ರೈತರು ತಮ್ಮ ಹೊಲದ ನಕಾಶೆ, ಆಕಾರ್ ಬಂದ್, ಟಿಪ್ಪಣಿ ತೆಗೆದುಕೊಳ್ಳಲು ಬಂದರೆ ಕಡತಗಳು ಸಿಗುತ್ತಿಲ್ಲ ಎಂದು 2-3 ತಿಂಗಳು ಕಾಲ ಸತಾಯಿಸಿದರೂ ಕೆಲಸ ಮಾಡಿಕೊಡುತ್ತಿಲ್ಲ~ ಎಂದು ಅವರು ಆರೋಪಿಸಿದ್ದಾರೆ.<br /> <br /> `ಕಂಪ್ಯೂಟರ್ ಬಂದ್ ಆಗಿದೆ ಎನ್ನುವ ನೆಪ ಹೇಳುವ ಸಿಬ್ಬಂದಿಯನ್ನು ಏನಾದರೂ ಕೇಳಿದರೆ ಕೇಳಿದವರನ್ನೆ ಹೆದರಿಸುವ, ಜೊತೆಗೆ, ನಾವು ಕೆಲಸ ಮಾಡದಿದ್ದರೆ ನಮ್ಮನ್ನು ವರ್ಗಾವಣೆ ಮಾಡಿಸಿರಿ ಎಂದು ದಬಾಯಿಸುತ್ತಾರೆ~ ಎಂದು ಆಯುಕ್ತರಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.<br /> <br /> `ಇಲಾಖೆಯಲ್ಲಿ ಮೇಲ್ವಿಚಾರಕರ ಹುದ್ದೆ ಖಾಲಿಯಿದೆ. ಇದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಿಸಿದೆ. ಭೂಮಾಪನಾ ಇಲಾಖೆಯಲ್ಲಿ ಆಗುತ್ತಿರುವ ತೊಂದರೆ ನಿವಾರಿಸಬೇಕು, ಕೆಲಸ ಮಾಡದ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳದ ತಹಸೀಲ್ದಾರ್ ಮತ್ತು ಇಲಾಖೆಯ ತಪ್ಪಿತಸ್ಥ ಸಿಬ್ಬಂದಿ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಬೇಕು.<br /> <br /> ಇಲ್ಲದಿದ್ದರೆ ತಹಸೀಲ್ದಾರ್ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತೇವೆ~ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಜಿಲ್ಲಾ ಕೋಲಿ ಸಮಾಜ ಉಪಾಧ್ಯಕ್ಷ ಶರಣಪ್ಪ ನಾಟೀಕಾರ್ ಅವರು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ: </strong>`ಸ್ಥಳೀಯ ತಹಸೀಲ್ದಾರ್ ಕಚೇರಿಯಲ್ಲಿರುವ ಭೂಮಾಪನಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಸರಿಯಾಗಿ ಕೆಲಸ ಮಾಡಿಕೊಡದೆ ರೈತರನ್ನು ಸತಾಯಿಸುತ್ತಿದ್ದಾರೆ~ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಜಿಲ್ಲಾ ಕೋಲಿ ಸಮಾಜ ಉಪಾಧ್ಯಕ್ಷ ಶರಣಪ್ಪ ನಾಟೀಕಾರ್ ಅವರು ಸೇಡಂ ಸಹಾಯಕ ಆಯುಕ್ತರಿಗೆ ಬುಧವಾರ ದೂರು ಸಲ್ಲಿಸಿದ್ದಾರೆ.<br /> <br /> ತಹಸೀಲ್ದಾರ್ ಕಚೇರಿಗೆ ಬಂದಿದ್ದ ಸಹಾಯಕ ಆಯುಕ್ತರಿಗೆ ಭೇಟಿ ಮಾಡಿ ದೂರು ಸಲ್ಲಿಸಿರುವ ಅವರು, `ರೈತರು ತಮ್ಮ ಹೊಲದ ನಕಾಶೆ, ಆಕಾರ್ ಬಂದ್, ಟಿಪ್ಪಣಿ ತೆಗೆದುಕೊಳ್ಳಲು ಬಂದರೆ ಕಡತಗಳು ಸಿಗುತ್ತಿಲ್ಲ ಎಂದು 2-3 ತಿಂಗಳು ಕಾಲ ಸತಾಯಿಸಿದರೂ ಕೆಲಸ ಮಾಡಿಕೊಡುತ್ತಿಲ್ಲ~ ಎಂದು ಅವರು ಆರೋಪಿಸಿದ್ದಾರೆ.<br /> <br /> `ಕಂಪ್ಯೂಟರ್ ಬಂದ್ ಆಗಿದೆ ಎನ್ನುವ ನೆಪ ಹೇಳುವ ಸಿಬ್ಬಂದಿಯನ್ನು ಏನಾದರೂ ಕೇಳಿದರೆ ಕೇಳಿದವರನ್ನೆ ಹೆದರಿಸುವ, ಜೊತೆಗೆ, ನಾವು ಕೆಲಸ ಮಾಡದಿದ್ದರೆ ನಮ್ಮನ್ನು ವರ್ಗಾವಣೆ ಮಾಡಿಸಿರಿ ಎಂದು ದಬಾಯಿಸುತ್ತಾರೆ~ ಎಂದು ಆಯುಕ್ತರಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.<br /> <br /> `ಇಲಾಖೆಯಲ್ಲಿ ಮೇಲ್ವಿಚಾರಕರ ಹುದ್ದೆ ಖಾಲಿಯಿದೆ. ಇದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಿಸಿದೆ. ಭೂಮಾಪನಾ ಇಲಾಖೆಯಲ್ಲಿ ಆಗುತ್ತಿರುವ ತೊಂದರೆ ನಿವಾರಿಸಬೇಕು, ಕೆಲಸ ಮಾಡದ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳದ ತಹಸೀಲ್ದಾರ್ ಮತ್ತು ಇಲಾಖೆಯ ತಪ್ಪಿತಸ್ಥ ಸಿಬ್ಬಂದಿ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಬೇಕು.<br /> <br /> ಇಲ್ಲದಿದ್ದರೆ ತಹಸೀಲ್ದಾರ್ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತೇವೆ~ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಜಿಲ್ಲಾ ಕೋಲಿ ಸಮಾಜ ಉಪಾಧ್ಯಕ್ಷ ಶರಣಪ್ಪ ನಾಟೀಕಾರ್ ಅವರು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>