<p><strong>ಯಳಂದೂರು:</strong> ರೈತರು ತಾವು ಬೆಳೆಯುವ ಬೆಳೆಗಳಿಗೆ ಅಗತ್ಯವಿದ್ದಷ್ಟು ಮಾತ್ರ ಪೋಷಕಾಂಶಗಳನ್ನು ಒದಗಿಸುವುದರಿಂದ ಉತ್ತಮ ಇಳುವರಿ ಪಡೆಯಬಹುದು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಗಂಗಾಮಣಿ ರೇವಣ್ಣ ತಿಳಿಸಿದರು.<br /> <br /> ಪಟ್ಟಣದಲ್ಲಿ ಸೋಮವಾರ ಸ್ಥಳೀಯ ಕೃಷಿ ಇಲಾಖೆಯ ಭೂ ಚೇತನ ಯೋಜನೆಯಡಿಯಲ್ಲಿ ಹಮ್ಮಿಕೊಂಡ ಲಘು ಪೋಷಕಾಂಶಗಳ ಬಗ್ಗೆ ಅರಿವು ಮೂಡಿಸುವ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು.<br /> <br /> ರೈತರು ಅಧಿಕ ಇಳುವರಿ ಪಡೆಯುವ ಉದ್ದೇಶದಿಂದ ಭೂಮಿಗೆ ಹೆಚ್ಚಿನ ರಸಗೊಬ್ಬರಗಳನ್ನು ಬಳಕೆ ಮಾಡುತ್ತಾರೆ. ಇದರಿಂದ ಭೂಮಿಯ ಫಲವತ್ತತೆ ಕಡಿಮೆಯಾಗಿ ಇಳುವರಿಯೂ ಕಡಿಮೆಯಾಗುವ ಜೊತೆಗೆ ಆರ್ಥಿಕ ಸಂಕಷ್ಟಕ್ಕೂ ಗುರಿಯಾಗುವ ಸಾಧ್ಯತೆಗಳು ಹೆಚ್ಚು.<br /> <br /> ರೈತರಿಗೆ ಈ ಬಗ್ಗೆ ಮಾಹಿತಿ ನೀಡಲು ಕೃಷಿ ಇಲಾಖೆಯು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.<br /> <br /> ಸಹಾಯಕ ಕೃಷಿ ನಿರ್ದೇಶಕಿ ಸುಂದ್ರಮ್ಮ ಮಾತನಾಡಿ, ರೈತರಲ್ಲಿ ಲಘು ಪೋಷಕಾಂಶಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜೂ. 3 ರಿಂದ 7ರ ವರೆಗೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚಾರಿ ವಾಹನಗಳಲ್ಲಿ ಸಂಚರಿಸಿ ಶೇ 50ರ ರಿಯಾಯ್ತಿ ದರದಲ್ಲಿ ಜಿಪ್ಸಂ, ಜಿಂಕ್ ಸಲ್ಫೇಟ್ ಹಾಗೂ ಬೋರಾಕ್ಸ್ಗಳನ್ನು ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಉಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.<br /> <br /> ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ರಾಮಚಂದ್ರ, ಸದಸ್ಯರಾದ ಮಹೇಶ್ಕುಮಾರ್, ಕೆ.ಪಿ. ಶಿವಣ್ಣ, ಸಹಾಯಕ ಕೃಷಿ ಅಧಿಕಾರಿ ಎ.ವೆಂಕಟರಂಗಶೆಟ್ಟಿ, ವಿರೂಪಾಕ್ಷ, ಶಿವಶಂಕರ್, ಕೃಷ್ಣಮೂರ್ತಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು:</strong> ರೈತರು ತಾವು ಬೆಳೆಯುವ ಬೆಳೆಗಳಿಗೆ ಅಗತ್ಯವಿದ್ದಷ್ಟು ಮಾತ್ರ ಪೋಷಕಾಂಶಗಳನ್ನು ಒದಗಿಸುವುದರಿಂದ ಉತ್ತಮ ಇಳುವರಿ ಪಡೆಯಬಹುದು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಗಂಗಾಮಣಿ ರೇವಣ್ಣ ತಿಳಿಸಿದರು.<br /> <br /> ಪಟ್ಟಣದಲ್ಲಿ ಸೋಮವಾರ ಸ್ಥಳೀಯ ಕೃಷಿ ಇಲಾಖೆಯ ಭೂ ಚೇತನ ಯೋಜನೆಯಡಿಯಲ್ಲಿ ಹಮ್ಮಿಕೊಂಡ ಲಘು ಪೋಷಕಾಂಶಗಳ ಬಗ್ಗೆ ಅರಿವು ಮೂಡಿಸುವ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು.<br /> <br /> ರೈತರು ಅಧಿಕ ಇಳುವರಿ ಪಡೆಯುವ ಉದ್ದೇಶದಿಂದ ಭೂಮಿಗೆ ಹೆಚ್ಚಿನ ರಸಗೊಬ್ಬರಗಳನ್ನು ಬಳಕೆ ಮಾಡುತ್ತಾರೆ. ಇದರಿಂದ ಭೂಮಿಯ ಫಲವತ್ತತೆ ಕಡಿಮೆಯಾಗಿ ಇಳುವರಿಯೂ ಕಡಿಮೆಯಾಗುವ ಜೊತೆಗೆ ಆರ್ಥಿಕ ಸಂಕಷ್ಟಕ್ಕೂ ಗುರಿಯಾಗುವ ಸಾಧ್ಯತೆಗಳು ಹೆಚ್ಚು.<br /> <br /> ರೈತರಿಗೆ ಈ ಬಗ್ಗೆ ಮಾಹಿತಿ ನೀಡಲು ಕೃಷಿ ಇಲಾಖೆಯು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.<br /> <br /> ಸಹಾಯಕ ಕೃಷಿ ನಿರ್ದೇಶಕಿ ಸುಂದ್ರಮ್ಮ ಮಾತನಾಡಿ, ರೈತರಲ್ಲಿ ಲಘು ಪೋಷಕಾಂಶಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜೂ. 3 ರಿಂದ 7ರ ವರೆಗೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚಾರಿ ವಾಹನಗಳಲ್ಲಿ ಸಂಚರಿಸಿ ಶೇ 50ರ ರಿಯಾಯ್ತಿ ದರದಲ್ಲಿ ಜಿಪ್ಸಂ, ಜಿಂಕ್ ಸಲ್ಫೇಟ್ ಹಾಗೂ ಬೋರಾಕ್ಸ್ಗಳನ್ನು ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಉಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.<br /> <br /> ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ರಾಮಚಂದ್ರ, ಸದಸ್ಯರಾದ ಮಹೇಶ್ಕುಮಾರ್, ಕೆ.ಪಿ. ಶಿವಣ್ಣ, ಸಹಾಯಕ ಕೃಷಿ ಅಧಿಕಾರಿ ಎ.ವೆಂಕಟರಂಗಶೆಟ್ಟಿ, ವಿರೂಪಾಕ್ಷ, ಶಿವಶಂಕರ್, ಕೃಷ್ಣಮೂರ್ತಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>