<p><strong>ಬೆಳಗಾವಿ: </strong>ಅರಣ್ಯ ಇಲಾಖೆ ಸ್ವಾಮ್ಯದಲ್ಲಿದ್ದ ಭೂಮಿಯನ್ನು ಕಾನೂನು ಬಾಹಿರವಾಗಿ ನಾಲ್ಕು ಕುಟುಂಬಗಳಿಗೆ ಮಂಜೂರು ಮಾಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೈಲಹೊಂಗಲದ ಉಪವಿಭಾಗಾಧಿಕಾರಿ (ಎಸಿ) ವಿ.ಬಿ. ದಾಮಣ್ಣನವರ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. <br /> <br /> ಫೆ. 29ರಂದು ನಿವೃತ್ತಿಯಾಗಲಿದ್ದ ದಾಮಣ್ಣನವರ ಮೇಲೆ ಕಾನೂನು ಬಾಹಿರವಾಗಿ ಸರ್ಕಾರಿ ಭೂಮಿ ಮಂಜೂರು ಮಾಡಿದ ಆರೋಪ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶನಿವಾರದಂದು (ಫೆ. 25) ಅಮಾನತುಗೊಳಿಸಿ ಆದೇಶ ಹೊರಡಿಸಿದೆ ಎಂದು ಮೂಲಗಳು `ಪ್ರಜಾವಾಣಿ~ಗೆ ತಿಳಿಸಿದೆ. <br /> <br /> ಬೈಲಹೊಂಗಲ ತಾಲ್ಲೂಕಿನ ಕಿತ್ತೂರು ಸಮೀಪದ ಕುಲವಳ್ಳಿ ಗುಡ್ಡದಲ್ಲಿನ ಭೂಮಿಯನ್ನು ಬ್ರಿಟಿಷರು ನಾಲ್ಕು ಕುಟುಂಬಗಳಿಗೆ ಬಹುಮಾನದ ರೂಪದಲ್ಲಿ ನೀಡಿತ್ತು. ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಯಾದ ಬಳಿಕ ಈ ಭೂಮಿಯನ್ನು ಅರಣ್ಯ ಇಲಾಖೆ ತನ್ನ ಸ್ವಾಮ್ಯಕ್ಕೆ ಪಡೆದುಕೊಂಡಿತ್ತು. <br /> <br /> ಈ ಕ್ರಮದ ವಿರುದ್ಧ ನಾಲ್ಕು ಕುಟುಂಬದವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ಇದನ್ನು ಟ್ರಿಬ್ಯುನಲ್ ಕೋರ್ಟ್ನಲ್ಲೇ ಇತ್ಯರ್ಥಗೊಳಿಸಿಕೊಳ್ಳುವಂತೆ ಆದೇಶಿಸಿತ್ತು ಎನ್ನಲಾಗಿದೆ. <br /> <br /> ನಾಲ್ಕು ಕುಟುಂಬಗಳಿಗೆ ಭೂಮಿಯನ್ನು ಮಂಜೂರು ಮಾಡುವ ಪ್ರಸ್ತಾವವನ್ನು 1991 ಹಾಗೂ 2000ರಲ್ಲಿ ಅಂದಿನ ಉಪವಿಭಾಗಾಧಿಕಾರಿಗಳು ತಿರಸ್ಕರಿಸಿದ್ದರು. ಆದರೆ, ನಿವೃತ್ತಿಯ ಅಂಚಿನಲ್ಲಿದ್ದ ಪ್ರಸ್ತುತ ಉಪವಿಭಾಗಾಧಿಕಾರಿ ವಿ.ಬಿ. ದಾಮಣ್ಣನವರ ಅವರು, ಈ ಭೂಮಿಯನ್ನು ಆ ಕುಟುಂಬಗಳಿಗೆ ಕಾನೂನು ಬಾಹಿರವಾಗಿ ಮಂಜೂರು ಮಾಡಿದ್ದರು.<br /> <br /> ಈ ಆರೋಪ ಬಂದ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ಕೈಗೊಂಡ ರಾಜ್ಯ ಸರ್ಕಾರವು ಉಪವಿಭಾಗಾಧಿಕಾರಿಗಳನ್ನು ಅಮಾನತುಗೊಳಿಸಿ ಶನಿವಾರ ಆದೇಶ ಹೊರಡಿಸಿದೆ ಎಂದು ವಿಶ್ವಾಸಾರ್ಹ ಮೂಲಗಳು `ಪ್ರಜಾವಾಣಿ~ಗೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಅರಣ್ಯ ಇಲಾಖೆ ಸ್ವಾಮ್ಯದಲ್ಲಿದ್ದ ಭೂಮಿಯನ್ನು ಕಾನೂನು ಬಾಹಿರವಾಗಿ ನಾಲ್ಕು ಕುಟುಂಬಗಳಿಗೆ ಮಂಜೂರು ಮಾಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೈಲಹೊಂಗಲದ ಉಪವಿಭಾಗಾಧಿಕಾರಿ (ಎಸಿ) ವಿ.ಬಿ. ದಾಮಣ್ಣನವರ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. <br /> <br /> ಫೆ. 29ರಂದು ನಿವೃತ್ತಿಯಾಗಲಿದ್ದ ದಾಮಣ್ಣನವರ ಮೇಲೆ ಕಾನೂನು ಬಾಹಿರವಾಗಿ ಸರ್ಕಾರಿ ಭೂಮಿ ಮಂಜೂರು ಮಾಡಿದ ಆರೋಪ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶನಿವಾರದಂದು (ಫೆ. 25) ಅಮಾನತುಗೊಳಿಸಿ ಆದೇಶ ಹೊರಡಿಸಿದೆ ಎಂದು ಮೂಲಗಳು `ಪ್ರಜಾವಾಣಿ~ಗೆ ತಿಳಿಸಿದೆ. <br /> <br /> ಬೈಲಹೊಂಗಲ ತಾಲ್ಲೂಕಿನ ಕಿತ್ತೂರು ಸಮೀಪದ ಕುಲವಳ್ಳಿ ಗುಡ್ಡದಲ್ಲಿನ ಭೂಮಿಯನ್ನು ಬ್ರಿಟಿಷರು ನಾಲ್ಕು ಕುಟುಂಬಗಳಿಗೆ ಬಹುಮಾನದ ರೂಪದಲ್ಲಿ ನೀಡಿತ್ತು. ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಯಾದ ಬಳಿಕ ಈ ಭೂಮಿಯನ್ನು ಅರಣ್ಯ ಇಲಾಖೆ ತನ್ನ ಸ್ವಾಮ್ಯಕ್ಕೆ ಪಡೆದುಕೊಂಡಿತ್ತು. <br /> <br /> ಈ ಕ್ರಮದ ವಿರುದ್ಧ ನಾಲ್ಕು ಕುಟುಂಬದವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ಇದನ್ನು ಟ್ರಿಬ್ಯುನಲ್ ಕೋರ್ಟ್ನಲ್ಲೇ ಇತ್ಯರ್ಥಗೊಳಿಸಿಕೊಳ್ಳುವಂತೆ ಆದೇಶಿಸಿತ್ತು ಎನ್ನಲಾಗಿದೆ. <br /> <br /> ನಾಲ್ಕು ಕುಟುಂಬಗಳಿಗೆ ಭೂಮಿಯನ್ನು ಮಂಜೂರು ಮಾಡುವ ಪ್ರಸ್ತಾವವನ್ನು 1991 ಹಾಗೂ 2000ರಲ್ಲಿ ಅಂದಿನ ಉಪವಿಭಾಗಾಧಿಕಾರಿಗಳು ತಿರಸ್ಕರಿಸಿದ್ದರು. ಆದರೆ, ನಿವೃತ್ತಿಯ ಅಂಚಿನಲ್ಲಿದ್ದ ಪ್ರಸ್ತುತ ಉಪವಿಭಾಗಾಧಿಕಾರಿ ವಿ.ಬಿ. ದಾಮಣ್ಣನವರ ಅವರು, ಈ ಭೂಮಿಯನ್ನು ಆ ಕುಟುಂಬಗಳಿಗೆ ಕಾನೂನು ಬಾಹಿರವಾಗಿ ಮಂಜೂರು ಮಾಡಿದ್ದರು.<br /> <br /> ಈ ಆರೋಪ ಬಂದ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ಕೈಗೊಂಡ ರಾಜ್ಯ ಸರ್ಕಾರವು ಉಪವಿಭಾಗಾಧಿಕಾರಿಗಳನ್ನು ಅಮಾನತುಗೊಳಿಸಿ ಶನಿವಾರ ಆದೇಶ ಹೊರಡಿಸಿದೆ ಎಂದು ವಿಶ್ವಾಸಾರ್ಹ ಮೂಲಗಳು `ಪ್ರಜಾವಾಣಿ~ಗೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>