<p><strong>ಬೆಂಗಳೂರು: </strong>ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಭೂಸ್ವಾಧೀನ ಮಸೂದೆಯ ಸಾಧಕ- ಬಾಧಕಗಳ ಬಗ್ಗೆ ದೇಶವ್ಯಾಪಿ ಚರ್ಚೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಎಸ್. ಪುಟ್ಟಣ್ಣಯ್ಯ ಶನಿವಾರ ಇಲ್ಲಿ ಒತ್ತಾಯಿಸಿದರು.<br /> <br /> ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಗರದ ಸೆಂಟ್ರಲ್ ಕಾಲೇಜಿನ ಸೆನೆಟ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಭೂಸ್ವಾಧೀನ ಮಸೂದೆ ಕುರಿತ ಚರ್ಚಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> `ಕೇಂದ್ರ ಸರ್ಕಾರ ರೈತರ ಜಮೀನನ್ನು ವಶಪಡಿಸಿಕೊಳ್ಳುವ ಮೂಲಕ ಕೈಗಾರಿಕೋದ್ಯಮಿಗಳಿಗೆ ಮಾರಾಟ ಮಾಡುವ ಹುನ್ನಾರ ಈ ಮಸೂದೆಯಲ್ಲಿ ಅಡಗಿದೆ~ ಎಂದು ಅವರು ಆರೋಪಿಸಿದರು.<br /> <br /> `ಕೈಗಾರಿಕೋದ್ಯಮಿಗಳಿಗೆ ಈ ದೇಶದಲ್ಲಿ ರೈತರ ಭೂಮಿಯನ್ನು ನೀಡಿದ ನಂತರ ಇದುವರೆಗೆ ಎಷ್ಟು ಮಂದಿಗೆ ಉದ್ಯೋಗಾವಕಾಶ ಸಿಕ್ಕಿದೆ. ರೈತರಿಂದ ಸ್ವಾಧೀನಪಡಿಸಿಕೊಂಡಂತಹ ಭೂಮಿಯನ್ನು ರಿಯಲ್ ಎಸ್ಟೇಟ್ ವ್ಯವಹಾರದ ಮೂಲಕ ಎಷ್ಟು ಮಾರಾಟ ಮಾಡಲಾಗಿದೆ. ಈ ಬಗ್ಗೆ ಮೊದಲು ಪರಾಮರ್ಶೆ ನಡೆಯಬೇಕು. ಆನಂತರ ಮಸೂದೆ ಬಗ್ಗೆ ಚರ್ಚೆ ನಡೆಯಬೇಕು~ ಎಂದು ಅವರು ಆಗ್ರಹಿಸಿದರು.<br /> <br /> <strong>ಅಕ್ವಿಸಿಷನ್ ಬೇಡ, ರಿಕ್ವಿಸಿಷನ್ ಇರಲಿ</strong>: `ಅಕ್ವಿಸಿಷನ್ ಎಂಬ ಪದವೇ ಬ್ರಿಟೀಷರ ವಸಾಹತುಶಾಹಿಗಿಂತ ಅಪಾಯಕಾರಿ. ರೈತರ ಭೂಮಿಯನ್ನು ಭೂಸ್ವಾಧೀನಪಡಿಸಿಕೊಳ್ಳುವ ಪದವೇ ಸರಿಯಲ್ಲ. ಇದರ ಬದಲಿಗೆ ಕೋರಿಕೆ ಮೂಲಕ ರೈತರ ಭೂಮಿಯನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು~ ಎಂದು ಕೋರಿದರು.<br /> <br /> `ನಾವು ಕೈಗಾರಿಕೆ ಬೆಳವಣಿಗೆಯ ವಿರೋಧಿಗಳಲ್ಲ. ಆದರೆ, ದೇಶದಲ್ಲಿ ಎಷ್ಟು ಕೈಗಾರಿಕೆಗಳ ಸ್ಥಾಪನೆಗೆ ಎಷ್ಟು ಭೂಮಿಯ ಅಗತ್ಯವಿದೆ ಎಂಬುದರ ಬಗ್ಗೆ ಸರ್ಕಾರ ಚರ್ಚೆ ನಡೆಸಲಿ. ಅದು ಬಿಟ್ಟು ಶೇ 98ರಷ್ಟು ಇಂಗ್ಲಿಷ್ ಗೊತ್ತಿಲ್ಲದ ರೈತರನ್ನು ಮೋಸ ಮಾಡುವುದನ್ನು ಸರ್ಕಾರ ಕೈಬಿಡಬೇಕು~ ಎಂದು ಒತ್ತಾಯಿಸಿದರು.<br /> <br /> <strong>ಅ. 18ರಂದು ರ್ಯಾಲಿ:</strong> ಭೂಸ್ವಾಧೀನ ಮಸೂದೆ ವಿರೋಧಿಸಿ ಅಕ್ಟೋಬರ್ 18ರಂದು ನವದೆಹಲಿಯಲ್ಲಿ ನಡೆಯಲಿರುವ ಮೊದಲ ಪ್ರತಿಭಟನಾ ರ್ಯಾಲಿಯಲ್ಲಿ ದೇಶದ ವಿವಿಧ ಭಾಗಗಳಿಂದ ಐದು ಲಕ್ಷಕ್ಕೂ ಅಧಿಕ ರೈತರು ಭಾಗವಹಿಸಲಿದ್ದಾರೆ. <br /> <br /> ಕರ್ನಾಟಕದಿಂದ ಸಾಂಕೇತಿಕವಾಗಿ ಮೂರ್ನಾಲ್ಕು ಸಾವಿರ ರೈತರು ಭಾಗವಹಿಸಲಿದ್ದಾರೆ. ಈ ಬಗ್ಗೆ ಪೂರ್ವಭಾವಿ ಚರ್ಚೆ ನಡೆಸಲು ಸೆ. 10ರಂದು ಹುಬ್ಬಳ್ಳಿಯಲ್ಲಿ ಸಭೆ ನಡೆಸಲಾಗುವುದು. ನವದೆಹಲಿಯಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.<br /> <br /> ಪತ್ರಕರ್ತ `ಅಗ್ನಿ~ ಶ್ರೀಧರ್ ಮಾತನಾಡಿ, `ಭೂಸ್ವಾಧೀನ ಎಂಬ ಪದವನ್ನೇ ಸರ್ಕಾರ ನಿಷೇಧಿಸಬೇಕು. ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುವ ಸಂಬಂಧ ರೈತರು ಹಾಗೂ ಕೈಗಾರಿಕೋದ್ಯಮಿಗಳ ನಡುವೆ ಒಪ್ಪಂದ ನಡೆಯಬೇಕು. ಸರ್ಕಾರ ಕೇವಲ ಸಾಕ್ಷಿ ರೂಪದಲ್ಲಿ ವ್ಯವಹರಿಸಬೇಕು~ ಎಂದು ಒತ್ತಾಯಿಸಿದರು.<br /> <br /> `ಭೂಸ್ವಾಧೀನ ಮಸೂದೆ ಜಾರಿಗೆ ರೈತರ ಮಾನಸಿಕ ವಿರೋಧ ಇದೆ. ಆದರೆ, ಯಾರೂ ದನಿಯೆತ್ತುತ್ತಿಲ್ಲ. ಅಣ್ಣಾ ಹಜಾರೆ ಹೋರಾಟವನ್ನು ಕಣ್ಮುಚ್ಚಿ ಬೆಂಬಲಿಸಿದ ರೈತರು, ಭೂಸ್ವಾಧೀನ ಮಸೂದೆ ಜಾರಿ ವಿರುದ್ಧವೂ ಬೀದಿಗಿಳಿದು ಹೋರಾಟ ನಡೆಸಬೇಕಿದೆ. ಏಕೆಂದರೆ ಇದರಲ್ಲಿ ರೈತರ ಹಿತಾಸಕ್ತಿ ಅಡಗಿದೆ~ ಎಂದರು.<br /> <br /> ರೈತ ಮುಖಂಡರಾದ ಡಾ. ವೆಂಕಟರೆಡ್ಡಿ, ಡಾ. ಶಿವಸ್ವಾಮಿ, ಪತ್ರಕರ್ತ ಇಂದೂಧರ ಹೊನ್ನಾಪುರ ಸೇರಿದಂತೆ ಹಲವರು ಸಭೆಯಲ್ಲಿ ಮಾತನಾಡಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಭೂಸ್ವಾಧೀನ ಮಸೂದೆಯ ಸಾಧಕ- ಬಾಧಕಗಳ ಬಗ್ಗೆ ದೇಶವ್ಯಾಪಿ ಚರ್ಚೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಎಸ್. ಪುಟ್ಟಣ್ಣಯ್ಯ ಶನಿವಾರ ಇಲ್ಲಿ ಒತ್ತಾಯಿಸಿದರು.<br /> <br /> ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಗರದ ಸೆಂಟ್ರಲ್ ಕಾಲೇಜಿನ ಸೆನೆಟ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಭೂಸ್ವಾಧೀನ ಮಸೂದೆ ಕುರಿತ ಚರ್ಚಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> `ಕೇಂದ್ರ ಸರ್ಕಾರ ರೈತರ ಜಮೀನನ್ನು ವಶಪಡಿಸಿಕೊಳ್ಳುವ ಮೂಲಕ ಕೈಗಾರಿಕೋದ್ಯಮಿಗಳಿಗೆ ಮಾರಾಟ ಮಾಡುವ ಹುನ್ನಾರ ಈ ಮಸೂದೆಯಲ್ಲಿ ಅಡಗಿದೆ~ ಎಂದು ಅವರು ಆರೋಪಿಸಿದರು.<br /> <br /> `ಕೈಗಾರಿಕೋದ್ಯಮಿಗಳಿಗೆ ಈ ದೇಶದಲ್ಲಿ ರೈತರ ಭೂಮಿಯನ್ನು ನೀಡಿದ ನಂತರ ಇದುವರೆಗೆ ಎಷ್ಟು ಮಂದಿಗೆ ಉದ್ಯೋಗಾವಕಾಶ ಸಿಕ್ಕಿದೆ. ರೈತರಿಂದ ಸ್ವಾಧೀನಪಡಿಸಿಕೊಂಡಂತಹ ಭೂಮಿಯನ್ನು ರಿಯಲ್ ಎಸ್ಟೇಟ್ ವ್ಯವಹಾರದ ಮೂಲಕ ಎಷ್ಟು ಮಾರಾಟ ಮಾಡಲಾಗಿದೆ. ಈ ಬಗ್ಗೆ ಮೊದಲು ಪರಾಮರ್ಶೆ ನಡೆಯಬೇಕು. ಆನಂತರ ಮಸೂದೆ ಬಗ್ಗೆ ಚರ್ಚೆ ನಡೆಯಬೇಕು~ ಎಂದು ಅವರು ಆಗ್ರಹಿಸಿದರು.<br /> <br /> <strong>ಅಕ್ವಿಸಿಷನ್ ಬೇಡ, ರಿಕ್ವಿಸಿಷನ್ ಇರಲಿ</strong>: `ಅಕ್ವಿಸಿಷನ್ ಎಂಬ ಪದವೇ ಬ್ರಿಟೀಷರ ವಸಾಹತುಶಾಹಿಗಿಂತ ಅಪಾಯಕಾರಿ. ರೈತರ ಭೂಮಿಯನ್ನು ಭೂಸ್ವಾಧೀನಪಡಿಸಿಕೊಳ್ಳುವ ಪದವೇ ಸರಿಯಲ್ಲ. ಇದರ ಬದಲಿಗೆ ಕೋರಿಕೆ ಮೂಲಕ ರೈತರ ಭೂಮಿಯನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು~ ಎಂದು ಕೋರಿದರು.<br /> <br /> `ನಾವು ಕೈಗಾರಿಕೆ ಬೆಳವಣಿಗೆಯ ವಿರೋಧಿಗಳಲ್ಲ. ಆದರೆ, ದೇಶದಲ್ಲಿ ಎಷ್ಟು ಕೈಗಾರಿಕೆಗಳ ಸ್ಥಾಪನೆಗೆ ಎಷ್ಟು ಭೂಮಿಯ ಅಗತ್ಯವಿದೆ ಎಂಬುದರ ಬಗ್ಗೆ ಸರ್ಕಾರ ಚರ್ಚೆ ನಡೆಸಲಿ. ಅದು ಬಿಟ್ಟು ಶೇ 98ರಷ್ಟು ಇಂಗ್ಲಿಷ್ ಗೊತ್ತಿಲ್ಲದ ರೈತರನ್ನು ಮೋಸ ಮಾಡುವುದನ್ನು ಸರ್ಕಾರ ಕೈಬಿಡಬೇಕು~ ಎಂದು ಒತ್ತಾಯಿಸಿದರು.<br /> <br /> <strong>ಅ. 18ರಂದು ರ್ಯಾಲಿ:</strong> ಭೂಸ್ವಾಧೀನ ಮಸೂದೆ ವಿರೋಧಿಸಿ ಅಕ್ಟೋಬರ್ 18ರಂದು ನವದೆಹಲಿಯಲ್ಲಿ ನಡೆಯಲಿರುವ ಮೊದಲ ಪ್ರತಿಭಟನಾ ರ್ಯಾಲಿಯಲ್ಲಿ ದೇಶದ ವಿವಿಧ ಭಾಗಗಳಿಂದ ಐದು ಲಕ್ಷಕ್ಕೂ ಅಧಿಕ ರೈತರು ಭಾಗವಹಿಸಲಿದ್ದಾರೆ. <br /> <br /> ಕರ್ನಾಟಕದಿಂದ ಸಾಂಕೇತಿಕವಾಗಿ ಮೂರ್ನಾಲ್ಕು ಸಾವಿರ ರೈತರು ಭಾಗವಹಿಸಲಿದ್ದಾರೆ. ಈ ಬಗ್ಗೆ ಪೂರ್ವಭಾವಿ ಚರ್ಚೆ ನಡೆಸಲು ಸೆ. 10ರಂದು ಹುಬ್ಬಳ್ಳಿಯಲ್ಲಿ ಸಭೆ ನಡೆಸಲಾಗುವುದು. ನವದೆಹಲಿಯಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.<br /> <br /> ಪತ್ರಕರ್ತ `ಅಗ್ನಿ~ ಶ್ರೀಧರ್ ಮಾತನಾಡಿ, `ಭೂಸ್ವಾಧೀನ ಎಂಬ ಪದವನ್ನೇ ಸರ್ಕಾರ ನಿಷೇಧಿಸಬೇಕು. ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುವ ಸಂಬಂಧ ರೈತರು ಹಾಗೂ ಕೈಗಾರಿಕೋದ್ಯಮಿಗಳ ನಡುವೆ ಒಪ್ಪಂದ ನಡೆಯಬೇಕು. ಸರ್ಕಾರ ಕೇವಲ ಸಾಕ್ಷಿ ರೂಪದಲ್ಲಿ ವ್ಯವಹರಿಸಬೇಕು~ ಎಂದು ಒತ್ತಾಯಿಸಿದರು.<br /> <br /> `ಭೂಸ್ವಾಧೀನ ಮಸೂದೆ ಜಾರಿಗೆ ರೈತರ ಮಾನಸಿಕ ವಿರೋಧ ಇದೆ. ಆದರೆ, ಯಾರೂ ದನಿಯೆತ್ತುತ್ತಿಲ್ಲ. ಅಣ್ಣಾ ಹಜಾರೆ ಹೋರಾಟವನ್ನು ಕಣ್ಮುಚ್ಚಿ ಬೆಂಬಲಿಸಿದ ರೈತರು, ಭೂಸ್ವಾಧೀನ ಮಸೂದೆ ಜಾರಿ ವಿರುದ್ಧವೂ ಬೀದಿಗಿಳಿದು ಹೋರಾಟ ನಡೆಸಬೇಕಿದೆ. ಏಕೆಂದರೆ ಇದರಲ್ಲಿ ರೈತರ ಹಿತಾಸಕ್ತಿ ಅಡಗಿದೆ~ ಎಂದರು.<br /> <br /> ರೈತ ಮುಖಂಡರಾದ ಡಾ. ವೆಂಕಟರೆಡ್ಡಿ, ಡಾ. ಶಿವಸ್ವಾಮಿ, ಪತ್ರಕರ್ತ ಇಂದೂಧರ ಹೊನ್ನಾಪುರ ಸೇರಿದಂತೆ ಹಲವರು ಸಭೆಯಲ್ಲಿ ಮಾತನಾಡಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>