<p>ಚಿಕ್ಕಬಳ್ಳಾಪುರ: ಬಗರ್ಹುಕುಂ ಸಾಗುವಳಿ ರೈತರಿಗೆ ಬಗರ್ಹುಕುಂ ಸಮಿತಿಯ ಮುಖಾಂತರ ಹಕ್ಕು ಪತ್ರಗಳನ್ನು ವಿತರಿಸಬೇಕು ಎಂದು ಕೋರಿ ಕರ್ನಾಟಕ ಭೂಹಕ್ಕುದಾರರ ವೇದಿಕೆ ಸದಸ್ಯರು ಇತ್ತೀಚೆಗೆ ಶಾಸಕ ಕೆ.ಪಿ.ಬಚ್ಚೇಗೌಡ ಅವರಿಗೆ ಮನವಿಪತ್ರ ಸಲ್ಲಿಸಿದರು.<br /> <br /> ನಗರದ ಶಾಸಕರ ಭವನದಲ್ಲಿ ಮನವಿ ಪತ್ರ ಸಲ್ಲಿಸಿದ ಬಳಿಕ ವೇದಿಕೆ ಅಧ್ಯಕ್ಷ ಎಂ.ಕೃಷ್ಣಪ್ಪ ಮಾತನಾಡಿ, `ಹಲವು ವರ್ಷಗಳಿಂದ ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ರೈತ ಕುಟುಂಬಗಳು ಬಗರ್ಹುಕುಂ ಭೂಮಿ ಸಾಗುವಳಿ ಮಾಡಿ ಕೊಂಡು ಬದುಕುತ್ತಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಕಂದಾಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ, 6,759ಕ್ಕೂ ಹೆಚ್ಚು ಬಗರ್ಹುಕುಂ ಸಾಗುವಳಿದಾರರು 27,650 ಎಕರೆಗೂ ಹೆಚ್ಚು ಭೂಮಿಯನ್ನು ಬಗರ್ಹುಕುಂ ಸಾಗುವಳಿ ಮಾಡುತ್ತಿದ್ದಾರೆ~ ಎಂದರು.<br /> <br /> ಇದರ ಹಿನ್ನೆಲೆಯಲ್ಲಿ ಭೂಮಿಯ ಹಕ್ಕುಪತ್ರಗಳಿಗಾಗಿ ಹಲವು ವರ್ಷಗಳಿಂದ ಮನವಿ ಪತ್ರ ಸಲ್ಲಿಸುತ್ತಿದ್ದರೂ ಯಾವುದೇ ಮಾನ್ಯತೆ ಸಿಕ್ಕಿಲ್ಲ. ಚಳವಳಿ, ಪ್ರತಿಭಟನೆ, ಧರಣಿ ಮುಂತಾದವು ಗಳನ್ನು ಮಾಡಿದರೂ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಆರೋಪಿಸಿದರು.<br /> <br /> ಮನವಿಪತ್ರ ಸ್ವೀಕರಿಸಿ ಮಾತನಾಡಿದ ಶಾಸಕ ಕೆ.ಪಿ.ಬಚ್ಚೇಗೌಡ, `ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯುತ್ತೇನೆ. ಹಲವು ವರ್ಷಗಳಿಂದ ಹಕ್ಕುಪತ್ರಗಳಿಗಾಗಿ ಮನವಿ ಮಾಡುತ್ತಿರುವ ರೈತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸು ತ್ತೇನೆ~ ಎಂದರು. ವೇದಿಕೆ ಕಾರ್ಯದರ್ಶಿ ಚಾಂದಬಾಷಾ, ಖಜಾಂಚಿ ಎಸ್. ಅಶ್ವತ್ಥ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಬಗರ್ಹುಕುಂ ಸಾಗುವಳಿ ರೈತರಿಗೆ ಬಗರ್ಹುಕುಂ ಸಮಿತಿಯ ಮುಖಾಂತರ ಹಕ್ಕು ಪತ್ರಗಳನ್ನು ವಿತರಿಸಬೇಕು ಎಂದು ಕೋರಿ ಕರ್ನಾಟಕ ಭೂಹಕ್ಕುದಾರರ ವೇದಿಕೆ ಸದಸ್ಯರು ಇತ್ತೀಚೆಗೆ ಶಾಸಕ ಕೆ.ಪಿ.ಬಚ್ಚೇಗೌಡ ಅವರಿಗೆ ಮನವಿಪತ್ರ ಸಲ್ಲಿಸಿದರು.<br /> <br /> ನಗರದ ಶಾಸಕರ ಭವನದಲ್ಲಿ ಮನವಿ ಪತ್ರ ಸಲ್ಲಿಸಿದ ಬಳಿಕ ವೇದಿಕೆ ಅಧ್ಯಕ್ಷ ಎಂ.ಕೃಷ್ಣಪ್ಪ ಮಾತನಾಡಿ, `ಹಲವು ವರ್ಷಗಳಿಂದ ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ರೈತ ಕುಟುಂಬಗಳು ಬಗರ್ಹುಕುಂ ಭೂಮಿ ಸಾಗುವಳಿ ಮಾಡಿ ಕೊಂಡು ಬದುಕುತ್ತಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಕಂದಾಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ, 6,759ಕ್ಕೂ ಹೆಚ್ಚು ಬಗರ್ಹುಕುಂ ಸಾಗುವಳಿದಾರರು 27,650 ಎಕರೆಗೂ ಹೆಚ್ಚು ಭೂಮಿಯನ್ನು ಬಗರ್ಹುಕುಂ ಸಾಗುವಳಿ ಮಾಡುತ್ತಿದ್ದಾರೆ~ ಎಂದರು.<br /> <br /> ಇದರ ಹಿನ್ನೆಲೆಯಲ್ಲಿ ಭೂಮಿಯ ಹಕ್ಕುಪತ್ರಗಳಿಗಾಗಿ ಹಲವು ವರ್ಷಗಳಿಂದ ಮನವಿ ಪತ್ರ ಸಲ್ಲಿಸುತ್ತಿದ್ದರೂ ಯಾವುದೇ ಮಾನ್ಯತೆ ಸಿಕ್ಕಿಲ್ಲ. ಚಳವಳಿ, ಪ್ರತಿಭಟನೆ, ಧರಣಿ ಮುಂತಾದವು ಗಳನ್ನು ಮಾಡಿದರೂ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಆರೋಪಿಸಿದರು.<br /> <br /> ಮನವಿಪತ್ರ ಸ್ವೀಕರಿಸಿ ಮಾತನಾಡಿದ ಶಾಸಕ ಕೆ.ಪಿ.ಬಚ್ಚೇಗೌಡ, `ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯುತ್ತೇನೆ. ಹಲವು ವರ್ಷಗಳಿಂದ ಹಕ್ಕುಪತ್ರಗಳಿಗಾಗಿ ಮನವಿ ಮಾಡುತ್ತಿರುವ ರೈತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸು ತ್ತೇನೆ~ ಎಂದರು. ವೇದಿಕೆ ಕಾರ್ಯದರ್ಶಿ ಚಾಂದಬಾಷಾ, ಖಜಾಂಚಿ ಎಸ್. ಅಶ್ವತ್ಥ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>