<p><strong>ಬೆಂಗಳೂರು: </strong>ಗೃಹ ಸಚಿವ ಆರ್.ಅಶೋಕ ವಿರುದ್ಧ ಮತ್ತೊಂದು ಭೂ ಹಗರಣ ಆರೋಪ ಕೇಳಿಬಂದಿದ್ದು, ಕೊಡಿಗೆಹಳ್ಳಿಯ ಕೆ.ಎನ್.ಜಗದೀಶ್ ಕುಮಾರ್ ಎಂಬುವವರು ಲೋಕಾಯುಕ್ತದಲ್ಲಿ ಭೂ ಕಬಳಿಕೆಯ ದೂರು ದಾಖಲಿಸಿದ್ದಾರೆ.<br /> <br /> `ಕೊಡಿಗೆಹಳ್ಳಿಯಲ್ಲಿರುವ ಲೋಕಕಲ್ಯಾಣ ಪ್ರತಿಷ್ಠಾನಕ್ಕೆ ಸೇರಿದ 7 ಎಕರೆ 9 ಗುಂಟೆ ಜಾಗದ ಕೆಲವೊಂದು ದಾಖಲೆಗಳನ್ನು ತಿದ್ದಿ ಅಶೋಕ ಅವರು ತಮ್ಮ ಸಹೋದರಿಯ ಮಕ್ಕಳ ಹೆಸರಿಗೆ ಆ ಭೂಮಿಯನ್ನು ನೋಂದಣಿ ಮಾಡಿಸಿಕೊಂಡಿದ್ದರು. ಇದಾದ ನಂತರ ಬಹುತೇಕ ಭೂಮಿಯನ್ನು ಬೇರೆಯವರಿಗೆ ಮಾರಾಟ ಮಾಡಿದ್ದಾರೆ~ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.<br /> <br /> ಟ್ರಸ್ಟ್ನ ಸದಸ್ಯರಲ್ಲಿ ಒಬ್ಬರಾದ ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ಕುಮಾರ್ ಅವರು ಇದಕ್ಕೆ ಸಹಕರಿಸಿದ್ದು, ಭೂಮಿ ಪರಭಾರೆಯಾಗಲು ಅವರೂ ಕಾರಣರಾಗಿದ್ದಾರೆ. ಸರ್ವೆ ನಂ.162/1, 163/1, 163/2 ಮತ್ತು 164/7ಕ್ಕೆ ಸೇರಿದ ಈ ಜಾಗದ ಒಟ್ಟು ಮೌಲ್ಯ 175 ಕೋಟಿ ರೂಪಾಯಿ. ಅಲ್ಲಿ ಈಗ ಅಪಾರ್ಟ್ಮೆಂಟ್ಗಳನ್ನು ಕಟ್ಟಿಸಲಾಗುತ್ತಿದೆ ಎಂದು ಜಗದೀಶ್ ಕುಮಾರ್ ದೂರಿದ್ದಾರೆ.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಗೃಹ ಸಚಿವ ಆರ್.ಅಶೋಕ ವಿರುದ್ಧ ಮತ್ತೊಂದು ಭೂ ಹಗರಣ ಆರೋಪ ಕೇಳಿಬಂದಿದ್ದು, ಕೊಡಿಗೆಹಳ್ಳಿಯ ಕೆ.ಎನ್.ಜಗದೀಶ್ ಕುಮಾರ್ ಎಂಬುವವರು ಲೋಕಾಯುಕ್ತದಲ್ಲಿ ಭೂ ಕಬಳಿಕೆಯ ದೂರು ದಾಖಲಿಸಿದ್ದಾರೆ.<br /> <br /> `ಕೊಡಿಗೆಹಳ್ಳಿಯಲ್ಲಿರುವ ಲೋಕಕಲ್ಯಾಣ ಪ್ರತಿಷ್ಠಾನಕ್ಕೆ ಸೇರಿದ 7 ಎಕರೆ 9 ಗುಂಟೆ ಜಾಗದ ಕೆಲವೊಂದು ದಾಖಲೆಗಳನ್ನು ತಿದ್ದಿ ಅಶೋಕ ಅವರು ತಮ್ಮ ಸಹೋದರಿಯ ಮಕ್ಕಳ ಹೆಸರಿಗೆ ಆ ಭೂಮಿಯನ್ನು ನೋಂದಣಿ ಮಾಡಿಸಿಕೊಂಡಿದ್ದರು. ಇದಾದ ನಂತರ ಬಹುತೇಕ ಭೂಮಿಯನ್ನು ಬೇರೆಯವರಿಗೆ ಮಾರಾಟ ಮಾಡಿದ್ದಾರೆ~ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.<br /> <br /> ಟ್ರಸ್ಟ್ನ ಸದಸ್ಯರಲ್ಲಿ ಒಬ್ಬರಾದ ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ಕುಮಾರ್ ಅವರು ಇದಕ್ಕೆ ಸಹಕರಿಸಿದ್ದು, ಭೂಮಿ ಪರಭಾರೆಯಾಗಲು ಅವರೂ ಕಾರಣರಾಗಿದ್ದಾರೆ. ಸರ್ವೆ ನಂ.162/1, 163/1, 163/2 ಮತ್ತು 164/7ಕ್ಕೆ ಸೇರಿದ ಈ ಜಾಗದ ಒಟ್ಟು ಮೌಲ್ಯ 175 ಕೋಟಿ ರೂಪಾಯಿ. ಅಲ್ಲಿ ಈಗ ಅಪಾರ್ಟ್ಮೆಂಟ್ಗಳನ್ನು ಕಟ್ಟಿಸಲಾಗುತ್ತಿದೆ ಎಂದು ಜಗದೀಶ್ ಕುಮಾರ್ ದೂರಿದ್ದಾರೆ.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>