<p>ಬೆಂಗಳೂರು: ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ನಗರದ 11ನೇ ಎಸಿಎಂಎಂ ನ್ಯಾಯಾಲಯದ ನಿರ್ದೇಶನದ ಹಿನ್ನೆಲೆಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಕೆ.ಸಿ.ರಾಮಮೂರ್ತಿ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೊತ್ತನೂರು ಠಾಣೆಯಲ್ಲಿ ದೂರು ದಾಖಲಾಗಿದೆ.<br /> <br /> ದೊಡ್ಡಗುಬ್ಬಿ ಸಮೀಪದ ‘ಅಥಿನಾ ಟೌನ್ಶಿಪ್’ನಲ್ಲಿನ ಅನಿವಾಸಿ ಭಾರತೀಯರ (ಎನ್ಆರ್ಐ) ನಿವೇಶನಗಳನ್ನು ಅಕ್ರಮವಾಗಿ ಕಬಳಿಸಲಾಗಿದೆ ಎಂದು ಆರೋಪಿಸಿ ಸ್ಟೀಫನ್ ವಿ.ವರ್ಗೀಸ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದ ತನಿಖೆ ನಡೆಸುವಂತೆ ಕೊತ್ತನೂರು ಪೊಲೀಸರಿಗೆ ನಿರ್ದೇಶಿಸಿದೆ.<br /> <br /> ‘ನ್ಯಾಯಾಲಯದ ನಿರ್ದೇಶನದಂತೆ ಕೆ.ಸಿ.ರಾಮಮೂರ್ತಿ ಸೇರಿದಂತೆ 14 ಮಂದಿ ವಿರುದ್ಧ ದೂರು ದಾಖಲಿಸಿಕೊಂಡು ನಿವೇಶನಗಳ ಮಾಲೀಕತ್ವಕ್ಕೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ಕಂದಾಯ ಇಲಾಖೆಯಿಂದ ಸಂಗ್ರಹಿಸಲಾಗುತ್ತಿದೆ’ ಎಂದು ಈಶಾನ್ಯ ವಿಭಾಗದ ಡಿಸಿಪಿ ಟಿ.ಆರ್.ಸುರೇಶ್ ತಿಳಿಸಿದ್ದಾರೆ.<br /> <br /> ‘1994ರಲ್ಲಿ ಜೋಸೆಫ್ ಚಾಕೋ ಎಂಬುವರಿಂದ ಅಥಿನಾ ಟೌನ್ಶಿಪ್ ಲೇಔಟ್ನಲ್ಲಿ 60/80 ವಿಸ್ತೀರ್ಣದ ನಾಲ್ಕು ನಿವೇಶನಗಳನ್ನು ಖರೀದಿಸಲಾಗಿತ್ತು. ನಿವೃತ್ತ ಐಪಿಎಸ್ ಅಧಿಕಾರಿ ರಾಮಮೂರ್ತಿ ಮತ್ತು ಅವರ ಕುಟುಂಬ ಸದಸ್ಯರಾದ ಕೆ.ಎಸ್.ಬಾಲಸುಂದರ ರೆಡ್ಡಿ, ಕೆ.ಎಸ್.ಶಂಕರರೆಡ್ಡಿ, ಕೆ.ವಿ.ರಾಜಗೋಪಾಲ ರೆಡ್ಡಿ, ಕೆ.ಇ.ಬಾಬು ಸೇರಿದಂತೆ ಮತ್ತಿತರರು, ನಿವೇಶನದ ಸುತ್ತಲಿನ ಕಾಂಪೌಂಡ್ ಧ್ವಂಸ ಮಾಡಿ ಅತಿಕ್ರಮ ಪ್ರವೇಶ ಮಾಡಿದ್ದಾರೆ.<br /> <br /> ನಂತರ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಕಬಳಿಸಿದ್ದರು’ ಎಂದು ವರ್ಗೀಸ್ ಅರ್ಜಿಯಲ್ಲಿ ತಿಳಿಸಿದ್ದರು.<br /> ನಿವೇಶನ ಕಳೆದುಕೊಂಡ ಅನಿವಾಸಿ ಭಾರತೀಯರ ನಿಯೋಗ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ನಗರದ 11ನೇ ಎಸಿಎಂಎಂ ನ್ಯಾಯಾಲಯದ ನಿರ್ದೇಶನದ ಹಿನ್ನೆಲೆಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಕೆ.ಸಿ.ರಾಮಮೂರ್ತಿ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೊತ್ತನೂರು ಠಾಣೆಯಲ್ಲಿ ದೂರು ದಾಖಲಾಗಿದೆ.<br /> <br /> ದೊಡ್ಡಗುಬ್ಬಿ ಸಮೀಪದ ‘ಅಥಿನಾ ಟೌನ್ಶಿಪ್’ನಲ್ಲಿನ ಅನಿವಾಸಿ ಭಾರತೀಯರ (ಎನ್ಆರ್ಐ) ನಿವೇಶನಗಳನ್ನು ಅಕ್ರಮವಾಗಿ ಕಬಳಿಸಲಾಗಿದೆ ಎಂದು ಆರೋಪಿಸಿ ಸ್ಟೀಫನ್ ವಿ.ವರ್ಗೀಸ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದ ತನಿಖೆ ನಡೆಸುವಂತೆ ಕೊತ್ತನೂರು ಪೊಲೀಸರಿಗೆ ನಿರ್ದೇಶಿಸಿದೆ.<br /> <br /> ‘ನ್ಯಾಯಾಲಯದ ನಿರ್ದೇಶನದಂತೆ ಕೆ.ಸಿ.ರಾಮಮೂರ್ತಿ ಸೇರಿದಂತೆ 14 ಮಂದಿ ವಿರುದ್ಧ ದೂರು ದಾಖಲಿಸಿಕೊಂಡು ನಿವೇಶನಗಳ ಮಾಲೀಕತ್ವಕ್ಕೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ಕಂದಾಯ ಇಲಾಖೆಯಿಂದ ಸಂಗ್ರಹಿಸಲಾಗುತ್ತಿದೆ’ ಎಂದು ಈಶಾನ್ಯ ವಿಭಾಗದ ಡಿಸಿಪಿ ಟಿ.ಆರ್.ಸುರೇಶ್ ತಿಳಿಸಿದ್ದಾರೆ.<br /> <br /> ‘1994ರಲ್ಲಿ ಜೋಸೆಫ್ ಚಾಕೋ ಎಂಬುವರಿಂದ ಅಥಿನಾ ಟೌನ್ಶಿಪ್ ಲೇಔಟ್ನಲ್ಲಿ 60/80 ವಿಸ್ತೀರ್ಣದ ನಾಲ್ಕು ನಿವೇಶನಗಳನ್ನು ಖರೀದಿಸಲಾಗಿತ್ತು. ನಿವೃತ್ತ ಐಪಿಎಸ್ ಅಧಿಕಾರಿ ರಾಮಮೂರ್ತಿ ಮತ್ತು ಅವರ ಕುಟುಂಬ ಸದಸ್ಯರಾದ ಕೆ.ಎಸ್.ಬಾಲಸುಂದರ ರೆಡ್ಡಿ, ಕೆ.ಎಸ್.ಶಂಕರರೆಡ್ಡಿ, ಕೆ.ವಿ.ರಾಜಗೋಪಾಲ ರೆಡ್ಡಿ, ಕೆ.ಇ.ಬಾಬು ಸೇರಿದಂತೆ ಮತ್ತಿತರರು, ನಿವೇಶನದ ಸುತ್ತಲಿನ ಕಾಂಪೌಂಡ್ ಧ್ವಂಸ ಮಾಡಿ ಅತಿಕ್ರಮ ಪ್ರವೇಶ ಮಾಡಿದ್ದಾರೆ.<br /> <br /> ನಂತರ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಕಬಳಿಸಿದ್ದರು’ ಎಂದು ವರ್ಗೀಸ್ ಅರ್ಜಿಯಲ್ಲಿ ತಿಳಿಸಿದ್ದರು.<br /> ನಿವೇಶನ ಕಳೆದುಕೊಂಡ ಅನಿವಾಸಿ ಭಾರತೀಯರ ನಿಯೋಗ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>