<p><strong>ಬೆಂಗಳೂರು:</strong> `ಅಕ್ರಮ ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ಶಾಸಕರಾದ ಡಿ.ಎನ್.ಜೀವರಾಜ್, ರಮೇಶ್ಕುಮಾರ್, ಎಚ್.ಡಿ.ರೇವಣ್ಣ ಮತ್ತು ಉದ್ಯಮಿ ಸಿದ್ಧಾರ್ಥ ಅವರ ವಿರುದ್ಧ ಮುಂದಿನ ದಿನಗಳಲ್ಲಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು' ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ತಿಳಿಸಿದರು.<br /> <br /> ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಎನ್.ಜೀವರಾಜ್ ಅವರು ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸಿ ಅಧಿಕೃತಗೊಳಿಸುವ ಸಮಿತಿಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ ಮತ್ತು ಎನ್.ಆರ್.ಪುರ ತಾಲ್ಲೂಕುಗಳಲ್ಲಿ ಸರ್ಕಾರಿ ಹಾಗೂ ಅರಣ್ಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದಾರೆ ಎಂದರು.<br /> <br /> ಈ ಕುರಿತು ಸರ್ಕಾರಿ ಜಮೀನು ಸಂರಕ್ಷಣಾ ಕಾರ್ಯಪಡೆಯ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಾಲಸುಬ್ರಮಣಿಯನ್ ಅವರು ಉಪ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ. ಅದನ್ನು ಆಧರಿಸಿ ದೂರು ದಾಖಲಿಸಲಾಗುವುದು ಎಂದು ಹೇಳಿದರು.<br /> <br /> ಉದ್ಯಮಿ ಸಿದ್ಧಾರ್ಥ ಅವರು ಭೈರಸಂದ್ರ ಕೆರೆಯನ್ನು ಒತ್ತುವರಿ ನಡೆಸಿದ್ದಾರೆ. ಎಚ್.ಡಿ.ರೇವಣ್ಣ ಅವರು ಬಗರ್ಹುಕ್ಕುಂ ಜಮೀನನ್ನು ಕಬಳಿಸಿದ್ದಾರೆ. ರಮೇಶ್ಕುಮಾರ್ ಅವರು ಅರಣ್ಯ ಇಲಾಖೆಯ ಭೂಮಿಯಲ್ಲಿ ಒತ್ತುವರಿ ನಡೆಸಿದ್ದಾರೆ ಎಂದು ಆಪಾದಿಸಿದರು.<br /> <br /> ಶಾಸಕ ಡಿ.ಕೆ.ಶಿವಕುಮಾರ್ ಅವರು ನಡೆಸಿರುವ ಅಕ್ರಮ ಗಣಿಗಾರಿಕೆ ಹಾಗೂ ಅಕ್ರಮ ಭೂ ಕಬಳಿಕೆ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಅಕ್ರಮ ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ಶಾಸಕರಾದ ಡಿ.ಎನ್.ಜೀವರಾಜ್, ರಮೇಶ್ಕುಮಾರ್, ಎಚ್.ಡಿ.ರೇವಣ್ಣ ಮತ್ತು ಉದ್ಯಮಿ ಸಿದ್ಧಾರ್ಥ ಅವರ ವಿರುದ್ಧ ಮುಂದಿನ ದಿನಗಳಲ್ಲಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು' ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ತಿಳಿಸಿದರು.<br /> <br /> ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಎನ್.ಜೀವರಾಜ್ ಅವರು ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸಿ ಅಧಿಕೃತಗೊಳಿಸುವ ಸಮಿತಿಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ ಮತ್ತು ಎನ್.ಆರ್.ಪುರ ತಾಲ್ಲೂಕುಗಳಲ್ಲಿ ಸರ್ಕಾರಿ ಹಾಗೂ ಅರಣ್ಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದಾರೆ ಎಂದರು.<br /> <br /> ಈ ಕುರಿತು ಸರ್ಕಾರಿ ಜಮೀನು ಸಂರಕ್ಷಣಾ ಕಾರ್ಯಪಡೆಯ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಾಲಸುಬ್ರಮಣಿಯನ್ ಅವರು ಉಪ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ. ಅದನ್ನು ಆಧರಿಸಿ ದೂರು ದಾಖಲಿಸಲಾಗುವುದು ಎಂದು ಹೇಳಿದರು.<br /> <br /> ಉದ್ಯಮಿ ಸಿದ್ಧಾರ್ಥ ಅವರು ಭೈರಸಂದ್ರ ಕೆರೆಯನ್ನು ಒತ್ತುವರಿ ನಡೆಸಿದ್ದಾರೆ. ಎಚ್.ಡಿ.ರೇವಣ್ಣ ಅವರು ಬಗರ್ಹುಕ್ಕುಂ ಜಮೀನನ್ನು ಕಬಳಿಸಿದ್ದಾರೆ. ರಮೇಶ್ಕುಮಾರ್ ಅವರು ಅರಣ್ಯ ಇಲಾಖೆಯ ಭೂಮಿಯಲ್ಲಿ ಒತ್ತುವರಿ ನಡೆಸಿದ್ದಾರೆ ಎಂದು ಆಪಾದಿಸಿದರು.<br /> <br /> ಶಾಸಕ ಡಿ.ಕೆ.ಶಿವಕುಮಾರ್ ಅವರು ನಡೆಸಿರುವ ಅಕ್ರಮ ಗಣಿಗಾರಿಕೆ ಹಾಗೂ ಅಕ್ರಮ ಭೂ ಕಬಳಿಕೆ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>