<p><strong>ಸಕಲೇಶಪುರ:</strong> ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಂಗಳವಾರ ಹಾಗೂ ಬುಧವಾರ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಸುಬ್ರಹ್ಮಣ್ಯ-ಸಕಲೇಶಪುರ ನಡುವಿನ ರೈಲು ಮಾರ್ಗದ ಎರಡು ಕಡೆ ಭೂ ಕುಸಿತ ಉಂಟಾಗಿ ಪ್ರಯಾಣಿಕರ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ.<br /> <br /> ಈ ಮಾರ್ಗದ ದೋಣಿಗಾಲ್ ಮತ್ತು ಕಡಗರವಳ್ಳಿ ರೈಲು ನಿಲ್ದಾಣ ನಡುವಿನ ಕಿ.ಮೀ. 54ರಲ್ಲಿ ಹಾಗೂ ಯಡಕುಮರಿ ಮತ್ತು ಸಿರಿವಾಗಿಲು ನಡುವಿನ ಕಿ.ಮೀ. 67ರ ಬಳಿ ರೈಲು ಹಳಿಗಳ ಮೇಲೆ ಬುಧವಾರ ದೊಡ್ಡ ಪ್ರಮಾಣದ ಮಣ್ಣು ಕುಸಿದಿದೆ.<br /> <br /> ಇದರಿಂದ ಬುಧವಾರ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ಹಾಗೂ ಬೆಂಗಳೂರು (ಯಶವಂತಪುರ)ದಿಂದ ಮಂಗಳೂರಿಗೆ ಹೋಗುವ ಪ್ರಯಾಣಿಕರ ರೈಲು ಸಂಚಾರ ಸ್ಥಗಿತವಾಯಿತು.<br /> <br /> ಮಣ್ಣು ಕುಸಿತ ಉಂಟಾಗಿ ಸಂಚಾರ ಸ್ಥಗಿತಗೊಂಡಿದೆ ಎಂಬ ಮಾಹಿತಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ರೈಲು ಹೊರಡುವ ಕೊನೆಯ ಕ್ಷಣಗಳಲ್ಲಿ ಹೊರಬಿದ್ದಿದೆ.<br /> <br /> ಇದರಿಂದಾಗಿ ಮಂಗಳೂರು, ಸುಬ್ರಹ್ಮಣ್ಯ, ಸಕಲೇಶಪುರ, ಹಾಸನ, ಮೈಸೂರು ಹಾಗೂ ಬೆಂಗಳೂರು ರೈಲು ನಿಲ್ದಾಣಗಳಲ್ಲಿ ಈ ರೈಲಿಗೆ ಕಾದಿದ್ದ ಸಾವಿರಾರು ಪ್ರಯಾಣಿಕರು ತೀವ್ರ ಸಮಸ್ಯೆ ಎದುರಿಸಬೇಕಾಯಿತು.<br /> <br /> ಬುಧವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ, ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ಖಾಸಗಿ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಕರು ಭರ್ತಿಯಾಗಿ ಕೆಲವು ಪ್ರಯಾಣಿಕರು ನೂರಾರು ಕಿ.ಮೀ. ವರೆಗೆ ನಿಂತು ಪ್ರಯಾಣ ಮಾಡಿದ್ದಾಗಿ ತಿಳಿದು ಬಂದಿದೆ.<br /> <br /> ಸಂಚಾರಕ್ಕೆ ಮುಕ್ತ: ಭೂ ಕುಸಿತದಿಂದ ರೈಲು ಹಳಿಗಳ ಮೇಲೆ ಬಿದ್ದಿದ್ದ ಮಣ್ಣನ್ನು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ತೆರವುಗೊಳಿಸಿದ್ದು, ರೈಲು ಸಂಚಾರ ಪುನಃ ಆರಂಭಗೊಂಡಿದೆ.<br /> <br /> ಮಧ್ಯಾಹ್ನ 1.15ಕ್ಕೆ ಸಕಲೇಶಪುರ ನಿಲ್ದಾಣಕ್ಕೆ ಬರುವ ಮಂಗಳೂರು-ಯಶವಂತಪುರ ಪ್ರಯಾಣಿಕರ ರೈಲು ಗುರುವಾರ ಸಂಜೆ 5.15ಕ್ಕೆ ಅಂದರೆ ಸುಮಾರು 4 ಗಂಟೆ ತಡವಾಗಿ ಬಂದು ಬೆಂಗಳೂರಿಗೆ ತೆರಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ:</strong> ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಂಗಳವಾರ ಹಾಗೂ ಬುಧವಾರ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಸುಬ್ರಹ್ಮಣ್ಯ-ಸಕಲೇಶಪುರ ನಡುವಿನ ರೈಲು ಮಾರ್ಗದ ಎರಡು ಕಡೆ ಭೂ ಕುಸಿತ ಉಂಟಾಗಿ ಪ್ರಯಾಣಿಕರ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ.<br /> <br /> ಈ ಮಾರ್ಗದ ದೋಣಿಗಾಲ್ ಮತ್ತು ಕಡಗರವಳ್ಳಿ ರೈಲು ನಿಲ್ದಾಣ ನಡುವಿನ ಕಿ.ಮೀ. 54ರಲ್ಲಿ ಹಾಗೂ ಯಡಕುಮರಿ ಮತ್ತು ಸಿರಿವಾಗಿಲು ನಡುವಿನ ಕಿ.ಮೀ. 67ರ ಬಳಿ ರೈಲು ಹಳಿಗಳ ಮೇಲೆ ಬುಧವಾರ ದೊಡ್ಡ ಪ್ರಮಾಣದ ಮಣ್ಣು ಕುಸಿದಿದೆ.<br /> <br /> ಇದರಿಂದ ಬುಧವಾರ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ಹಾಗೂ ಬೆಂಗಳೂರು (ಯಶವಂತಪುರ)ದಿಂದ ಮಂಗಳೂರಿಗೆ ಹೋಗುವ ಪ್ರಯಾಣಿಕರ ರೈಲು ಸಂಚಾರ ಸ್ಥಗಿತವಾಯಿತು.<br /> <br /> ಮಣ್ಣು ಕುಸಿತ ಉಂಟಾಗಿ ಸಂಚಾರ ಸ್ಥಗಿತಗೊಂಡಿದೆ ಎಂಬ ಮಾಹಿತಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ರೈಲು ಹೊರಡುವ ಕೊನೆಯ ಕ್ಷಣಗಳಲ್ಲಿ ಹೊರಬಿದ್ದಿದೆ.<br /> <br /> ಇದರಿಂದಾಗಿ ಮಂಗಳೂರು, ಸುಬ್ರಹ್ಮಣ್ಯ, ಸಕಲೇಶಪುರ, ಹಾಸನ, ಮೈಸೂರು ಹಾಗೂ ಬೆಂಗಳೂರು ರೈಲು ನಿಲ್ದಾಣಗಳಲ್ಲಿ ಈ ರೈಲಿಗೆ ಕಾದಿದ್ದ ಸಾವಿರಾರು ಪ್ರಯಾಣಿಕರು ತೀವ್ರ ಸಮಸ್ಯೆ ಎದುರಿಸಬೇಕಾಯಿತು.<br /> <br /> ಬುಧವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ, ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ಖಾಸಗಿ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಕರು ಭರ್ತಿಯಾಗಿ ಕೆಲವು ಪ್ರಯಾಣಿಕರು ನೂರಾರು ಕಿ.ಮೀ. ವರೆಗೆ ನಿಂತು ಪ್ರಯಾಣ ಮಾಡಿದ್ದಾಗಿ ತಿಳಿದು ಬಂದಿದೆ.<br /> <br /> ಸಂಚಾರಕ್ಕೆ ಮುಕ್ತ: ಭೂ ಕುಸಿತದಿಂದ ರೈಲು ಹಳಿಗಳ ಮೇಲೆ ಬಿದ್ದಿದ್ದ ಮಣ್ಣನ್ನು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ತೆರವುಗೊಳಿಸಿದ್ದು, ರೈಲು ಸಂಚಾರ ಪುನಃ ಆರಂಭಗೊಂಡಿದೆ.<br /> <br /> ಮಧ್ಯಾಹ್ನ 1.15ಕ್ಕೆ ಸಕಲೇಶಪುರ ನಿಲ್ದಾಣಕ್ಕೆ ಬರುವ ಮಂಗಳೂರು-ಯಶವಂತಪುರ ಪ್ರಯಾಣಿಕರ ರೈಲು ಗುರುವಾರ ಸಂಜೆ 5.15ಕ್ಕೆ ಅಂದರೆ ಸುಮಾರು 4 ಗಂಟೆ ತಡವಾಗಿ ಬಂದು ಬೆಂಗಳೂರಿಗೆ ತೆರಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>