<p><strong>ಹಾಸನ:</strong> ಭೂ ಪರಿವರ್ತನೆ ಸಂಬಂಧ ಉಂಟಾದ ಗೊಂದಲ ನಿವಾರಿಸುವ ಉದ್ದೇಶದಿಂದ ಸೋಮವಾರ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭೂ ಮಾಲೀಕರ ಸಭೆ ನಡೆಯಿತು. ಸಭೆಯಲ್ಲಿ ಭೂ ಪರಿವರ್ತನೆಗೆ ಏಕಗವಾಕ್ಷಿ ವ್ಯವಸ್ಥೆ ಜಾರಿಗೊಳಿಸಲು ನಿರ್ಣಯ ಕೈಗೊಳ್ಳಲಾಯಿತು. <br /> <br /> ತುಂಡು ಭೂಮಿಯ ಪರಿವರ್ತನೆಗೆ ಪರವಾನಿಗೆ ನೀಡದಿರುವ ಹಿನ್ನೆಲೆಯಲ್ಲಿ ನಗರದ ಸುತ್ತಮುತ್ತ ಅನೇಕ ಅಕ್ರಮ ನಿವೇಶನಗಳು ಸೃಷ್ಟಿಯಾಗುತ್ತಿದ್ದವು. ಇದನ್ನು ನಿಯಂತ್ರಿಸುವ ಉದ್ದೇಶದಿಂದ ಸಭೆ ಕರೆಯಲಾಗಿತ್ತು ಎಂದು ಹುಡಾ ಅಧ್ಯಕ್ಷ ನವಿಲೆ ಅಣ್ಣಪ್ಪ ತಿಳಿಸಿದರು.<br /> <br /> `ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿ ಹಲವು ತಿಂಗಳಾದರೂ ನಮಗೆ ಅನುಮತಿ ನೀಡಿಲ್ಲ. ಹೀಗಿದ್ದರೆ ನಾವು ಮನೆಗಳನ್ನು ನಿರ್ಮಿಸುವುದಾದರೂ ಹೇಗೆ? ಎಂದು ಸಭೆಯಲ್ಲಿದ್ದ ಭೂ ಮಾಲೀಕರು ಪ್ರಶ್ನಿಸಿದರು. <br /> ಶಾಸಕ ಎಚ್.ಎಸ್. ಪ್ರಕಾಶ್ ಮಾತನಾಡಿ, ಜಿಲ್ಲಾಡಳಿತ ಹಾಗೂ ಹುಡಾ ನಡುವೆ ಬಂದಿರುವ ಗೊಂದಲ ನಿವಾರಿಸಲು ಏಕಗವಾಕ್ಷಿ ವ್ಯವಸ್ಥೆ ಜಾರಿ ಮಾಡುವುದು ಸೂಕ್ತ. <br /> <br /> ಇದರಿಂದ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿ ಇಬ್ಬರೂ ಸೇರಿ ಶೀಘ್ರದಲ್ಲಿ ನಿರ್ಣಯ ಕೈಗೊಳ್ಳಬಹುದು~ ಎಂದರು. ಈ ಪ್ರಸ್ತಾಪಕ್ಕೆ ಸಭೆ ಅನುಮೋದನೆ ನೀಡಿತು.ಭೂ ಪರಿವರ್ತನೆಗೆ ಮಂಜೂರಾತಿ ನೀಡಬಾರದು ಎಂದು ಉಸ್ತುವಾರಿ ಸಚಿವರಾಗಲಿ ಸ್ಥಳೀಯ ಶಾಸಕರಾಗಲಿ ಆದೇಶ ನೀಡಿಲ್ಲ ಎಂದು ಸಭೆಯಲ್ಲಿ ರೈತರಿಗೆ ಮನವರಿಕೆ ಮಾಡಿ ಕೊಡಲಾಯಿತು. <br /> <br /> ತುಂಡು ಭೂಮಿ ಪರಿವರ್ತನೆಗೆ120 ಅರ್ಜಿಗಳು ಬಂದಿವೆ. ಸೂಕ್ತ ಪರಿಶೀಲನೆ ಬಳಿಕ ಈ ಅರ್ಜಿಗಳನ್ನು ಮಂಜೂರು ಮಾಡಬೇಕು ಎಂದು ಜಿಲ್ಲಾಧಿಕಾರಿಯನ್ನು ವಿನಂತಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಜೂ.8ರಂದು ಕಂದಾಯ ಅಧಿಕಾರಿಗಳ ಸಭೆ ಕರೆದಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಭೂ ಪರಿವರ್ತನೆ ಸಂಬಂಧ ಉಂಟಾದ ಗೊಂದಲ ನಿವಾರಿಸುವ ಉದ್ದೇಶದಿಂದ ಸೋಮವಾರ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭೂ ಮಾಲೀಕರ ಸಭೆ ನಡೆಯಿತು. ಸಭೆಯಲ್ಲಿ ಭೂ ಪರಿವರ್ತನೆಗೆ ಏಕಗವಾಕ್ಷಿ ವ್ಯವಸ್ಥೆ ಜಾರಿಗೊಳಿಸಲು ನಿರ್ಣಯ ಕೈಗೊಳ್ಳಲಾಯಿತು. <br /> <br /> ತುಂಡು ಭೂಮಿಯ ಪರಿವರ್ತನೆಗೆ ಪರವಾನಿಗೆ ನೀಡದಿರುವ ಹಿನ್ನೆಲೆಯಲ್ಲಿ ನಗರದ ಸುತ್ತಮುತ್ತ ಅನೇಕ ಅಕ್ರಮ ನಿವೇಶನಗಳು ಸೃಷ್ಟಿಯಾಗುತ್ತಿದ್ದವು. ಇದನ್ನು ನಿಯಂತ್ರಿಸುವ ಉದ್ದೇಶದಿಂದ ಸಭೆ ಕರೆಯಲಾಗಿತ್ತು ಎಂದು ಹುಡಾ ಅಧ್ಯಕ್ಷ ನವಿಲೆ ಅಣ್ಣಪ್ಪ ತಿಳಿಸಿದರು.<br /> <br /> `ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿ ಹಲವು ತಿಂಗಳಾದರೂ ನಮಗೆ ಅನುಮತಿ ನೀಡಿಲ್ಲ. ಹೀಗಿದ್ದರೆ ನಾವು ಮನೆಗಳನ್ನು ನಿರ್ಮಿಸುವುದಾದರೂ ಹೇಗೆ? ಎಂದು ಸಭೆಯಲ್ಲಿದ್ದ ಭೂ ಮಾಲೀಕರು ಪ್ರಶ್ನಿಸಿದರು. <br /> ಶಾಸಕ ಎಚ್.ಎಸ್. ಪ್ರಕಾಶ್ ಮಾತನಾಡಿ, ಜಿಲ್ಲಾಡಳಿತ ಹಾಗೂ ಹುಡಾ ನಡುವೆ ಬಂದಿರುವ ಗೊಂದಲ ನಿವಾರಿಸಲು ಏಕಗವಾಕ್ಷಿ ವ್ಯವಸ್ಥೆ ಜಾರಿ ಮಾಡುವುದು ಸೂಕ್ತ. <br /> <br /> ಇದರಿಂದ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿ ಇಬ್ಬರೂ ಸೇರಿ ಶೀಘ್ರದಲ್ಲಿ ನಿರ್ಣಯ ಕೈಗೊಳ್ಳಬಹುದು~ ಎಂದರು. ಈ ಪ್ರಸ್ತಾಪಕ್ಕೆ ಸಭೆ ಅನುಮೋದನೆ ನೀಡಿತು.ಭೂ ಪರಿವರ್ತನೆಗೆ ಮಂಜೂರಾತಿ ನೀಡಬಾರದು ಎಂದು ಉಸ್ತುವಾರಿ ಸಚಿವರಾಗಲಿ ಸ್ಥಳೀಯ ಶಾಸಕರಾಗಲಿ ಆದೇಶ ನೀಡಿಲ್ಲ ಎಂದು ಸಭೆಯಲ್ಲಿ ರೈತರಿಗೆ ಮನವರಿಕೆ ಮಾಡಿ ಕೊಡಲಾಯಿತು. <br /> <br /> ತುಂಡು ಭೂಮಿ ಪರಿವರ್ತನೆಗೆ120 ಅರ್ಜಿಗಳು ಬಂದಿವೆ. ಸೂಕ್ತ ಪರಿಶೀಲನೆ ಬಳಿಕ ಈ ಅರ್ಜಿಗಳನ್ನು ಮಂಜೂರು ಮಾಡಬೇಕು ಎಂದು ಜಿಲ್ಲಾಧಿಕಾರಿಯನ್ನು ವಿನಂತಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಜೂ.8ರಂದು ಕಂದಾಯ ಅಧಿಕಾರಿಗಳ ಸಭೆ ಕರೆದಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>