<p><strong>ಬೆಂಗಳೂರು:</strong> ಭೂ ವಿವಾದಕ್ಕೆ ಸಂಬಂಧಿಸಿದಂತೆ ರೌಡಿಗಳಿಂದ ಪ್ರಾಣ ಬೆದರಿಕೆ ಇದ್ದ ಕಾರಣಕ್ಕೆ ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತ ಗೋಪಿ ಮತ್ತು ಕುಟುಂಬ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.<br /> <br /> ಗೋಪಿ ಮತ್ತು ಸಹೋದರರು ಬೈಯಪ್ಪನಹಳ್ಳಿ ಬಳಿಯ ಸಂಜೀವಪ್ಪ ಲೇಔಟ್ನ 10ನೇ ‘ಬಿ’ ಅಡ್ಡರಸ್ತೆಯ ಜಾಗದಲ್ಲಿ ಒಂದು ವರ್ಷದ ಹಿಂದೆ ಮನೆ ಕಟ್ಟಿಸಿದ್ದರು. ಆದರೆ, ಆ ಜಾಗದ ವಿಷಯವಾಗಿ ವಿವಾದವಿತ್ತು ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಆ ಜಾಗವನ್ನು ಕಬಳಿಸಲು ಪ್ರಯತ್ನ ನಡೆಸಿದ್ದ ಕೆಲ ವ್ಯಕ್ತಿಗಳು ರೌಡಿಗಳ ಮೂಲಕ ಗೋಪಿ ಅವರಿಗೆ ಕರೆ ಮಾಡಿಸಿ ಹಲವು ತಿಂಗಳುಗಳಿಂದ ಕೊಲೆ ಬೆದರಿಕೆ ಹಾಕಿಸುತ್ತಿದ್ದರು. ಅಲ್ಲದೆ, ಅವರ ಮಕ್ಕಳನ್ನು ಕೊಲೆ ಮಾಡುವುದಾಗಿಯೂ ಬೆದರಿಸಿದ್ದರು ಎಂದು ಗೊತ್ತಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.<br /> <br /> ‘ಗೋಪಿ ಅವರ ಮನೆಯ ಒಳಗಡೆ ಮತ್ತು ಬಾಗಿಲ ಬಳಿ ಅಳವಡಿಸಿದ್ದ ಸಿ.ಸಿ ಕ್ಯಾಮೆರಾದಲ್ಲಿ ದಾಖಲಾಗಿರುವ ದೃಶ್ಯಾವಳಿಯ ತುಣಕು ಹಾಗೂ ಅವರು ಬರೆದಿಟ್ಟಿರುವ ಪತ್ರವನ್ನು ಹೆಚ್ಚಿನ ಪರಿಶೀಲನೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ಕಳುಹಿಸಲಾಗಿದೆ’ ಎಂದು ಪೂರ್ವ ವಿಭಾಗದ ಡಿಸಿಪಿ ಡಾ.ಪಿ.ಎಸ್.ಹರ್ಷ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ‘ವೈದ್ಯರು ಮರಣೋತ್ತರ ಪರೀಕ್ಷೆಯ ವರದಿ ನೀಡಿದ ಬಳಿಕವಷ್ಟೇ ಆ ನಾಲ್ವರ ಸಾವಿನ ಸಮಯ ಮತ್ತಿತರ ಅಂಶಗಳ ಬಗ್ಗೆ ಮಾಹಿತಿ ಸಿಗಲಿದೆ’ ಎಂದು ಅವರು ಹೇಳಿದ್ದಾರೆ.<br /> <br /> ಪ್ರಕರಣ ಸಂಬಂಧ ಗೋಪಿ ಮತ್ತು ಕುಟುಂಬ ಸದಸ್ಯರ ಮೊಬೈಲ್ ಕರೆಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಅವರ ಸಂಬಂಧಿಕರು, ನೆರೆಹೊರೆಯವರು ಹಾಗೂ ಸ್ನೇಹಿತರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> ಪೊಲೀಸರು ಬೌರಿಂಗ್ ಆಸ್ಪತ್ರೆಯಲ್ಲಿ ಗೋಪಿ ಮತ್ತು ಕುಟುಂಬ ಸದಸ್ಯರ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಶವಗಳನ್ನು ಶುಕ್ರವಾರ ಸಂಬಂಧಿಕರಿಗೆ ಒಪ್ಪಿಸಿದರು. ಆ ನಂತರ ನಾಗವಾರಪಾಳ್ಯ ಸ್ಮಶಾನದಲ್ಲಿ ಸಾಮೂಹಿಕವಾಗಿ ಅವರ ಅಂತ್ಯಕ್ರಿಯೆ ನಡೆಸಲಾಯಿತು.<br /> <br /> <strong>ರೌಡಿಗಳ ಬೆದರಿಕೆ</strong></p>.<p>ಮನೆಯ ಜಾಗದ ವಿಷಯವಾಗಿ ರೌಡಿಗಳು ಕೊಲೆ ಬೆದರಿಕೆ ಹಾಕಿದ್ದ ಸಂಗತಿಯನ್ನು ಗೋಪಿ, ಒಂದು ತಿಂಗಳ ಹಿಂದೆ ನನಗೆ ತಿಳಿಸಿದ್ದ. ಆರ್ಥಿಕ ತೊಂದರೆಯ ಕಾರಣಕ್ಕೆ ಗೋಪಿ ಮತ್ತು ಕುಟುಂಬ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಬೇಕು.<br /> <strong>–ವಾಟಾಳ್ ನಾಗರಾಜ್, ಅಧ್ಯಕ್ಷರು, ಕನ್ನಡ ಚಳವಳಿ ವಾಟಾಳ್ ಪಕ್ಷ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭೂ ವಿವಾದಕ್ಕೆ ಸಂಬಂಧಿಸಿದಂತೆ ರೌಡಿಗಳಿಂದ ಪ್ರಾಣ ಬೆದರಿಕೆ ಇದ್ದ ಕಾರಣಕ್ಕೆ ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತ ಗೋಪಿ ಮತ್ತು ಕುಟುಂಬ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.<br /> <br /> ಗೋಪಿ ಮತ್ತು ಸಹೋದರರು ಬೈಯಪ್ಪನಹಳ್ಳಿ ಬಳಿಯ ಸಂಜೀವಪ್ಪ ಲೇಔಟ್ನ 10ನೇ ‘ಬಿ’ ಅಡ್ಡರಸ್ತೆಯ ಜಾಗದಲ್ಲಿ ಒಂದು ವರ್ಷದ ಹಿಂದೆ ಮನೆ ಕಟ್ಟಿಸಿದ್ದರು. ಆದರೆ, ಆ ಜಾಗದ ವಿಷಯವಾಗಿ ವಿವಾದವಿತ್ತು ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಆ ಜಾಗವನ್ನು ಕಬಳಿಸಲು ಪ್ರಯತ್ನ ನಡೆಸಿದ್ದ ಕೆಲ ವ್ಯಕ್ತಿಗಳು ರೌಡಿಗಳ ಮೂಲಕ ಗೋಪಿ ಅವರಿಗೆ ಕರೆ ಮಾಡಿಸಿ ಹಲವು ತಿಂಗಳುಗಳಿಂದ ಕೊಲೆ ಬೆದರಿಕೆ ಹಾಕಿಸುತ್ತಿದ್ದರು. ಅಲ್ಲದೆ, ಅವರ ಮಕ್ಕಳನ್ನು ಕೊಲೆ ಮಾಡುವುದಾಗಿಯೂ ಬೆದರಿಸಿದ್ದರು ಎಂದು ಗೊತ್ತಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.<br /> <br /> ‘ಗೋಪಿ ಅವರ ಮನೆಯ ಒಳಗಡೆ ಮತ್ತು ಬಾಗಿಲ ಬಳಿ ಅಳವಡಿಸಿದ್ದ ಸಿ.ಸಿ ಕ್ಯಾಮೆರಾದಲ್ಲಿ ದಾಖಲಾಗಿರುವ ದೃಶ್ಯಾವಳಿಯ ತುಣಕು ಹಾಗೂ ಅವರು ಬರೆದಿಟ್ಟಿರುವ ಪತ್ರವನ್ನು ಹೆಚ್ಚಿನ ಪರಿಶೀಲನೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ಕಳುಹಿಸಲಾಗಿದೆ’ ಎಂದು ಪೂರ್ವ ವಿಭಾಗದ ಡಿಸಿಪಿ ಡಾ.ಪಿ.ಎಸ್.ಹರ್ಷ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ‘ವೈದ್ಯರು ಮರಣೋತ್ತರ ಪರೀಕ್ಷೆಯ ವರದಿ ನೀಡಿದ ಬಳಿಕವಷ್ಟೇ ಆ ನಾಲ್ವರ ಸಾವಿನ ಸಮಯ ಮತ್ತಿತರ ಅಂಶಗಳ ಬಗ್ಗೆ ಮಾಹಿತಿ ಸಿಗಲಿದೆ’ ಎಂದು ಅವರು ಹೇಳಿದ್ದಾರೆ.<br /> <br /> ಪ್ರಕರಣ ಸಂಬಂಧ ಗೋಪಿ ಮತ್ತು ಕುಟುಂಬ ಸದಸ್ಯರ ಮೊಬೈಲ್ ಕರೆಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಅವರ ಸಂಬಂಧಿಕರು, ನೆರೆಹೊರೆಯವರು ಹಾಗೂ ಸ್ನೇಹಿತರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> ಪೊಲೀಸರು ಬೌರಿಂಗ್ ಆಸ್ಪತ್ರೆಯಲ್ಲಿ ಗೋಪಿ ಮತ್ತು ಕುಟುಂಬ ಸದಸ್ಯರ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಶವಗಳನ್ನು ಶುಕ್ರವಾರ ಸಂಬಂಧಿಕರಿಗೆ ಒಪ್ಪಿಸಿದರು. ಆ ನಂತರ ನಾಗವಾರಪಾಳ್ಯ ಸ್ಮಶಾನದಲ್ಲಿ ಸಾಮೂಹಿಕವಾಗಿ ಅವರ ಅಂತ್ಯಕ್ರಿಯೆ ನಡೆಸಲಾಯಿತು.<br /> <br /> <strong>ರೌಡಿಗಳ ಬೆದರಿಕೆ</strong></p>.<p>ಮನೆಯ ಜಾಗದ ವಿಷಯವಾಗಿ ರೌಡಿಗಳು ಕೊಲೆ ಬೆದರಿಕೆ ಹಾಕಿದ್ದ ಸಂಗತಿಯನ್ನು ಗೋಪಿ, ಒಂದು ತಿಂಗಳ ಹಿಂದೆ ನನಗೆ ತಿಳಿಸಿದ್ದ. ಆರ್ಥಿಕ ತೊಂದರೆಯ ಕಾರಣಕ್ಕೆ ಗೋಪಿ ಮತ್ತು ಕುಟುಂಬ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ. ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಬೇಕು.<br /> <strong>–ವಾಟಾಳ್ ನಾಗರಾಜ್, ಅಧ್ಯಕ್ಷರು, ಕನ್ನಡ ಚಳವಳಿ ವಾಟಾಳ್ ಪಕ್ಷ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>