<p>ಬಳ್ಳಾರಿ: ರಾಷ್ಟ್ರೀಯ ಗಣಿ ಅಭಿವೃದ್ಧಿ ನಿಗಮ (ಎನ್ಎಂಡಿಸಿ) ಆರಂಭಿಸಲಿರುವ ಉಕ್ಕು ಕಾರ್ಖಾನೆಗಾಗಿ ತಾಲ್ಲೂಕಿನ ವೇಣಿವೀರಾಪುರ, ಜಾನೆಕುಂಟೆ ಗ್ರಾಮ ವ್ಯಾಪ್ತಿಯ 1,100 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಕ್ರಮವನ್ನು ಕೈಬಿಡಬೇಕು ಎಂದು ಆಗ್ರಹಿಸಿ ರೈತರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದರು.<br /> <br /> ಎನ್ಎಂಡಿಸಿಯ ಉಕ್ಕಿನ ಕಾರ್ಖಾನೆಗಾಗಿ ಸರ್ಕಾರ 2,700 ಎಕರೆ ಭೂಮಿ ಸ್ವಾಧೀನಕ್ಕೆ ಆದೇಶ ನೀಡಿದ್ದು, ಉದ್ದೇಶಿತ ಭೂಮಿಯು ರಾಷ್ಟ್ರೀಯ ಹೆದ್ದಾರಿ-63ರ ಪಕ್ಕದಲ್ಲೇ ಇದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ ಅಲ್ಲಿಪುರ ಕೆರೆ ಮತ್ತು ಕೆಲವು ಶಿಕ್ಷಣ ಸಂಸ್ಥೆಗಳು, ಹೊರ ವರ್ತುಲ ರಸ್ತೆ ಮತ್ತಿತರ ಸಾರ್ವಜನಿಕ ಸ್ಥಳಗಳ ವ್ಯಾಪ್ತಿಯಲ್ಲಿಯೇ ಈ ಜಾಗ ಇದೆ. ಉದ್ದೇಶಿತ 2700 ಎಕರೆ ಭೂಮಿಯಲ್ಲಿ 1100 ಎಕರೆ ಭೂಮಿ ರಾಷ್ಟ್ರೀಯ ಹೆದ್ದಾರಿ-63ರ ಪಕ್ಕದಲ್ಲೇ ಇದ್ದು, ಹೆದ್ದಾರಿಯ 2 ಕಿ.ಮೀ. ಒಳಭಾಗದಲ್ಲಿ ಕೈಗಾರಿಕೆಗಾಗಿ ಭೂ ಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.<br /> <br /> ಕುಡುತಿನಿ ಗ್ರಾಮದ ಸುತ್ತ ಬ್ರಹ್ಮಿಣಿ, ಬಿಟಿಪಿಎಸ್, ಅರ್ಸೆಲರ್ ಮಿತ್ತಲ್ ಮತ್ತಿತರ ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ಈಗಾಗಲೇ ಒಟ್ಟು 11 ಸಾವಿರ ಎಕರೆಗೂ ಅಧಿಕ ಭೂಮಿ ಸ್ವಾಧೀನ ಪಡಿಸಿಕೊಂಡಿದ್ದು, ಇದೀಗ ಮತ್ತಷ್ಟು ಭೂಮಿ ವಶಪಡಿಸಿಕೊಳ್ಳುವುದು ಬೇಡ ಎಂದು ಅವರು ಮನವಿ ಮಾಡಿದ್ದಾರೆ.<br /> <br /> ಭೂಮಿಯ ಬೆಲೆ ಪ್ರತಿ ಎಕರೆಗೆ ಕನಿಷ್ಠ ರೂ 70ರಿಂದ 75 ಲಕ್ಷ ಇದ್ದು, ಕಡಿಮೆ ದರ ನೀಡಿ ಖರೀದಿಸಿದರೆ ರೈತರಿಗೆ ಸಮಸ್ಯೆ ಆಗಲಿದೆ ಎಂದಿದ್ದಾರೆ. ಮಹೇಶ ಅಗಿವಾಲ್, ಕೆ.ರಾಮಕೃಷ್ಣ, ರಾಮನಗೌಡ, ನಂದೀಶಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ರಾಷ್ಟ್ರೀಯ ಗಣಿ ಅಭಿವೃದ್ಧಿ ನಿಗಮ (ಎನ್ಎಂಡಿಸಿ) ಆರಂಭಿಸಲಿರುವ ಉಕ್ಕು ಕಾರ್ಖಾನೆಗಾಗಿ ತಾಲ್ಲೂಕಿನ ವೇಣಿವೀರಾಪುರ, ಜಾನೆಕುಂಟೆ ಗ್ರಾಮ ವ್ಯಾಪ್ತಿಯ 1,100 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಕ್ರಮವನ್ನು ಕೈಬಿಡಬೇಕು ಎಂದು ಆಗ್ರಹಿಸಿ ರೈತರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದರು.<br /> <br /> ಎನ್ಎಂಡಿಸಿಯ ಉಕ್ಕಿನ ಕಾರ್ಖಾನೆಗಾಗಿ ಸರ್ಕಾರ 2,700 ಎಕರೆ ಭೂಮಿ ಸ್ವಾಧೀನಕ್ಕೆ ಆದೇಶ ನೀಡಿದ್ದು, ಉದ್ದೇಶಿತ ಭೂಮಿಯು ರಾಷ್ಟ್ರೀಯ ಹೆದ್ದಾರಿ-63ರ ಪಕ್ಕದಲ್ಲೇ ಇದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ ಅಲ್ಲಿಪುರ ಕೆರೆ ಮತ್ತು ಕೆಲವು ಶಿಕ್ಷಣ ಸಂಸ್ಥೆಗಳು, ಹೊರ ವರ್ತುಲ ರಸ್ತೆ ಮತ್ತಿತರ ಸಾರ್ವಜನಿಕ ಸ್ಥಳಗಳ ವ್ಯಾಪ್ತಿಯಲ್ಲಿಯೇ ಈ ಜಾಗ ಇದೆ. ಉದ್ದೇಶಿತ 2700 ಎಕರೆ ಭೂಮಿಯಲ್ಲಿ 1100 ಎಕರೆ ಭೂಮಿ ರಾಷ್ಟ್ರೀಯ ಹೆದ್ದಾರಿ-63ರ ಪಕ್ಕದಲ್ಲೇ ಇದ್ದು, ಹೆದ್ದಾರಿಯ 2 ಕಿ.ಮೀ. ಒಳಭಾಗದಲ್ಲಿ ಕೈಗಾರಿಕೆಗಾಗಿ ಭೂ ಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.<br /> <br /> ಕುಡುತಿನಿ ಗ್ರಾಮದ ಸುತ್ತ ಬ್ರಹ್ಮಿಣಿ, ಬಿಟಿಪಿಎಸ್, ಅರ್ಸೆಲರ್ ಮಿತ್ತಲ್ ಮತ್ತಿತರ ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ಈಗಾಗಲೇ ಒಟ್ಟು 11 ಸಾವಿರ ಎಕರೆಗೂ ಅಧಿಕ ಭೂಮಿ ಸ್ವಾಧೀನ ಪಡಿಸಿಕೊಂಡಿದ್ದು, ಇದೀಗ ಮತ್ತಷ್ಟು ಭೂಮಿ ವಶಪಡಿಸಿಕೊಳ್ಳುವುದು ಬೇಡ ಎಂದು ಅವರು ಮನವಿ ಮಾಡಿದ್ದಾರೆ.<br /> <br /> ಭೂಮಿಯ ಬೆಲೆ ಪ್ರತಿ ಎಕರೆಗೆ ಕನಿಷ್ಠ ರೂ 70ರಿಂದ 75 ಲಕ್ಷ ಇದ್ದು, ಕಡಿಮೆ ದರ ನೀಡಿ ಖರೀದಿಸಿದರೆ ರೈತರಿಗೆ ಸಮಸ್ಯೆ ಆಗಲಿದೆ ಎಂದಿದ್ದಾರೆ. ಮಹೇಶ ಅಗಿವಾಲ್, ಕೆ.ರಾಮಕೃಷ್ಣ, ರಾಮನಗೌಡ, ನಂದೀಶಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>