<p><strong>ತಲಘಟ್ಟಪುರ:</strong> ಶತ ಶತಮಾನಗಳಿಂದ ಸೌಲಭ್ಯಗಳಿಂದ ವಂಚಿತವಾಗಿರುವ ಭೋವಿ ಜನಾಂಗದ ಅಭಿವೃದ್ಧಿಗೆ ಮೀಸಲಾತಿ ಅಗತ್ಯವಾಗಿದೆ ಎಂದು ಕರ್ನಾಟಕ ಪ್ರದೇಶ ಭೋವಿ ಕ್ಷೇಮಾಭ್ಯುದಯ ಸೇವಾ ಸಂಘದ ಅಧ್ಯಕ್ಷ ಎಸ್.ಚಿನ್ನಸ್ವಾಮಿ ಹೇಳಿದರು.<br /> <br /> ಕನಕಪುರ ರಸ್ತೆಯ ಗುಬ್ಬಲಾಳ ಕ್ರಾಸ್ನಲ್ಲಿ ಕರ್ನಾಟಕ ಪ್ರದೇಶ ಭೋವಿ ಕ್ಷೇಮಾಭ್ಯುದಯ ಸೇವಾ ಸಂಘ ಹಮ್ಮಿಕೊಂಡಿದ್ದ ಸಿದ್ದರಾಮೇಶ್ವರ 839ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ಸರ್ಕಾರ ಕೂಡಲೇ ಭೋವಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುಧಾನ ನೀಡಬೇಕು. ಹೊಟ್ಟೆಪಾಡಿಗಾಗಿ ಊರೂರು ಅಲೆಯುವ ಜನಾಂಗಕ್ಕೆ ಶಾಶ್ವತ ನೆಲೆ ಕಲ್ಪಿಸಬೇಕು. ಸಿದ್ದರಾಮೇಶ್ವರರ ಜಯಂತಿಗೆ ಸರ್ಕಾರಿ ರಜೆ ಘೋಷಣೆ ಮಾಡಬೇಕು~ಎಂದರು.<br /> <br /> `ಸಾವಿರಾರು ಕೆರೆ-ಕುಂಟೆ, ಗುಂಡು ತೋಪು, ಅಣೆಕಟ್ಟು ನಿರ್ಮಿಸಿದ ಕೀರ್ತಿ ಜನಾಂಗಕ್ಕೆ ಸಲ್ಲಬೇಕು. ರಾಜ್ಯ ಸರ್ಕಾರಕ್ಕೆ ಭೋವಿ ಜನಾಂಗಕ್ಕೆ ಎಲ್ಲ ರೀತಿಯ ಸಹಕಾರ ನೀಡಿದಾಗ ಮಾತ್ರ ಸಮುದಾಯ ಬೆಳವಣಿಗೆ ಹೊಂದಲು ಸಾಧ್ಯ~ ಎಂದು ಪ್ರಧಾನ ಕಾರ್ಯದರ್ಶಿ ಅಗ್ನಿ ಶ್ರೆನಿವಾಸ್ ಅಭಿಪ್ರಾಯಪಟ್ಟರು.<br /> <br /> ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ರವಿ, ನಗರ ಜಿಲ್ಲಾಧ್ಯಕ್ಷ ಪಿ.ಗಂಗರಾಜು, ಕಾನೂನು ಸಲಹೆಗಾರ ಎಂ.ಗೋಪಾಲ್, ಕೋಲಾರ ಜಿಲ್ಲಾಧ್ಯಕ್ಷ ಎಸ್.ಸೀನಪ್ಪ, ರಾಜ್ಯ ಉಪಾಧ್ಯಕ್ಷ ವೆಂಕಟೇಶ್, ಮುಖಂಡರಾದ ಅಣ್ಣಯ್ಯಪ್ಪ, ರವಿ ಮಾತನಾಡಿದರು. ಖಜಾಂಚಿ ಉಮೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಲಘಟ್ಟಪುರ:</strong> ಶತ ಶತಮಾನಗಳಿಂದ ಸೌಲಭ್ಯಗಳಿಂದ ವಂಚಿತವಾಗಿರುವ ಭೋವಿ ಜನಾಂಗದ ಅಭಿವೃದ್ಧಿಗೆ ಮೀಸಲಾತಿ ಅಗತ್ಯವಾಗಿದೆ ಎಂದು ಕರ್ನಾಟಕ ಪ್ರದೇಶ ಭೋವಿ ಕ್ಷೇಮಾಭ್ಯುದಯ ಸೇವಾ ಸಂಘದ ಅಧ್ಯಕ್ಷ ಎಸ್.ಚಿನ್ನಸ್ವಾಮಿ ಹೇಳಿದರು.<br /> <br /> ಕನಕಪುರ ರಸ್ತೆಯ ಗುಬ್ಬಲಾಳ ಕ್ರಾಸ್ನಲ್ಲಿ ಕರ್ನಾಟಕ ಪ್ರದೇಶ ಭೋವಿ ಕ್ಷೇಮಾಭ್ಯುದಯ ಸೇವಾ ಸಂಘ ಹಮ್ಮಿಕೊಂಡಿದ್ದ ಸಿದ್ದರಾಮೇಶ್ವರ 839ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ಸರ್ಕಾರ ಕೂಡಲೇ ಭೋವಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುಧಾನ ನೀಡಬೇಕು. ಹೊಟ್ಟೆಪಾಡಿಗಾಗಿ ಊರೂರು ಅಲೆಯುವ ಜನಾಂಗಕ್ಕೆ ಶಾಶ್ವತ ನೆಲೆ ಕಲ್ಪಿಸಬೇಕು. ಸಿದ್ದರಾಮೇಶ್ವರರ ಜಯಂತಿಗೆ ಸರ್ಕಾರಿ ರಜೆ ಘೋಷಣೆ ಮಾಡಬೇಕು~ಎಂದರು.<br /> <br /> `ಸಾವಿರಾರು ಕೆರೆ-ಕುಂಟೆ, ಗುಂಡು ತೋಪು, ಅಣೆಕಟ್ಟು ನಿರ್ಮಿಸಿದ ಕೀರ್ತಿ ಜನಾಂಗಕ್ಕೆ ಸಲ್ಲಬೇಕು. ರಾಜ್ಯ ಸರ್ಕಾರಕ್ಕೆ ಭೋವಿ ಜನಾಂಗಕ್ಕೆ ಎಲ್ಲ ರೀತಿಯ ಸಹಕಾರ ನೀಡಿದಾಗ ಮಾತ್ರ ಸಮುದಾಯ ಬೆಳವಣಿಗೆ ಹೊಂದಲು ಸಾಧ್ಯ~ ಎಂದು ಪ್ರಧಾನ ಕಾರ್ಯದರ್ಶಿ ಅಗ್ನಿ ಶ್ರೆನಿವಾಸ್ ಅಭಿಪ್ರಾಯಪಟ್ಟರು.<br /> <br /> ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ರವಿ, ನಗರ ಜಿಲ್ಲಾಧ್ಯಕ್ಷ ಪಿ.ಗಂಗರಾಜು, ಕಾನೂನು ಸಲಹೆಗಾರ ಎಂ.ಗೋಪಾಲ್, ಕೋಲಾರ ಜಿಲ್ಲಾಧ್ಯಕ್ಷ ಎಸ್.ಸೀನಪ್ಪ, ರಾಜ್ಯ ಉಪಾಧ್ಯಕ್ಷ ವೆಂಕಟೇಶ್, ಮುಖಂಡರಾದ ಅಣ್ಣಯ್ಯಪ್ಪ, ರವಿ ಮಾತನಾಡಿದರು. ಖಜಾಂಚಿ ಉಮೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>