<p>ಬೀದರ್: ವಿದ್ಯಾರ್ಥಿಗಳು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಬೇಕು ಎಂದು ಸಮಾಜ ಸೇವಕ ಚೆನ್ನಪ್ಪ ಸಂಗೋಳಗಿ ಸಲಹೆ ನೀಡಿದರು.<br /> <br /> ತಾಲ್ಲೂಕಿನ ರಾಜಗೀರಾ ಗ್ರಾಮದ ಮಾತೆ ಮಾಣಿಕೇಶ್ವರಿ ಆಶ್ರಯದಲ್ಲಿ ಈಚೆಗೆ ನಡೆದ ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. <br /> <br /> ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವ ಸಮಾಜ ಸೇವಕ ಅಣ್ಣ ಹಜಾರೆ ಅವರಂತೆ ಎಲ್ಲರೂ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದರು. ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಸೋಮಶೇಖರ ಬಿರಾದಾರ ಎನ್ಎಸ್ಎಸ್ ಶಿಬಿರದಿಂದ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸವಾಗಲಿದೆ ಎಂದರು.<br /> <br /> ಮಾತೆ ಮಾಣಿಕೇಶ್ವರಿ ಆಶ್ರಮದ ಸದಾನಂದ ಶಿವಯೋಗಿ, ಬಸವರಾಜ ಬಿರಾದಾರ ಮಾತನಾಡಿದರು. ಮಾಣಿಕರಾವ ಸೂರ್ಯವಂಶಿ. ಗಂಗಾಧರ ಕೋರಿ, ಡಾ. ಸಂಜೀವಕುಮಾರ. ರಾಜಕುಮಾರ ಹೊಸದೊಡ್ಡೆ, ಸಂಗಶೆಟ್ಟಿ ಶೆಟಕಾರ ಉಪಸ್ಥಿತರಿದ್ದರು. ಮಹೇಶಕುಮಾರ ನಿರೂಪಿಸಿದರು. ಮಂಜುಳಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ವಿದ್ಯಾರ್ಥಿಗಳು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಬೇಕು ಎಂದು ಸಮಾಜ ಸೇವಕ ಚೆನ್ನಪ್ಪ ಸಂಗೋಳಗಿ ಸಲಹೆ ನೀಡಿದರು.<br /> <br /> ತಾಲ್ಲೂಕಿನ ರಾಜಗೀರಾ ಗ್ರಾಮದ ಮಾತೆ ಮಾಣಿಕೇಶ್ವರಿ ಆಶ್ರಯದಲ್ಲಿ ಈಚೆಗೆ ನಡೆದ ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. <br /> <br /> ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವ ಸಮಾಜ ಸೇವಕ ಅಣ್ಣ ಹಜಾರೆ ಅವರಂತೆ ಎಲ್ಲರೂ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದರು. ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಸೋಮಶೇಖರ ಬಿರಾದಾರ ಎನ್ಎಸ್ಎಸ್ ಶಿಬಿರದಿಂದ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸವಾಗಲಿದೆ ಎಂದರು.<br /> <br /> ಮಾತೆ ಮಾಣಿಕೇಶ್ವರಿ ಆಶ್ರಮದ ಸದಾನಂದ ಶಿವಯೋಗಿ, ಬಸವರಾಜ ಬಿರಾದಾರ ಮಾತನಾಡಿದರು. ಮಾಣಿಕರಾವ ಸೂರ್ಯವಂಶಿ. ಗಂಗಾಧರ ಕೋರಿ, ಡಾ. ಸಂಜೀವಕುಮಾರ. ರಾಜಕುಮಾರ ಹೊಸದೊಡ್ಡೆ, ಸಂಗಶೆಟ್ಟಿ ಶೆಟಕಾರ ಉಪಸ್ಥಿತರಿದ್ದರು. ಮಹೇಶಕುಮಾರ ನಿರೂಪಿಸಿದರು. ಮಂಜುಳಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>