<p><strong>ಸುಳ್ಯ: </strong>ಕೇಂದ್ರದ ಯಪಿಎ ಸರ್ಕಾರದ ಸಚಿವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಿಗೂ, ರಾಜ್ಯ ಸರ್ಕಾರದ ಸಚಿವರ ವಿರುದ್ಧದ ಆರೋಪಗಳಿಗೂ ಬಹಳ ವ್ಯತ್ಯಾಸವಿದೆ. ಎರಡನ್ನೂ ಹೋಲಿಸಲಾಗದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಇಲ್ಲಿ ಪ್ರತಿಪಾದಿಸಿದರು.<br /> <br /> ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ ಇಲ್ಲಿನ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ಪ್ರೇರಿತವಾಗಿ ಬಿಜೆಪಿ ಮುಖಂಡರ ವಿರುದ್ಧ ಆರೋಪ ಹೊರಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಇವೆಲ್ಲವೂ ಖಾಸಗಿ ವ್ಯಕ್ತಿಗಳು ಸೃಷ್ಟಿಸುತ್ತಿರುವ ದೂರುಗಳು. ಕೇಂದ್ರದ ಯುಪಿಎ ಸರ್ಕಾರದಲ್ಲಿನ ಅವ್ಯವಹಾರಗಳನ್ನು ಬಯಲಿಗೆಳೆದಿದ್ದು ಖಾಸಗಿ ವ್ಯಕ್ತಿಗಳಲ್ಲ, ಸಂವಿಧಾನಾತ್ಮಕ ಸಂಸ್ಥೆಗಳು. <br /> <br /> ಈ ಸಂಸ್ಥೆಗಳೇ ತನಿಖೆ ನಡೆಸಿದಾಗ 2ಜಿ ತರಂಗಾಂತರ, ಆದರ್ಶ ಸೊಸೈಟಿ ಪ್ರಕರಣ ಸೇರಿದಂತೆ ಹಲವು ಹಗರಣ ಬಯಲಿಗೆ ಬಂದವು ಎಂದು ಅವರು ಕೇಂದ್ರ ಮತ್ತು ರಾಜ್ಯದ ಪರಿಸ್ಥಿತಿಯ ತುಲನೆ ಮಾಡಿದರು. <br /> <br /> ರಾಜಕಾರಣ ಎಂದರೆ ಸ್ವಜನ ಪಕ್ಷಪಾತ ಮಾಡುವುದಲ್ಲ, ಖಜಾನೆ ಲೂಟಿ ಮಾಡುವುದೂ ಅಲ್ಲ ಎಂಬ ಭಾವನೆ ಮೂಡಬೇಕಿದೆ. ವ್ಯವಸ್ಥೆ ಬದಲಾಗಬೇಕಾದರೆ ಮುಜುಗರ ಬದಿಗಿಟ್ಟು ಕೆಲಸ ಮಾಡಬೇಕಾಗಿದೆ. ಕಳೆದ ಎರಡೂವರೆ ತಿಂಗಳಿನಿಂದ ಆತ್ಮವಿಶ್ವಾಸದಿಂದ ಕೆಲಸ ಮಾಡಿದ್ದೇನೆ. ಅಭಿವೃದ್ಧಿ ಕೆಲಸಗಳ ಜತೆಗೇ ಅತಿವೃಷ್ಟಿ-ಬರದಿಂದ ಎದುರಾಗಿರುವ ಸಮಸ್ಯೆಗಳತ್ತಲೂ ಗಮನ ಹರಿಸಿ ಪರಿಹರಿಸಬೇಕಾಗಿದೆ ಎಂದರು. <br /> <br /> <strong>ಪುಸ್ತಕವಿರಲಿ-ಹಾರ ಬೇಡ:</strong> ಸಭೆ ಆರಂಭವಾಗುತ್ತಿದ್ದಂತೆಯೇ ಡಿ.ವಿ.ಸದಾನಂದ ಗೌಡ ಅವರಿಗೆ ಪಕ್ಷದ ವಿವಿಧ ಘಟಕಗಳ ಮುಖಂಡರು, ಕಾರ್ಯಕರ್ತರು ಹೂವಿನ ಹಾರ ಹಾಕಿ ಸನ್ಮಾನಿಸಿದರು. ~ಪ್ರತಿ ಬಾರಿ ಬಂದಾಗಲೂ ಹಾರ ಹಾಕುವುದು ಬೇಡ. ಅದರ ಬದಲು ಪುಸ್ತಕ ಕೊಡುವ ಪರಿಪಾಠ ಬೆಳೆಸಿಕೊಳ್ಳಿ~ ಎಂದು ಕಿವಿಮಾತು ಹೇಳಿದರು.<br /> <br /> <strong>ಎಬಿವಿಪಿ ಪ್ರತಿಭಟನೆ:</strong> ಇದೇ ವೇಳೆ ಮುಖ್ಯಮಂತ್ರಿಗಳು ತಮ್ಮವರಿಂದಲೇ ಪ್ರತಿಭಟನೆ ಎದುರಿಸಬೇಕಾಯಿತು. ಸಭೆ ಮುಗಿಯುತ್ತಿದ್ದಂತೆ ಧಾವಿಸಿದ ಎಬಿವಿಪಿ ಕಾರ್ಯಕರ್ತರು, ಪೊಲೀಸ್ ಇನ್ಸ್ಪೆಕ್ಟರ್ ಪ್ರವೀಣ ನೀಲಮ್ಮನವರ ಅವರನ್ನು ತಕ್ಷಣ ವರ್ಗ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.<br /> <br /> <strong>`24/7 ಕಂಪ್ಲೇಟ್ ಸೆಲ್~</strong><br /> ಇದಕ್ಕೂ ಮುನ್ನ ಸುಳ್ಯದ ಖಾಸಗಿ ಶಾಲೆ ಅಂಗಳದಲ್ಲಿ ನಿರ್ಮಿಸಿದ್ದ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿಗಳು, ಸರ್ಕಾರದ ಇಲಾಖೆಗಳಿಗೆ ಸಂಬಂಧಿಸಿ ಸಮಸ್ಯೆಗಳೇನಾದರೂ ಇದ್ದರೆ ಸಾರ್ವಜನಿಕರು ದಿನದ ಯಾವುದೇ ಸಮಯದಲ್ಲಿ ದೂರು ದಾಖಲಿಸಬಹುದು. ಇದಕ್ಕಾಗಿಯೇ ~24/7 ದೂರು ಕೇಂದ್ರ~ ನವೆಂಬರ್ 1ರಂದು ಆರಂಭವಾಗಲಿದೆ ಎಂದರು. <br /> <br /> ನಾಗರಿಕ ಸನ್ನದು, 15 ದಿನಗಳಲ್ಲಿ ಕಡತ ವಿಲೇವಾರಿ ವ್ಯವಸ್ಥೆ ಬಗ್ಗೆ ಇದೇ 28ರಂದು ಸಚಿವ ಸಂಪುಟದ ಸಭೆ ಅನುಮೋದನೆ ಪಡೆಯಲಾಗುವುದು. ಈಗಾಗಲೇ ಮಂಡ್ಯ ಹಾಗೂ ಶಿವಮೊಗ್ಗದ ಜಿಲ್ಲಾಧಿಕಾರಿಗಳೇ ಬಹಳ ಉತ್ಸಾಹದಿಂದ ಈ ವ್ಯವಸ್ಥೆಯನ್ನು ತಮ್ಮ ಕಚೇರಿಯಲ್ಲಿ ಜಾರಿಗೊಳಿಸಿದ್ದಾರೆ. ಪಾರದರ್ಶಕ ಆಡಳಿತಕ್ಕೆ ಇದು ಅತ್ಯಗತ್ಯ ಎಂದು ಹೇಳಿದರು.<br /> <br /> <strong>ಸೋಮವಾರದಿಂದ ವೆಬ್ಸೈಟ್:</strong> ಗೃಹ ಕಚೇರಿ ಕೃಷ್ಣಾದಲ್ಲಿ ಈಗಾಗಲೇ ಸಿಸಿ ಕ್ಯಾಮೆರಾ ಅಳವಡಿಸಿ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಲಾಗಿದೆ. ಮುಖ್ಯಮಂತ್ರಿಗಳ ವೆಬ್ಸೈಟ್ ಸಹ ಆರಂಭಗೊಳ್ಳಲಿದ್ದು, ಸೋಮವಾರದಿಂದ ಸಾರ್ವಜನಿಕರಿಗೆ ವೀಕ್ಷಣೆಗೆ ಸಿಗಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಳ್ಯ: </strong>ಕೇಂದ್ರದ ಯಪಿಎ ಸರ್ಕಾರದ ಸಚಿವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಿಗೂ, ರಾಜ್ಯ ಸರ್ಕಾರದ ಸಚಿವರ ವಿರುದ್ಧದ ಆರೋಪಗಳಿಗೂ ಬಹಳ ವ್ಯತ್ಯಾಸವಿದೆ. ಎರಡನ್ನೂ ಹೋಲಿಸಲಾಗದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಇಲ್ಲಿ ಪ್ರತಿಪಾದಿಸಿದರು.<br /> <br /> ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ ಇಲ್ಲಿನ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ಪ್ರೇರಿತವಾಗಿ ಬಿಜೆಪಿ ಮುಖಂಡರ ವಿರುದ್ಧ ಆರೋಪ ಹೊರಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಇವೆಲ್ಲವೂ ಖಾಸಗಿ ವ್ಯಕ್ತಿಗಳು ಸೃಷ್ಟಿಸುತ್ತಿರುವ ದೂರುಗಳು. ಕೇಂದ್ರದ ಯುಪಿಎ ಸರ್ಕಾರದಲ್ಲಿನ ಅವ್ಯವಹಾರಗಳನ್ನು ಬಯಲಿಗೆಳೆದಿದ್ದು ಖಾಸಗಿ ವ್ಯಕ್ತಿಗಳಲ್ಲ, ಸಂವಿಧಾನಾತ್ಮಕ ಸಂಸ್ಥೆಗಳು. <br /> <br /> ಈ ಸಂಸ್ಥೆಗಳೇ ತನಿಖೆ ನಡೆಸಿದಾಗ 2ಜಿ ತರಂಗಾಂತರ, ಆದರ್ಶ ಸೊಸೈಟಿ ಪ್ರಕರಣ ಸೇರಿದಂತೆ ಹಲವು ಹಗರಣ ಬಯಲಿಗೆ ಬಂದವು ಎಂದು ಅವರು ಕೇಂದ್ರ ಮತ್ತು ರಾಜ್ಯದ ಪರಿಸ್ಥಿತಿಯ ತುಲನೆ ಮಾಡಿದರು. <br /> <br /> ರಾಜಕಾರಣ ಎಂದರೆ ಸ್ವಜನ ಪಕ್ಷಪಾತ ಮಾಡುವುದಲ್ಲ, ಖಜಾನೆ ಲೂಟಿ ಮಾಡುವುದೂ ಅಲ್ಲ ಎಂಬ ಭಾವನೆ ಮೂಡಬೇಕಿದೆ. ವ್ಯವಸ್ಥೆ ಬದಲಾಗಬೇಕಾದರೆ ಮುಜುಗರ ಬದಿಗಿಟ್ಟು ಕೆಲಸ ಮಾಡಬೇಕಾಗಿದೆ. ಕಳೆದ ಎರಡೂವರೆ ತಿಂಗಳಿನಿಂದ ಆತ್ಮವಿಶ್ವಾಸದಿಂದ ಕೆಲಸ ಮಾಡಿದ್ದೇನೆ. ಅಭಿವೃದ್ಧಿ ಕೆಲಸಗಳ ಜತೆಗೇ ಅತಿವೃಷ್ಟಿ-ಬರದಿಂದ ಎದುರಾಗಿರುವ ಸಮಸ್ಯೆಗಳತ್ತಲೂ ಗಮನ ಹರಿಸಿ ಪರಿಹರಿಸಬೇಕಾಗಿದೆ ಎಂದರು. <br /> <br /> <strong>ಪುಸ್ತಕವಿರಲಿ-ಹಾರ ಬೇಡ:</strong> ಸಭೆ ಆರಂಭವಾಗುತ್ತಿದ್ದಂತೆಯೇ ಡಿ.ವಿ.ಸದಾನಂದ ಗೌಡ ಅವರಿಗೆ ಪಕ್ಷದ ವಿವಿಧ ಘಟಕಗಳ ಮುಖಂಡರು, ಕಾರ್ಯಕರ್ತರು ಹೂವಿನ ಹಾರ ಹಾಕಿ ಸನ್ಮಾನಿಸಿದರು. ~ಪ್ರತಿ ಬಾರಿ ಬಂದಾಗಲೂ ಹಾರ ಹಾಕುವುದು ಬೇಡ. ಅದರ ಬದಲು ಪುಸ್ತಕ ಕೊಡುವ ಪರಿಪಾಠ ಬೆಳೆಸಿಕೊಳ್ಳಿ~ ಎಂದು ಕಿವಿಮಾತು ಹೇಳಿದರು.<br /> <br /> <strong>ಎಬಿವಿಪಿ ಪ್ರತಿಭಟನೆ:</strong> ಇದೇ ವೇಳೆ ಮುಖ್ಯಮಂತ್ರಿಗಳು ತಮ್ಮವರಿಂದಲೇ ಪ್ರತಿಭಟನೆ ಎದುರಿಸಬೇಕಾಯಿತು. ಸಭೆ ಮುಗಿಯುತ್ತಿದ್ದಂತೆ ಧಾವಿಸಿದ ಎಬಿವಿಪಿ ಕಾರ್ಯಕರ್ತರು, ಪೊಲೀಸ್ ಇನ್ಸ್ಪೆಕ್ಟರ್ ಪ್ರವೀಣ ನೀಲಮ್ಮನವರ ಅವರನ್ನು ತಕ್ಷಣ ವರ್ಗ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.<br /> <br /> <strong>`24/7 ಕಂಪ್ಲೇಟ್ ಸೆಲ್~</strong><br /> ಇದಕ್ಕೂ ಮುನ್ನ ಸುಳ್ಯದ ಖಾಸಗಿ ಶಾಲೆ ಅಂಗಳದಲ್ಲಿ ನಿರ್ಮಿಸಿದ್ದ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿಗಳು, ಸರ್ಕಾರದ ಇಲಾಖೆಗಳಿಗೆ ಸಂಬಂಧಿಸಿ ಸಮಸ್ಯೆಗಳೇನಾದರೂ ಇದ್ದರೆ ಸಾರ್ವಜನಿಕರು ದಿನದ ಯಾವುದೇ ಸಮಯದಲ್ಲಿ ದೂರು ದಾಖಲಿಸಬಹುದು. ಇದಕ್ಕಾಗಿಯೇ ~24/7 ದೂರು ಕೇಂದ್ರ~ ನವೆಂಬರ್ 1ರಂದು ಆರಂಭವಾಗಲಿದೆ ಎಂದರು. <br /> <br /> ನಾಗರಿಕ ಸನ್ನದು, 15 ದಿನಗಳಲ್ಲಿ ಕಡತ ವಿಲೇವಾರಿ ವ್ಯವಸ್ಥೆ ಬಗ್ಗೆ ಇದೇ 28ರಂದು ಸಚಿವ ಸಂಪುಟದ ಸಭೆ ಅನುಮೋದನೆ ಪಡೆಯಲಾಗುವುದು. ಈಗಾಗಲೇ ಮಂಡ್ಯ ಹಾಗೂ ಶಿವಮೊಗ್ಗದ ಜಿಲ್ಲಾಧಿಕಾರಿಗಳೇ ಬಹಳ ಉತ್ಸಾಹದಿಂದ ಈ ವ್ಯವಸ್ಥೆಯನ್ನು ತಮ್ಮ ಕಚೇರಿಯಲ್ಲಿ ಜಾರಿಗೊಳಿಸಿದ್ದಾರೆ. ಪಾರದರ್ಶಕ ಆಡಳಿತಕ್ಕೆ ಇದು ಅತ್ಯಗತ್ಯ ಎಂದು ಹೇಳಿದರು.<br /> <br /> <strong>ಸೋಮವಾರದಿಂದ ವೆಬ್ಸೈಟ್:</strong> ಗೃಹ ಕಚೇರಿ ಕೃಷ್ಣಾದಲ್ಲಿ ಈಗಾಗಲೇ ಸಿಸಿ ಕ್ಯಾಮೆರಾ ಅಳವಡಿಸಿ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಲಾಗಿದೆ. ಮುಖ್ಯಮಂತ್ರಿಗಳ ವೆಬ್ಸೈಟ್ ಸಹ ಆರಂಭಗೊಳ್ಳಲಿದ್ದು, ಸೋಮವಾರದಿಂದ ಸಾರ್ವಜನಿಕರಿಗೆ ವೀಕ್ಷಣೆಗೆ ಸಿಗಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>