<p><strong>ಬೆಂಗಳೂರು: </strong>ವಿಶ್ವ ಸಂಸ್ಥೆಯ ಮಾರ್ಗದರ್ಶನದ ಮೇಲೆ ಬ್ರಿಟನ್ನಲ್ಲಿ ಅನುಸರಿಸುತ್ತಿರುವ ಭ್ರಷ್ಟಾಚಾರ ತಡೆ ಕಾನೂನನ್ನು ಭಾರತದಲ್ಲಿಯೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರಿಂದ ಮಾತ್ರ ಪ್ರಧಾನಿ ಕಚೇರಿಯಿಂದ ಹಿಡಿದು ಕೆಳಹಂತದವರೆಗಿನ ಭ್ರಷ್ಟಾಚಾರವನ್ನು ಕೊನೆಗಾಣಿಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ ಗುರುವಾರ ಇಲ್ಲಿ ಅಭಿಪ್ರಾಯಪಟ್ಟರು.<br /> <br /> ಬೆಂಗಳೂರು ನಿರ್ವಹಣಾ ಸಂಸ್ಥೆಯು ಹಮ್ಮಿಕೊಂಡಿದ್ದ `ನಿರ್ವಹಣೆಯಲ್ಲಿ ಪಾರದರ್ಶಕತೆ ಹಾಗೂ ನೈತಿಕತೆ~ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಬ್ರಿಟನ್ನಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗುವ ಪ್ರಧಾನಿಯನ್ನೂ ಸ್ವತಂತ್ರ ತನಿಖಾ ಸಂಸ್ಥೆಗಳು ತನಿಖೆಗೊಳಪಡಿಸಲು ಅವಕಾಶವಿದೆ. ಅಲ್ಲದೆ, ಪ್ರತ್ಯೇಕ ನ್ಯಾಯಾಲಯಗಳು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ವಿಚಾರಣೆ ನಡೆಸಲಿವೆ. ಇದರಿಂದ ಯಾರ ವಿರುದ್ಧವೇ ಆಗಲಿ ವಿಚಾರಣೆ ನಡೆಸಲು ಸರ್ಕಾರದ ಅನುಮತಿ ಪಡೆಯುವ ಅಗತ್ಯವಿರುವುದಿಲ್ಲ~ ಎಂದು ಹೇಳಿದರು.<br /> <br /> `ಈ ಕಾನೂನಿನ ಪ್ರಕಾರ ಲಂಚ ಸ್ವೀಕಾರಕ್ಕೆ ಪ್ರಚೋದಿಸುವುದು, ಆಹ್ವಾನಿಸುವುದು ಹಾಗೂ ಲಂಚ ಸ್ವೀಕರಿಸುವುದು ಕೂಡ ಅಪರಾಧ. ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಭ್ರಷ್ಟಾಚಾರ ತಡೆಗೆ ಸಹಕಾರಿಯಾಗಲಿದೆ~ ಎಂದರು.<br /> <br /> <strong>ಭ್ರಷ್ಟಾಚಾರ: ಭಾರತಕ್ಕೆ 67ನೇ ಸ್ಥಾನ</strong><br /> 2010ರ ಭ್ರಷ್ಟಾಚಾರ ಸೂಚ್ಯಂಕದ ಮಾಹಿತಿ ಪ್ರಕಾರ, ವಿಶ್ವದಲ್ಲಿ ಡೆನ್ಮಾರ್ಕ್, ಸಿಂಗಾಪುರ ಹಾಗೂ ನ್ಯೂಜಿಲೆಂಡ್ ದೇಶಗಳಲ್ಲಿ ಮಾತ್ರ ಭ್ರಷ್ಟಾಚಾರ ಶೇ 7ಕ್ಕಿಂತ ಕಡಿಮೆಯಿದೆ. ಇತರ 145 ರಾಷ್ಟ್ರಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿ ಹೆಚ್ಚುತ್ತಿದೆ. <br /> <br /> ಭ್ರಷ್ಟಾಚಾರದಲ್ಲಿ ಇಂಗ್ಲೆಂಡ್ 24, ಅಮೆರಿಕ 27ನೇ ಸ್ಥಾನದಲ್ಲಿದ್ದರೆ, ಭಾರತ 67ನೇ ಸ್ಥಾನದಲ್ಲಿದೆ. ಬಾಂಗ್ಲಾ ಹಾಗೂ ಪಾಕಿಸ್ತಾನ 76ನೇ ಸ್ಥಾನ ಹಂಚಿಕೊಂಡಿದ್ದರೆ, ಸೊಮಾಲಿಯಾ 87ನೇ ಸ್ಥಾನದಲ್ಲಿದೆ ಎಂದು ಅವರು ಅಂಕಿ-ಅಂಶಗಳ ಸಹಿತ ವಿಶ್ವದ ಪ್ರಮುಖ ರಾಷ್ಟ್ರಗಳ ಭ್ರಷ್ಟಾಚಾರ ಪ್ರಮಾಣವನ್ನು ಬಹಿರಂಗಪಡಿಸಿದರು.<br /> <strong><br /> ಲೋಕಾಯುಕ್ತಕ್ಕೆ ಪರಮಾಧಿಕಾರ ನೀಡಿ:</strong><br /> `ಲೋಕಾಯುಕ್ತಕ್ಕೆ ಪರಮಾಧಿಕಾರ ನೀಡುವಂತೆ ನಾನಿದ್ದಾಗಲಿಂದಲೂ ಸತತ ಹೋರಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಲು ಸ್ವತಃ ಮುಖ್ಯಮಂತ್ರಿಗಳೇ ಅಧಿವೇಶನದಲ್ಲಿ ವಿರೋಧ ವ್ಯಕ್ತಪಡಿಸುವ ಮೂಲಕ ಅಧಿಕಾರಿಗಳ ಬೆಂಬಲಕ್ಕೆ ನಿಂತರು~ ಎಂದು ನೊಂದು ನುಡಿದರು.<br /> <br /> ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ. ಜೈರಾಜ್ ಮಾತನಾಡಿ, `ಸರ್ಕಾರಿ ಹಾಗೂ ಖಾಸಗಿ ವಲಯಗಳೆರಡಲ್ಲಿಯೂ ಪಾರದರ್ಶಕತೆ ಹಾಗೂ ನೈತಿಕತೆ ಮುಖ್ಯವಾದುದು. ಕಾರ್ಪೊರೇಟ್ ಸಂಸ್ಥೆಗಳು ಕೂಡ ಹಿಂದುಳಿಯದಿದ್ದರೆ ಭ್ರಷ್ಟಾಚಾರ ಮುಕ್ತ ಆಡಳಿತ ನಿರ್ವಹಣೆ ನೀಡಲು ಸಾಧ್ಯವಾಗುತ್ತದೆ~ ಎಂದರು.<br /> <br /> ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತ ಹಾಗೂ ಕಾರ್ಯಾಗಾರದ ಅಧ್ಯಕ್ಷ ಪ್ರದೀಪ್ಸಿಂಗ್ ಕರೋಲಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೆಂಗೂರು ನಿರ್ವಹಣಾ ಸಂಸ್ಥೆಯ ಅಧ್ಯಕ್ಷ ಎನ್.ಡಿ. ವೀರಣ್ಣಗೌಡ ಸ್ವಾಗತಿಸಿದರು. ಸಂಸ್ಥೆಯ ಮಾಜಿ ಅಧ್ಯಕ್ಷ ರಮಾನಂದ್, ಹಿರಿಯ ಉಪಾಧ್ಯಕ್ಷ ನಂಜೇಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿಶ್ವ ಸಂಸ್ಥೆಯ ಮಾರ್ಗದರ್ಶನದ ಮೇಲೆ ಬ್ರಿಟನ್ನಲ್ಲಿ ಅನುಸರಿಸುತ್ತಿರುವ ಭ್ರಷ್ಟಾಚಾರ ತಡೆ ಕಾನೂನನ್ನು ಭಾರತದಲ್ಲಿಯೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರಿಂದ ಮಾತ್ರ ಪ್ರಧಾನಿ ಕಚೇರಿಯಿಂದ ಹಿಡಿದು ಕೆಳಹಂತದವರೆಗಿನ ಭ್ರಷ್ಟಾಚಾರವನ್ನು ಕೊನೆಗಾಣಿಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ ಗುರುವಾರ ಇಲ್ಲಿ ಅಭಿಪ್ರಾಯಪಟ್ಟರು.<br /> <br /> ಬೆಂಗಳೂರು ನಿರ್ವಹಣಾ ಸಂಸ್ಥೆಯು ಹಮ್ಮಿಕೊಂಡಿದ್ದ `ನಿರ್ವಹಣೆಯಲ್ಲಿ ಪಾರದರ್ಶಕತೆ ಹಾಗೂ ನೈತಿಕತೆ~ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಬ್ರಿಟನ್ನಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗುವ ಪ್ರಧಾನಿಯನ್ನೂ ಸ್ವತಂತ್ರ ತನಿಖಾ ಸಂಸ್ಥೆಗಳು ತನಿಖೆಗೊಳಪಡಿಸಲು ಅವಕಾಶವಿದೆ. ಅಲ್ಲದೆ, ಪ್ರತ್ಯೇಕ ನ್ಯಾಯಾಲಯಗಳು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ವಿಚಾರಣೆ ನಡೆಸಲಿವೆ. ಇದರಿಂದ ಯಾರ ವಿರುದ್ಧವೇ ಆಗಲಿ ವಿಚಾರಣೆ ನಡೆಸಲು ಸರ್ಕಾರದ ಅನುಮತಿ ಪಡೆಯುವ ಅಗತ್ಯವಿರುವುದಿಲ್ಲ~ ಎಂದು ಹೇಳಿದರು.<br /> <br /> `ಈ ಕಾನೂನಿನ ಪ್ರಕಾರ ಲಂಚ ಸ್ವೀಕಾರಕ್ಕೆ ಪ್ರಚೋದಿಸುವುದು, ಆಹ್ವಾನಿಸುವುದು ಹಾಗೂ ಲಂಚ ಸ್ವೀಕರಿಸುವುದು ಕೂಡ ಅಪರಾಧ. ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಭ್ರಷ್ಟಾಚಾರ ತಡೆಗೆ ಸಹಕಾರಿಯಾಗಲಿದೆ~ ಎಂದರು.<br /> <br /> <strong>ಭ್ರಷ್ಟಾಚಾರ: ಭಾರತಕ್ಕೆ 67ನೇ ಸ್ಥಾನ</strong><br /> 2010ರ ಭ್ರಷ್ಟಾಚಾರ ಸೂಚ್ಯಂಕದ ಮಾಹಿತಿ ಪ್ರಕಾರ, ವಿಶ್ವದಲ್ಲಿ ಡೆನ್ಮಾರ್ಕ್, ಸಿಂಗಾಪುರ ಹಾಗೂ ನ್ಯೂಜಿಲೆಂಡ್ ದೇಶಗಳಲ್ಲಿ ಮಾತ್ರ ಭ್ರಷ್ಟಾಚಾರ ಶೇ 7ಕ್ಕಿಂತ ಕಡಿಮೆಯಿದೆ. ಇತರ 145 ರಾಷ್ಟ್ರಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿ ಹೆಚ್ಚುತ್ತಿದೆ. <br /> <br /> ಭ್ರಷ್ಟಾಚಾರದಲ್ಲಿ ಇಂಗ್ಲೆಂಡ್ 24, ಅಮೆರಿಕ 27ನೇ ಸ್ಥಾನದಲ್ಲಿದ್ದರೆ, ಭಾರತ 67ನೇ ಸ್ಥಾನದಲ್ಲಿದೆ. ಬಾಂಗ್ಲಾ ಹಾಗೂ ಪಾಕಿಸ್ತಾನ 76ನೇ ಸ್ಥಾನ ಹಂಚಿಕೊಂಡಿದ್ದರೆ, ಸೊಮಾಲಿಯಾ 87ನೇ ಸ್ಥಾನದಲ್ಲಿದೆ ಎಂದು ಅವರು ಅಂಕಿ-ಅಂಶಗಳ ಸಹಿತ ವಿಶ್ವದ ಪ್ರಮುಖ ರಾಷ್ಟ್ರಗಳ ಭ್ರಷ್ಟಾಚಾರ ಪ್ರಮಾಣವನ್ನು ಬಹಿರಂಗಪಡಿಸಿದರು.<br /> <strong><br /> ಲೋಕಾಯುಕ್ತಕ್ಕೆ ಪರಮಾಧಿಕಾರ ನೀಡಿ:</strong><br /> `ಲೋಕಾಯುಕ್ತಕ್ಕೆ ಪರಮಾಧಿಕಾರ ನೀಡುವಂತೆ ನಾನಿದ್ದಾಗಲಿಂದಲೂ ಸತತ ಹೋರಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಲು ಸ್ವತಃ ಮುಖ್ಯಮಂತ್ರಿಗಳೇ ಅಧಿವೇಶನದಲ್ಲಿ ವಿರೋಧ ವ್ಯಕ್ತಪಡಿಸುವ ಮೂಲಕ ಅಧಿಕಾರಿಗಳ ಬೆಂಬಲಕ್ಕೆ ನಿಂತರು~ ಎಂದು ನೊಂದು ನುಡಿದರು.<br /> <br /> ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ. ಜೈರಾಜ್ ಮಾತನಾಡಿ, `ಸರ್ಕಾರಿ ಹಾಗೂ ಖಾಸಗಿ ವಲಯಗಳೆರಡಲ್ಲಿಯೂ ಪಾರದರ್ಶಕತೆ ಹಾಗೂ ನೈತಿಕತೆ ಮುಖ್ಯವಾದುದು. ಕಾರ್ಪೊರೇಟ್ ಸಂಸ್ಥೆಗಳು ಕೂಡ ಹಿಂದುಳಿಯದಿದ್ದರೆ ಭ್ರಷ್ಟಾಚಾರ ಮುಕ್ತ ಆಡಳಿತ ನಿರ್ವಹಣೆ ನೀಡಲು ಸಾಧ್ಯವಾಗುತ್ತದೆ~ ಎಂದರು.<br /> <br /> ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತ ಹಾಗೂ ಕಾರ್ಯಾಗಾರದ ಅಧ್ಯಕ್ಷ ಪ್ರದೀಪ್ಸಿಂಗ್ ಕರೋಲಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೆಂಗೂರು ನಿರ್ವಹಣಾ ಸಂಸ್ಥೆಯ ಅಧ್ಯಕ್ಷ ಎನ್.ಡಿ. ವೀರಣ್ಣಗೌಡ ಸ್ವಾಗತಿಸಿದರು. ಸಂಸ್ಥೆಯ ಮಾಜಿ ಅಧ್ಯಕ್ಷ ರಮಾನಂದ್, ಹಿರಿಯ ಉಪಾಧ್ಯಕ್ಷ ನಂಜೇಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>